ಕರ್ನಾಟಕದಲ್ಲಿ ನೂತನ ಮುಖ್ಯಮಂತ್ರಿ ಯಾರು ಎಂಬ ಗೊಂದಲಕ್ಕೆ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿ ‘ಕೈ’ ಹೈಕಮಾಂಡ್ ತೆರೆ ಎಳೆದಿದ್ದಾರೆ. ನಾಳೆ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ?.
ನೂತನವಾಗಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರ ಹೆಸರನ್ನು ಘೋಷಿಸಿದ ನಂತರ ನಾಳೆ ಮಧ್ಯಾಹ್ನ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಸಿಎಂ ಸ್ಥಾನಕ್ಕೆ ಪ್ರಬಲ ಪೈಪೋಟಿ ನೀಡಿದ್ದ ಡಿ.ಕೆ.ಶಿ ಹೈಕಮಾಂಡ್ ಮನವೊಲಿಕೆ ನಂತರ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಒಪ್ಪಿಕೊಂಡಿದ್ದು ಅದರ ಜೊತೆಗೆ ಇನ್ನೆರಡು ಪ್ರಮುಖ ಖಾತೆಗಳಿಗೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷರಾಗಿಯೂ ಡಿಕೆಶಿ ಮುಂದುವರಿಯಲಿದ್ದಾರೆ.
ಎಲ್ಲ 135 ಕಾಂಗ್ರೆಸ್ ಶಾಸಕರ ಸಭೆ ನಾಳೆ ನಡೆಯುವ ನಿರೀಕ್ಷೆಯಿದೆ. ಅದರಲ್ಲಿ ಯಾರ್ಯಾರು ಸಚಿವರಾಗಲಿದ್ದಾರೆ, ಯಾರ್ಯಾರಿಗೆ ಯಾವ ಖಾತೆ ಹಂಚಿಕೆ ಎಂಬುದರ ಬಗ್ಗೆ ಚರ್ಚೆಯಾಗಿ ಮುಂದಿನ ವಾರವೇ ಸಚಿವ ಸಂಪುಟ ರಚನೆಯಾಗಲಿದೆ ಎಂಬ ಮಾಹಿತಿಗಳು ಸಹ ಲಭ್ಯವಾಗಿವೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…