Categories: Homeಕೋಲಾರ

ಸಿದ್ದರಾಮಯ್ಯನವರೇ ಐದು ವರ್ಷ ಸಿಎಂ- ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ನಡೆದಿಲ್ಲ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಇರತ್ತಾರೆ ಇರಲೇಬೇಕು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಹ ಆಗುವುದಿಲ್ಲ ಕಾಂಗ್ರೆಸ್ ಪಕ್ಷದಲ್ಲಿ ಅಂತಹ ಚರ್ಚೆಯೇ ನಡೆದಿಲ್ಲ ಅಂತಹ ಚರ್ಚೆ ಬರೀ ಮಾಧ್ಯಮಗಳ ಸೃಷ್ಟಿ ಅಷ್ಟೇ ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆ ಇಲ್ಲ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಸಿದ್ದರಾಮಯ್ಯ ಮಾರ್ಗದರ್ಶನ ಅವಶ್ಯಕತೆ ಇದೆ ಜೊತೆಗೆ 2025ರಲ್ಲೂ ಅವರ ನಾಯಕತ್ವದಲ್ಲಿ ಚುನಾವಣೆ ನಡೆಯಲಿದೆ, ಇದಕ್ಕೆ ಯಾರಿಂದಲೂ ಯಾವುದೇ ಅಭ್ಯಂತರವಿಲ್ಲ, ಸಿದ್ದರಾಮಯ್ಯ ರಾಜ್ಯದಲ್ಲಿ ತುಂಬಾ ಆಕ್ವೀವ್ ಆಗಿ ಕೆಲಸ ಮಾಡುತ್ತಿದ್ದಾರೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಹ ಆಗಿವುದಿಲ್ಲ ಒಬ್ಬರಿಗೆ ಒಂದೇ ಹುದ್ದೆಯೆಂಬ ಪ್ರಶ್ನೆಗೆ, ಪಕ್ಷ ಬೇರೆ, ಸರ್ಕಾರ ಬೇರೆ. ಮಲ್ಲಿಕಾರ್ಜುನ ಖರ್ಗೆಯವರರು ದೊಡ್ಡವರು ಏನು ಹೇಳುತ್ತಾರೋ ಅದೇ ಅಂತಿಮ ತೀರ್ಮಾನವಾಗಲಿದೆ ಎಂದರು.

ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರಶ್ನಿಸಿದಾಗ ನನಗೆ ಗೊತ್ತಿಲ್ಲ, ನಾನು ಯಾರ ಮನೆ ಬಾಗಿಲಿಗೆ ಹೋಗುವುದಿಲ್ಲ, ಕೋಲಾರ ಜನತೆ ನನಗೆ ಕೆಲಸ ಮಾಡುವಂತೆ ಮತ ಹಾಕಿದ್ದಾರೆ. ಕೆಲಸ ಮಾಡಕ್ಕೆ ಸಿದ್ದನಾಗಿದ್ದಾನೆ, ಮಂತ್ರಿಗಿರಿ ಇರಲಿ, ಬಿಡಲಿ, ಮಂತ್ರಿಗಿರಿಗೆ ಆಸೆ ಪಟ್ಟಿಲ್ಲ ಎಂದರು.

ಕೋಲಾರ ಕ್ಷೇತ್ರದಲ್ಲಿ ನಮ್ಮ ಜಾತಿ ಮತಗಳು ಕೇವಲ ಬೆರಳಿಕೆಯಷ್ಟೇ ಇರುವುದು, ಇವತ್ತು ಜನ ನಂಬಿ ನನಗೆ ಮತ ಹಾಕಿದ್ದಾರೆ, ಅವರ ಋಣ ತೀರಿಸುವೆ ಕೆಲಸ ಮಾಡುವೆ ಉದಯಗಿರಿ ಗಲಾಟೆ ಕುರಿತು ಪ್ರತಿಕ್ರಿಯಿಸಿದ ಶಾಸಕರು, ನಾನು ನನ್ನ ವಿಧಾನಸಭಾ ಕ್ಷೇತ್ರದ ಕುರಿತು ಕೇಳಿದರೆ ಹೇಳುವೆ, ಪಕ್ಕದ ಜಿಲ್ಲೆಗಳ ಬಗ್ಗೆ ಮಾತನಾಡುವುದಿಲ್ಲವೆಂದು ನುಣಚಿಕೊಂಡರು. ಇನ್ನು ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸ ಮಾಡಲಾಗುತ್ತಿದೆ ಎಂದರು.

Ramesh Babu

Journalist

Recent Posts

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

8 minutes ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

5 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

6 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

6 hours ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

8 hours ago

ಸಮಾಜ ಕಲ್ಯಾಣ ಇಲಾಖೆ: ಸಚಿವ ಸಂಪುಟದ ಪ್ರಬಲ ಖಾತೆ, ಕೆ.ಎಚ್. ಮುನಿಯಪ್ಪ ಆಸಕ್ತಿ ಏಕೆ?

ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…

9 hours ago