Categories: Homeಕೋಲಾರ

ಸಿದ್ದರಾಮಯ್ಯನವರೇ ಐದು ವರ್ಷ ಸಿಎಂ- ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ನಡೆದಿಲ್ಲ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಇರತ್ತಾರೆ ಇರಲೇಬೇಕು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಹ ಆಗುವುದಿಲ್ಲ ಕಾಂಗ್ರೆಸ್ ಪಕ್ಷದಲ್ಲಿ ಅಂತಹ ಚರ್ಚೆಯೇ ನಡೆದಿಲ್ಲ ಅಂತಹ ಚರ್ಚೆ ಬರೀ ಮಾಧ್ಯಮಗಳ ಸೃಷ್ಟಿ ಅಷ್ಟೇ ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆ ಇಲ್ಲ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಸಿದ್ದರಾಮಯ್ಯ ಮಾರ್ಗದರ್ಶನ ಅವಶ್ಯಕತೆ ಇದೆ ಜೊತೆಗೆ 2025ರಲ್ಲೂ ಅವರ ನಾಯಕತ್ವದಲ್ಲಿ ಚುನಾವಣೆ ನಡೆಯಲಿದೆ, ಇದಕ್ಕೆ ಯಾರಿಂದಲೂ ಯಾವುದೇ ಅಭ್ಯಂತರವಿಲ್ಲ, ಸಿದ್ದರಾಮಯ್ಯ ರಾಜ್ಯದಲ್ಲಿ ತುಂಬಾ ಆಕ್ವೀವ್ ಆಗಿ ಕೆಲಸ ಮಾಡುತ್ತಿದ್ದಾರೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಹ ಆಗಿವುದಿಲ್ಲ ಒಬ್ಬರಿಗೆ ಒಂದೇ ಹುದ್ದೆಯೆಂಬ ಪ್ರಶ್ನೆಗೆ, ಪಕ್ಷ ಬೇರೆ, ಸರ್ಕಾರ ಬೇರೆ. ಮಲ್ಲಿಕಾರ್ಜುನ ಖರ್ಗೆಯವರರು ದೊಡ್ಡವರು ಏನು ಹೇಳುತ್ತಾರೋ ಅದೇ ಅಂತಿಮ ತೀರ್ಮಾನವಾಗಲಿದೆ ಎಂದರು.

ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರಶ್ನಿಸಿದಾಗ ನನಗೆ ಗೊತ್ತಿಲ್ಲ, ನಾನು ಯಾರ ಮನೆ ಬಾಗಿಲಿಗೆ ಹೋಗುವುದಿಲ್ಲ, ಕೋಲಾರ ಜನತೆ ನನಗೆ ಕೆಲಸ ಮಾಡುವಂತೆ ಮತ ಹಾಕಿದ್ದಾರೆ. ಕೆಲಸ ಮಾಡಕ್ಕೆ ಸಿದ್ದನಾಗಿದ್ದಾನೆ, ಮಂತ್ರಿಗಿರಿ ಇರಲಿ, ಬಿಡಲಿ, ಮಂತ್ರಿಗಿರಿಗೆ ಆಸೆ ಪಟ್ಟಿಲ್ಲ ಎಂದರು.

ಕೋಲಾರ ಕ್ಷೇತ್ರದಲ್ಲಿ ನಮ್ಮ ಜಾತಿ ಮತಗಳು ಕೇವಲ ಬೆರಳಿಕೆಯಷ್ಟೇ ಇರುವುದು, ಇವತ್ತು ಜನ ನಂಬಿ ನನಗೆ ಮತ ಹಾಕಿದ್ದಾರೆ, ಅವರ ಋಣ ತೀರಿಸುವೆ ಕೆಲಸ ಮಾಡುವೆ ಉದಯಗಿರಿ ಗಲಾಟೆ ಕುರಿತು ಪ್ರತಿಕ್ರಿಯಿಸಿದ ಶಾಸಕರು, ನಾನು ನನ್ನ ವಿಧಾನಸಭಾ ಕ್ಷೇತ್ರದ ಕುರಿತು ಕೇಳಿದರೆ ಹೇಳುವೆ, ಪಕ್ಕದ ಜಿಲ್ಲೆಗಳ ಬಗ್ಗೆ ಮಾತನಾಡುವುದಿಲ್ಲವೆಂದು ನುಣಚಿಕೊಂಡರು. ಇನ್ನು ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸ ಮಾಡಲಾಗುತ್ತಿದೆ ಎಂದರು.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

6 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

19 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

19 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

22 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

22 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

1 day ago