ಕೋಲಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಇರತ್ತಾರೆ ಇರಲೇಬೇಕು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಹ ಆಗುವುದಿಲ್ಲ ಕಾಂಗ್ರೆಸ್ ಪಕ್ಷದಲ್ಲಿ ಅಂತಹ ಚರ್ಚೆಯೇ ನಡೆದಿಲ್ಲ ಅಂತಹ ಚರ್ಚೆ ಬರೀ ಮಾಧ್ಯಮಗಳ ಸೃಷ್ಟಿ ಅಷ್ಟೇ ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆ ಇಲ್ಲ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಸಿದ್ದರಾಮಯ್ಯ ಮಾರ್ಗದರ್ಶನ ಅವಶ್ಯಕತೆ ಇದೆ ಜೊತೆಗೆ 2025ರಲ್ಲೂ ಅವರ ನಾಯಕತ್ವದಲ್ಲಿ ಚುನಾವಣೆ ನಡೆಯಲಿದೆ, ಇದಕ್ಕೆ ಯಾರಿಂದಲೂ ಯಾವುದೇ ಅಭ್ಯಂತರವಿಲ್ಲ, ಸಿದ್ದರಾಮಯ್ಯ ರಾಜ್ಯದಲ್ಲಿ ತುಂಬಾ ಆಕ್ವೀವ್ ಆಗಿ ಕೆಲಸ ಮಾಡುತ್ತಿದ್ದಾರೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಹ ಆಗಿವುದಿಲ್ಲ ಒಬ್ಬರಿಗೆ ಒಂದೇ ಹುದ್ದೆಯೆಂಬ ಪ್ರಶ್ನೆಗೆ, ಪಕ್ಷ ಬೇರೆ, ಸರ್ಕಾರ ಬೇರೆ. ಮಲ್ಲಿಕಾರ್ಜುನ ಖರ್ಗೆಯವರರು ದೊಡ್ಡವರು ಏನು ಹೇಳುತ್ತಾರೋ ಅದೇ ಅಂತಿಮ ತೀರ್ಮಾನವಾಗಲಿದೆ ಎಂದರು.
ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರಶ್ನಿಸಿದಾಗ ನನಗೆ ಗೊತ್ತಿಲ್ಲ, ನಾನು ಯಾರ ಮನೆ ಬಾಗಿಲಿಗೆ ಹೋಗುವುದಿಲ್ಲ, ಕೋಲಾರ ಜನತೆ ನನಗೆ ಕೆಲಸ ಮಾಡುವಂತೆ ಮತ ಹಾಕಿದ್ದಾರೆ. ಕೆಲಸ ಮಾಡಕ್ಕೆ ಸಿದ್ದನಾಗಿದ್ದಾನೆ, ಮಂತ್ರಿಗಿರಿ ಇರಲಿ, ಬಿಡಲಿ, ಮಂತ್ರಿಗಿರಿಗೆ ಆಸೆ ಪಟ್ಟಿಲ್ಲ ಎಂದರು.
ಕೋಲಾರ ಕ್ಷೇತ್ರದಲ್ಲಿ ನಮ್ಮ ಜಾತಿ ಮತಗಳು ಕೇವಲ ಬೆರಳಿಕೆಯಷ್ಟೇ ಇರುವುದು, ಇವತ್ತು ಜನ ನಂಬಿ ನನಗೆ ಮತ ಹಾಕಿದ್ದಾರೆ, ಅವರ ಋಣ ತೀರಿಸುವೆ ಕೆಲಸ ಮಾಡುವೆ ಉದಯಗಿರಿ ಗಲಾಟೆ ಕುರಿತು ಪ್ರತಿಕ್ರಿಯಿಸಿದ ಶಾಸಕರು, ನಾನು ನನ್ನ ವಿಧಾನಸಭಾ ಕ್ಷೇತ್ರದ ಕುರಿತು ಕೇಳಿದರೆ ಹೇಳುವೆ, ಪಕ್ಕದ ಜಿಲ್ಲೆಗಳ ಬಗ್ಗೆ ಮಾತನಾಡುವುದಿಲ್ಲವೆಂದು ನುಣಚಿಕೊಂಡರು. ಇನ್ನು ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸ ಮಾಡಲಾಗುತ್ತಿದೆ ಎಂದರು.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…