ಕೋಲಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಇರತ್ತಾರೆ ಇರಲೇಬೇಕು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಹ ಆಗುವುದಿಲ್ಲ ಕಾಂಗ್ರೆಸ್ ಪಕ್ಷದಲ್ಲಿ ಅಂತಹ ಚರ್ಚೆಯೇ ನಡೆದಿಲ್ಲ ಅಂತಹ ಚರ್ಚೆ ಬರೀ ಮಾಧ್ಯಮಗಳ ಸೃಷ್ಟಿ ಅಷ್ಟೇ ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆ ಇಲ್ಲ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಸಿದ್ದರಾಮಯ್ಯ ಮಾರ್ಗದರ್ಶನ ಅವಶ್ಯಕತೆ ಇದೆ ಜೊತೆಗೆ 2025ರಲ್ಲೂ ಅವರ ನಾಯಕತ್ವದಲ್ಲಿ ಚುನಾವಣೆ ನಡೆಯಲಿದೆ, ಇದಕ್ಕೆ ಯಾರಿಂದಲೂ ಯಾವುದೇ ಅಭ್ಯಂತರವಿಲ್ಲ, ಸಿದ್ದರಾಮಯ್ಯ ರಾಜ್ಯದಲ್ಲಿ ತುಂಬಾ ಆಕ್ವೀವ್ ಆಗಿ ಕೆಲಸ ಮಾಡುತ್ತಿದ್ದಾರೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಹ ಆಗಿವುದಿಲ್ಲ ಒಬ್ಬರಿಗೆ ಒಂದೇ ಹುದ್ದೆಯೆಂಬ ಪ್ರಶ್ನೆಗೆ, ಪಕ್ಷ ಬೇರೆ, ಸರ್ಕಾರ ಬೇರೆ. ಮಲ್ಲಿಕಾರ್ಜುನ ಖರ್ಗೆಯವರರು ದೊಡ್ಡವರು ಏನು ಹೇಳುತ್ತಾರೋ ಅದೇ ಅಂತಿಮ ತೀರ್ಮಾನವಾಗಲಿದೆ ಎಂದರು.
ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರಶ್ನಿಸಿದಾಗ ನನಗೆ ಗೊತ್ತಿಲ್ಲ, ನಾನು ಯಾರ ಮನೆ ಬಾಗಿಲಿಗೆ ಹೋಗುವುದಿಲ್ಲ, ಕೋಲಾರ ಜನತೆ ನನಗೆ ಕೆಲಸ ಮಾಡುವಂತೆ ಮತ ಹಾಕಿದ್ದಾರೆ. ಕೆಲಸ ಮಾಡಕ್ಕೆ ಸಿದ್ದನಾಗಿದ್ದಾನೆ, ಮಂತ್ರಿಗಿರಿ ಇರಲಿ, ಬಿಡಲಿ, ಮಂತ್ರಿಗಿರಿಗೆ ಆಸೆ ಪಟ್ಟಿಲ್ಲ ಎಂದರು.
ಕೋಲಾರ ಕ್ಷೇತ್ರದಲ್ಲಿ ನಮ್ಮ ಜಾತಿ ಮತಗಳು ಕೇವಲ ಬೆರಳಿಕೆಯಷ್ಟೇ ಇರುವುದು, ಇವತ್ತು ಜನ ನಂಬಿ ನನಗೆ ಮತ ಹಾಕಿದ್ದಾರೆ, ಅವರ ಋಣ ತೀರಿಸುವೆ ಕೆಲಸ ಮಾಡುವೆ ಉದಯಗಿರಿ ಗಲಾಟೆ ಕುರಿತು ಪ್ರತಿಕ್ರಿಯಿಸಿದ ಶಾಸಕರು, ನಾನು ನನ್ನ ವಿಧಾನಸಭಾ ಕ್ಷೇತ್ರದ ಕುರಿತು ಕೇಳಿದರೆ ಹೇಳುವೆ, ಪಕ್ಕದ ಜಿಲ್ಲೆಗಳ ಬಗ್ಗೆ ಮಾತನಾಡುವುದಿಲ್ಲವೆಂದು ನುಣಚಿಕೊಂಡರು. ಇನ್ನು ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸ ಮಾಡಲಾಗುತ್ತಿದೆ ಎಂದರು.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…