ಸಿದ್ದೇನಾಯಕನಹಳ್ಳಿಯಲ್ಲಿ 50 ಹಾಸಿಗೆಗಳ ತೀವ್ರ ಚಿಕಿತ್ಸಾ ಘಟಕ ಕಟ್ಟಡದ ಶಂಕು ಸ್ಥಾಪನೆ

ಪಿಎಂ ಎಬಿಎಚ್ಐಎಂ ಅಡಿಯಲ್ಲಿ ಜಿಲ್ಲಾ ಆಸ್ಪತ್ರೆ ಆವರಣ ಸಿದ್ದೇನಾಯಕನಹಳ್ಳಿಯಲ್ಲಿ ವಿಡಿಯೋ ಸಂವಾದದ ಮೂಲಕ 50 ಹಾಸಿಗೆಗಳ ತೀವ್ರ ಚಿಕಿತ್ಸಾ ಘಟಕ ಕಟ್ಟಡದ ಶಂಕು ಸ್ಥಾಪನೆ ನಡೆಯಿತು.

ಪಿಎಂ-ಎಬಿಎಚ್‌ಐಎಂ (ಪ್ರಧಾನ ಮಂತ್ರಿ ಆಯುಷ್ಮಾನ್‌ ಭಾರತ್‌ ಹೆಲ್ತ್‌ ಇನ್‌ಫ್ರಾಸ್ಟ್ರಕ್ಚರ್‌ ಮಿಷನ್‌ ) ಕಾರ್ಯಕ್ರಮದಡಿ 50 ಹಾಸಿಗೆಗಳ ತೀವ್ರ ನಿಗಾ ಘಟಕ ಕಟ್ಟಡಕ್ಕೆ ಅ.29ರಂದು ಐಎಂಎ ಭವನ, ಅತ್ತಾವರ, (ಜಿಲ್ಲಾ ವೆನ್‌ಲಾಕ್‌ ಆಸ್ಪತ್ರೆಯ ನೂತನ ಶಸ್ತ್ರಚಿಕಿತ್ಸಾ ವಿಭಾಗದ ಮುಂಭಾಗ)ದಲ್ಲಿ ಶಿಲಾನ್ಯಾಸ ನಡೆಯಿತು.

ಅದೇರೀತಿ ಪ್ರಧಾನಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇನ್​ಫ್ರಾಸ್ಟ್ರಕ್ಚರ್ ಮಿಷನ್ (ಪಿಎಂ-ಎಬಿಹೆಚ್‌ಐಎಂ) ಅಡಿ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಿದ್ದೇನಾಯಕನಹಳ್ಳಿ ಜಿಲ್ಲಾ ಆಸ್ಪತ್ರೆಯ 50 ಹಾಸಿಗೆಗಳ ತೀವ್ರ ಚಿಕಿತ್ಸಾ ಘಟಕ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದ ಕಾರ್ಯಕ್ರಮದಲ್ಲಿ ಶಾಸಕ ಧೀರಜ್ ಮುನಿರಾಜ್ ಅವರು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಸಿ ಸುನಿಲ್ ಕುಮಾರ್, ನಗರಸಭೆ ಅಧ್ಯಕ್ಷರಾದ ಸುಮಿತ್ರ ಆನಂದ್, ನಗರಸಭೆಯ ಎಲ್ಲಾ ಸದಸ್ಯರುಗಳು, ಎಲ್ಲಾ ನಾಮನಿರ್ದೇಶಕ ಸದಸ್ಯರು, ಆಸ್ಪತ್ರೆ ಆರೋಗ್ಯ ರಕ್ಷ ಸಮಿತಿ ಸದಸ್ಯರು, ಆರೋಗ್ಯ ಇಲಾಖೆಯ ಅಧಿಕಾರಿ ವೃಂದದವರು, ಸಾರ್ವಜನಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಕೆ.ಜೆ ಜಾರ್ಜ್

ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪ ಒಳಚರಂಡಿ ಕಾಮಗಾರಿ ಕೈಗೊಳ್ಳಲು ಸಹಕರಿಸಿ, ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವಂತೆ ಕೇಂದ್ರ ಸರ್ಕಾರದ…

10 hours ago

860 ಗ್ರಾಂ ಒಣ ಗಾಂಜಾ ವಶ: ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಆಂಧ್ರ ಪ್ರದೇಶದಿಂದ ಒಣ ಗಾಂಜಾವನ್ನು ತಂದು ಸ್ಥಳೀಯವಾಗಿ ಮಾರಾಟ ಮಾಡಲು ಯತ್ನಿಸಿದ್ದ ವ್ಯಕ್ತಿಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿ,…

10 hours ago

ಸಿಎಂ ಕುರ್ಚಿ ಕದನ ವಿಚಾರ ಈ ತಿಂಗಳೊಳಗೆ ಪೈಸ್ಲಾಗುತ್ತೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ: ರಾಜ್ಯ ರಾಜಕೀಯದಲ್ಲಿ ಸದ್ದು ಮಾಡುತ್ತಿರುವ ಸಿಎಂ ಕುರ್ಚಿ ಕಾದಾಟಕ್ಕೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ಸ್ಪರ್ಶ ನೀಡುವ ಲಕ್ಷಣಗಳು…

11 hours ago

ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ- ಶಾಸಕ‌ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ: ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುವುದರ ಜೊತೆಗೆ ಇತರೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗುತ್ತವೆ ಎಂದು ಶಾಸಕ ಧೀರಜ್ ಮುನಿರಾಜು…

13 hours ago

ಜೂನ್ ಒಂದರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಶಿವಮೊಗ್ಗದಲ್ಲಿ ಚಾಲನೆ- ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿವಿಧ ವಿಷಯಗಳ ಕುರಿತು…

14 hours ago