ಕೋಲಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಇರತ್ತಾರೆ ಇರಲೇಬೇಕು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಹ ಆಗುವುದಿಲ್ಲ ಕಾಂಗ್ರೆಸ್ ಪಕ್ಷದಲ್ಲಿ ಅಂತಹ ಚರ್ಚೆಯೇ ನಡೆದಿಲ್ಲ ಅಂತಹ ಚರ್ಚೆ ಬರೀ ಮಾಧ್ಯಮಗಳ ಸೃಷ್ಟಿ ಅಷ್ಟೇ ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆ ಇಲ್ಲ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಸಿದ್ದರಾಮಯ್ಯ ಮಾರ್ಗದರ್ಶನ ಅವಶ್ಯಕತೆ ಇದೆ ಜೊತೆಗೆ 2025ರಲ್ಲೂ ಅವರ ನಾಯಕತ್ವದಲ್ಲಿ ಚುನಾವಣೆ ನಡೆಯಲಿದೆ, ಇದಕ್ಕೆ ಯಾರಿಂದಲೂ ಯಾವುದೇ ಅಭ್ಯಂತರವಿಲ್ಲ, ಸಿದ್ದರಾಮಯ್ಯ ರಾಜ್ಯದಲ್ಲಿ ತುಂಬಾ ಆಕ್ವೀವ್ ಆಗಿ ಕೆಲಸ ಮಾಡುತ್ತಿದ್ದಾರೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಹ ಆಗಿವುದಿಲ್ಲ ಒಬ್ಬರಿಗೆ ಒಂದೇ ಹುದ್ದೆಯೆಂಬ ಪ್ರಶ್ನೆಗೆ, ಪಕ್ಷ ಬೇರೆ, ಸರ್ಕಾರ ಬೇರೆ. ಮಲ್ಲಿಕಾರ್ಜುನ ಖರ್ಗೆಯವರರು ದೊಡ್ಡವರು ಏನು ಹೇಳುತ್ತಾರೋ ಅದೇ ಅಂತಿಮ ತೀರ್ಮಾನವಾಗಲಿದೆ ಎಂದರು.
ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರಶ್ನಿಸಿದಾಗ ನನಗೆ ಗೊತ್ತಿಲ್ಲ, ನಾನು ಯಾರ ಮನೆ ಬಾಗಿಲಿಗೆ ಹೋಗುವುದಿಲ್ಲ, ಕೋಲಾರ ಜನತೆ ನನಗೆ ಕೆಲಸ ಮಾಡುವಂತೆ ಮತ ಹಾಕಿದ್ದಾರೆ. ಕೆಲಸ ಮಾಡಕ್ಕೆ ಸಿದ್ದನಾಗಿದ್ದಾನೆ, ಮಂತ್ರಿಗಿರಿ ಇರಲಿ, ಬಿಡಲಿ, ಮಂತ್ರಿಗಿರಿಗೆ ಆಸೆ ಪಟ್ಟಿಲ್ಲ ಎಂದರು.
ಕೋಲಾರ ಕ್ಷೇತ್ರದಲ್ಲಿ ನಮ್ಮ ಜಾತಿ ಮತಗಳು ಕೇವಲ ಬೆರಳಿಕೆಯಷ್ಟೇ ಇರುವುದು, ಇವತ್ತು ಜನ ನಂಬಿ ನನಗೆ ಮತ ಹಾಕಿದ್ದಾರೆ, ಅವರ ಋಣ ತೀರಿಸುವೆ ಕೆಲಸ ಮಾಡುವೆ ಉದಯಗಿರಿ ಗಲಾಟೆ ಕುರಿತು ಪ್ರತಿಕ್ರಿಯಿಸಿದ ಶಾಸಕರು, ನಾನು ನನ್ನ ವಿಧಾನಸಭಾ ಕ್ಷೇತ್ರದ ಕುರಿತು ಕೇಳಿದರೆ ಹೇಳುವೆ, ಪಕ್ಕದ ಜಿಲ್ಲೆಗಳ ಬಗ್ಗೆ ಮಾತನಾಡುವುದಿಲ್ಲವೆಂದು ನುಣಚಿಕೊಂಡರು. ಇನ್ನು ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸ ಮಾಡಲಾಗುತ್ತಿದೆ ಎಂದರು.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…