ಕೋಲಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಇರತ್ತಾರೆ ಇರಲೇಬೇಕು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಹ ಆಗುವುದಿಲ್ಲ ಕಾಂಗ್ರೆಸ್ ಪಕ್ಷದಲ್ಲಿ ಅಂತಹ ಚರ್ಚೆಯೇ ನಡೆದಿಲ್ಲ ಅಂತಹ ಚರ್ಚೆ ಬರೀ ಮಾಧ್ಯಮಗಳ ಸೃಷ್ಟಿ ಅಷ್ಟೇ ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆ ಇಲ್ಲ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಸಿದ್ದರಾಮಯ್ಯ ಮಾರ್ಗದರ್ಶನ ಅವಶ್ಯಕತೆ ಇದೆ ಜೊತೆಗೆ 2025ರಲ್ಲೂ ಅವರ ನಾಯಕತ್ವದಲ್ಲಿ ಚುನಾವಣೆ ನಡೆಯಲಿದೆ, ಇದಕ್ಕೆ ಯಾರಿಂದಲೂ ಯಾವುದೇ ಅಭ್ಯಂತರವಿಲ್ಲ, ಸಿದ್ದರಾಮಯ್ಯ ರಾಜ್ಯದಲ್ಲಿ ತುಂಬಾ ಆಕ್ವೀವ್ ಆಗಿ ಕೆಲಸ ಮಾಡುತ್ತಿದ್ದಾರೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಹ ಆಗಿವುದಿಲ್ಲ ಒಬ್ಬರಿಗೆ ಒಂದೇ ಹುದ್ದೆಯೆಂಬ ಪ್ರಶ್ನೆಗೆ, ಪಕ್ಷ ಬೇರೆ, ಸರ್ಕಾರ ಬೇರೆ. ಮಲ್ಲಿಕಾರ್ಜುನ ಖರ್ಗೆಯವರರು ದೊಡ್ಡವರು ಏನು ಹೇಳುತ್ತಾರೋ ಅದೇ ಅಂತಿಮ ತೀರ್ಮಾನವಾಗಲಿದೆ ಎಂದರು.
ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರಶ್ನಿಸಿದಾಗ ನನಗೆ ಗೊತ್ತಿಲ್ಲ, ನಾನು ಯಾರ ಮನೆ ಬಾಗಿಲಿಗೆ ಹೋಗುವುದಿಲ್ಲ, ಕೋಲಾರ ಜನತೆ ನನಗೆ ಕೆಲಸ ಮಾಡುವಂತೆ ಮತ ಹಾಕಿದ್ದಾರೆ. ಕೆಲಸ ಮಾಡಕ್ಕೆ ಸಿದ್ದನಾಗಿದ್ದಾನೆ, ಮಂತ್ರಿಗಿರಿ ಇರಲಿ, ಬಿಡಲಿ, ಮಂತ್ರಿಗಿರಿಗೆ ಆಸೆ ಪಟ್ಟಿಲ್ಲ ಎಂದರು.
ಕೋಲಾರ ಕ್ಷೇತ್ರದಲ್ಲಿ ನಮ್ಮ ಜಾತಿ ಮತಗಳು ಕೇವಲ ಬೆರಳಿಕೆಯಷ್ಟೇ ಇರುವುದು, ಇವತ್ತು ಜನ ನಂಬಿ ನನಗೆ ಮತ ಹಾಕಿದ್ದಾರೆ, ಅವರ ಋಣ ತೀರಿಸುವೆ ಕೆಲಸ ಮಾಡುವೆ ಉದಯಗಿರಿ ಗಲಾಟೆ ಕುರಿತು ಪ್ರತಿಕ್ರಿಯಿಸಿದ ಶಾಸಕರು, ನಾನು ನನ್ನ ವಿಧಾನಸಭಾ ಕ್ಷೇತ್ರದ ಕುರಿತು ಕೇಳಿದರೆ ಹೇಳುವೆ, ಪಕ್ಕದ ಜಿಲ್ಲೆಗಳ ಬಗ್ಗೆ ಮಾತನಾಡುವುದಿಲ್ಲವೆಂದು ನುಣಚಿಕೊಂಡರು. ಇನ್ನು ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸ ಮಾಡಲಾಗುತ್ತಿದೆ ಎಂದರು.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…