ಕೋಲಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಇರತ್ತಾರೆ ಇರಲೇಬೇಕು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಹ ಆಗುವುದಿಲ್ಲ ಕಾಂಗ್ರೆಸ್ ಪಕ್ಷದಲ್ಲಿ ಅಂತಹ ಚರ್ಚೆಯೇ ನಡೆದಿಲ್ಲ ಅಂತಹ ಚರ್ಚೆ ಬರೀ ಮಾಧ್ಯಮಗಳ ಸೃಷ್ಟಿ ಅಷ್ಟೇ ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆ ಇಲ್ಲ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಸಿದ್ದರಾಮಯ್ಯ ಮಾರ್ಗದರ್ಶನ ಅವಶ್ಯಕತೆ ಇದೆ ಜೊತೆಗೆ 2025ರಲ್ಲೂ ಅವರ ನಾಯಕತ್ವದಲ್ಲಿ ಚುನಾವಣೆ ನಡೆಯಲಿದೆ, ಇದಕ್ಕೆ ಯಾರಿಂದಲೂ ಯಾವುದೇ ಅಭ್ಯಂತರವಿಲ್ಲ, ಸಿದ್ದರಾಮಯ್ಯ ರಾಜ್ಯದಲ್ಲಿ ತುಂಬಾ ಆಕ್ವೀವ್ ಆಗಿ ಕೆಲಸ ಮಾಡುತ್ತಿದ್ದಾರೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಹ ಆಗಿವುದಿಲ್ಲ ಒಬ್ಬರಿಗೆ ಒಂದೇ ಹುದ್ದೆಯೆಂಬ ಪ್ರಶ್ನೆಗೆ, ಪಕ್ಷ ಬೇರೆ, ಸರ್ಕಾರ ಬೇರೆ. ಮಲ್ಲಿಕಾರ್ಜುನ ಖರ್ಗೆಯವರರು ದೊಡ್ಡವರು ಏನು ಹೇಳುತ್ತಾರೋ ಅದೇ ಅಂತಿಮ ತೀರ್ಮಾನವಾಗಲಿದೆ ಎಂದರು.
ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರಶ್ನಿಸಿದಾಗ ನನಗೆ ಗೊತ್ತಿಲ್ಲ, ನಾನು ಯಾರ ಮನೆ ಬಾಗಿಲಿಗೆ ಹೋಗುವುದಿಲ್ಲ, ಕೋಲಾರ ಜನತೆ ನನಗೆ ಕೆಲಸ ಮಾಡುವಂತೆ ಮತ ಹಾಕಿದ್ದಾರೆ. ಕೆಲಸ ಮಾಡಕ್ಕೆ ಸಿದ್ದನಾಗಿದ್ದಾನೆ, ಮಂತ್ರಿಗಿರಿ ಇರಲಿ, ಬಿಡಲಿ, ಮಂತ್ರಿಗಿರಿಗೆ ಆಸೆ ಪಟ್ಟಿಲ್ಲ ಎಂದರು.
ಕೋಲಾರ ಕ್ಷೇತ್ರದಲ್ಲಿ ನಮ್ಮ ಜಾತಿ ಮತಗಳು ಕೇವಲ ಬೆರಳಿಕೆಯಷ್ಟೇ ಇರುವುದು, ಇವತ್ತು ಜನ ನಂಬಿ ನನಗೆ ಮತ ಹಾಕಿದ್ದಾರೆ, ಅವರ ಋಣ ತೀರಿಸುವೆ ಕೆಲಸ ಮಾಡುವೆ ಉದಯಗಿರಿ ಗಲಾಟೆ ಕುರಿತು ಪ್ರತಿಕ್ರಿಯಿಸಿದ ಶಾಸಕರು, ನಾನು ನನ್ನ ವಿಧಾನಸಭಾ ಕ್ಷೇತ್ರದ ಕುರಿತು ಕೇಳಿದರೆ ಹೇಳುವೆ, ಪಕ್ಕದ ಜಿಲ್ಲೆಗಳ ಬಗ್ಗೆ ಮಾತನಾಡುವುದಿಲ್ಲವೆಂದು ನುಣಚಿಕೊಂಡರು. ಇನ್ನು ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸ ಮಾಡಲಾಗುತ್ತಿದೆ ಎಂದರು.
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…
ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…