ಕೋಲಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಇರತ್ತಾರೆ ಇರಲೇಬೇಕು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಹ ಆಗುವುದಿಲ್ಲ ಕಾಂಗ್ರೆಸ್ ಪಕ್ಷದಲ್ಲಿ ಅಂತಹ ಚರ್ಚೆಯೇ ನಡೆದಿಲ್ಲ ಅಂತಹ ಚರ್ಚೆ ಬರೀ ಮಾಧ್ಯಮಗಳ ಸೃಷ್ಟಿ ಅಷ್ಟೇ ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆ ಇಲ್ಲ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಸಿದ್ದರಾಮಯ್ಯ ಮಾರ್ಗದರ್ಶನ ಅವಶ್ಯಕತೆ ಇದೆ ಜೊತೆಗೆ 2025ರಲ್ಲೂ ಅವರ ನಾಯಕತ್ವದಲ್ಲಿ ಚುನಾವಣೆ ನಡೆಯಲಿದೆ, ಇದಕ್ಕೆ ಯಾರಿಂದಲೂ ಯಾವುದೇ ಅಭ್ಯಂತರವಿಲ್ಲ, ಸಿದ್ದರಾಮಯ್ಯ ರಾಜ್ಯದಲ್ಲಿ ತುಂಬಾ ಆಕ್ವೀವ್ ಆಗಿ ಕೆಲಸ ಮಾಡುತ್ತಿದ್ದಾರೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಹ ಆಗಿವುದಿಲ್ಲ ಒಬ್ಬರಿಗೆ ಒಂದೇ ಹುದ್ದೆಯೆಂಬ ಪ್ರಶ್ನೆಗೆ, ಪಕ್ಷ ಬೇರೆ, ಸರ್ಕಾರ ಬೇರೆ. ಮಲ್ಲಿಕಾರ್ಜುನ ಖರ್ಗೆಯವರರು ದೊಡ್ಡವರು ಏನು ಹೇಳುತ್ತಾರೋ ಅದೇ ಅಂತಿಮ ತೀರ್ಮಾನವಾಗಲಿದೆ ಎಂದರು.
ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರಶ್ನಿಸಿದಾಗ ನನಗೆ ಗೊತ್ತಿಲ್ಲ, ನಾನು ಯಾರ ಮನೆ ಬಾಗಿಲಿಗೆ ಹೋಗುವುದಿಲ್ಲ, ಕೋಲಾರ ಜನತೆ ನನಗೆ ಕೆಲಸ ಮಾಡುವಂತೆ ಮತ ಹಾಕಿದ್ದಾರೆ. ಕೆಲಸ ಮಾಡಕ್ಕೆ ಸಿದ್ದನಾಗಿದ್ದಾನೆ, ಮಂತ್ರಿಗಿರಿ ಇರಲಿ, ಬಿಡಲಿ, ಮಂತ್ರಿಗಿರಿಗೆ ಆಸೆ ಪಟ್ಟಿಲ್ಲ ಎಂದರು.
ಕೋಲಾರ ಕ್ಷೇತ್ರದಲ್ಲಿ ನಮ್ಮ ಜಾತಿ ಮತಗಳು ಕೇವಲ ಬೆರಳಿಕೆಯಷ್ಟೇ ಇರುವುದು, ಇವತ್ತು ಜನ ನಂಬಿ ನನಗೆ ಮತ ಹಾಕಿದ್ದಾರೆ, ಅವರ ಋಣ ತೀರಿಸುವೆ ಕೆಲಸ ಮಾಡುವೆ ಉದಯಗಿರಿ ಗಲಾಟೆ ಕುರಿತು ಪ್ರತಿಕ್ರಿಯಿಸಿದ ಶಾಸಕರು, ನಾನು ನನ್ನ ವಿಧಾನಸಭಾ ಕ್ಷೇತ್ರದ ಕುರಿತು ಕೇಳಿದರೆ ಹೇಳುವೆ, ಪಕ್ಕದ ಜಿಲ್ಲೆಗಳ ಬಗ್ಗೆ ಮಾತನಾಡುವುದಿಲ್ಲವೆಂದು ನುಣಚಿಕೊಂಡರು. ಇನ್ನು ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸ ಮಾಡಲಾಗುತ್ತಿದೆ ಎಂದರು.
ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…