ಕೋಲಾರ: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀರ್ಪು ಬಂದಿದೆ. ಕಾನೂನಿಗೆ ಗೌರವ ಕೊಟ್ಟು ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಅಧಿಕಾರದಿಂದ ದೂರ ಇದ್ದು ತನಿಖೆಗೆ ಸಹಕರಿಸಬೇಕು ಎಂದು ಕುಡಾ ಮಾಜಿ ಅಧ್ಯಕ್ಷ ಹಾಗೂ ಕುರುಬ ಸಮಾಜದ ಮುಖಂಡ ಓಂಶಕ್ತಿ ಚಲಪತಿ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು, ಸಿದ್ದರಾಮಯ್ಯ ಅವರ ಅಧಿಕಾರ ಅವಧಿಯಲ್ಲಿ ಯಾವುದೇ ತಪ್ಪು ಮಾಡಿಯೇ ಇಲ್ಲ ಎಂದು ಸಿದ್ಧರಾಮಯ್ಯ ನವರೇ ಹೇಳುತ್ತಿದ್ದಾರೆ ಆದರೆ ಅವರು ನ್ಯಾಯಾಲಯದ ಆದೇಶಕ್ಕೆ ಗೌರವ ಕೊಡಬೇಕು ಕುರುಬ ಸಮಾಜದ ಪ್ರಭಾವಿ ಮುಖಂಡರಾಗಿದ್ದು ಎಷ್ಟೇ ಕಳಂಕರಹಿತರಾಗಿದ್ದರೂ ಸಮುದಾಯದ ಹಿತದೃಷ್ಟಿಯಿಂದ ರಾಜೀನಾಮೆ ಕೊಟ್ಟು ತನಿಖೆ ಮುಗಿಸಿ ಕ್ಲೀನ್ ಚಿಟ್ ಪಡೆದ ಬಳಿಕ ಮತ್ತೆ ಮುಖ್ಯಮಂತ್ರಿಯಾಗಿ ಬರಲಿ ಎಂದರು.
ಮುಡಾ ಹಗರಣದಲ್ಲಿ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ ಜೊತೆಗೆ ಪ್ರಕರಣದ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಲಾಗಿದೆ ಲೋಕಾಯುಕ್ತ ಪೊಲೀಸರು ಸಿದ್ದರಾಮಯ್ಯ ವಿರುದ್ದ ಎಫ್ಐಆರ್ ದಾಖಲಿಸಿ ಆದೇಶ ಹೊರಡಿಸಿದ್ದಾರೆ. ಮುಖ್ಯಮಂತ್ರಿ ತಮ್ಮ ಸ್ಥಾನದಲ್ಲಿ ಇದ್ದಾಗ ಯಾವುದೇ ಅಧಿಕಾರಿಗಳು ನಿಷ್ಪಕ್ಷಪಾತವಾಗಿ ತನಿಖೆ ಮಾಡಲು ಸಾಧ್ಯವಿಲ್ಲ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಒತ್ತಾಯಿಸಿದರು.
ಹಿಂದೆ ಬಿಜೆಪಿ ಸರಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್ ಯಡಿಯೂರಪ್ಪ ಅವರ ಮೇಲೆ ಭ್ರಷ್ಟಾಚಾರದ ಆರೋಪ ಬಂದಾಗ ವಿರೋಧ ಪಕ್ಷದಲ್ಲಿ ಇದ್ದ ಸಿದ್ದರಾಮಯ್ಯ ನವರು ರಾಜೀನಾಮೆಗೆ ಒತ್ತಾಯಿಸಿದ್ದರು ಆದರೆ ಇವತ್ತು ಅಂತಹುದೇ ಪರಿಸ್ಥಿತಿ ಸಿದ್ದರಾಮಯ್ಯ ಮೇಲೆ ಬಂದಿದೆ ನೈತಿಕತೆಯಿಂದ ಎಲ್ಲರನ್ನೂ ಪ್ರಶ್ನೆ ಮಾಡುವ ಸಿದ್ದರಾಮಯ್ಯ ಅವರು ಅದೇ ನೈತಿಕತೆಯನ್ನು ಉಳಿಸಿಕೊಳ್ಳಬೇಕಾದರೆ ಮೊದಲು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲಿ ಎಂದು ಒತ್ತಾಯಿಸಿದರು.
ಸಿದ್ದರಾಮಯ್ಯ ಅವರು ಸಂವಿಧಾನದ ಬಗ್ಗೆ ಉದ್ದುದ್ದವಾದ ಭಾಷಣದ ಜೊತೆಗೆ ನೈತಿಕತೆಯ ಪಾಠ ಮಾಡತ್ತಾರೆ ತಮ್ಮ ಮೇಲೆ ಬಂದಿರುವ ಕಳಂಕವನ್ನು ತೊಡೆದುಹಾಕಲು ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಸಿದ್ದರಾಮಯ್ಯ ಅವರಿಗೆ ಈ ನೆಲದ ಕಾನೂನಿನ ಬಗ್ಗೆ, ಸಂವಿಧಾನದ ಬಗ್ಗೆ , ನ್ಯಾಯಾಲಯದ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ, ಭಂಡತನವನ್ನು ಮುಂದುವರೆಸದೆ, ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಓಂಶಕ್ತಿ ಚಲಪತಿ ಒತ್ತಾಯಿಸಿದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…