ಕುಣಿಯಲಾರದವನಿಗೆ ನೆಲ ಡೊಂಕು ಎನ್ನುವ ಮಾತೇನೋ ಸರಿ. ಆದರೆ, ಕುಣಿಯಲು ಬಿಟ್ಟು ನೆಲ ಅಗೆಯುವ ನಿಮ್ಮ ‘ಮೈತ್ರಿದ್ರೋಹ’ಕ್ಕೆ ಏನು ಹೇಳುವುದು ಸಿದ್ದರಾಮಯ್ಯನವರೇ? ದೋಖಾ ಮಾಡುವುದೇ ದುರುದ್ದೇಶವಾಗಿದ್ದಾಗ ನೆಲವನ್ನು ಡೊಂಕು ಮಾಡುವುದು ಕಷ್ಟವೇ? ‘ಮೀರುಸಾದಿಕ’ನ ಆಧುನಿಕ ಅವತಾರಿ ಆಗಿರುವ ನಿಮಗೆ ಇಂಥ ಕ್ಷುದ್ರವಿದ್ಯೆಗಳೆಲ್ಲ ಕರತಲಾಮಲಕ. ಅದನ್ನೇ ನೀವು ಸುತ್ತಿಬಳಸಿ ಹೇಳುತ್ತಿದ್ದೀರಿ. ಧೈರ್ಯವಾಗಿ, ನೇರವಾಗಿ ಸತ್ಯ ಹೇಳಲು ಭಯವೇ? ಹೇಳಿ, ಕುಮಾರಸ್ವಾಮಿ ಸರಕಾರವನ್ನು ತೆಗೆದಿದ್ದು ನಾನೇ ಎಂದು ಹೇಳಲು ನಿಮಗೆ ಗುಂಡಿಗೆ ಸಾಲದೇ? ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ.
ಸಿದ್ಧವನದಲ್ಲಿ ಹೆಣೆದ ಸಿದ್ದಸೂತ್ರ ನನಗೆ ಗೊತ್ತಿಲ್ಲದ ಚಿದಂಬರ ರಹಸ್ಯವೇ? ಬೆಕ್ಕು ಕಣ್ಮುಚ್ಚಿ, ಕದ್ದು ಹಾಲು ಕುಡಿದರೆ ಅನ್ಯರಿಗೆ ಕಾಣದು ಎನ್ನುವಷ್ಟು ಕಿಲಾಡಿತನವೇ? ಇದು ಕಿಲಾಡಿತನವೋ ಅಥವಾ ಕಿಡಿಗೇಡಿತನವೋ? ತಮ್ಮ ಇಂಥ ಸಿದ್ದಲೀಲೆಗಳು ನಮಗೇನೂ ಹೊಸತಲ್ಲ. ಯಡಿಯೂರಪ್ಪ ಅವರು ಕಾವೇರಿಯನ್ನು ಖಾಲಿ ಮಾಡಲಿಲ್ಲ ಸರಿ, ಜಾರ್ಜ್ ಅವರಿಗೆ ಹಂಚಿಕೆ ಆಗಿದ್ದ ನಿವಾಸದಲ್ಲಿ ನೀವು ಯಾಕೆ ಇದ್ದಿರಿ? ಪಾಪ.. ಅನ್ಯರ ಹಂಗೇಕೆ ಬೇಕಿತ್ತು ನಿಮಗೆ? ಮಾಜಿ ಮುಖ್ಯಮಂತ್ರಿಗಳಿಗೆ ಪ್ರತ್ಯೇಕ ಭಂಗಲೆಯನ್ನೇ ಹಂಚಿಕೆ ಮಾಡುತ್ತಿದ್ದೆವು. ನೀವು ಕೇಳಬಹುದಿತ್ತು. ಕುತಂತ್ರ, ಕುಯುಕ್ತಿಯೇ ಸಿದ್ದಸೂತ್ರ ಆಗಿರುವಾಗ ಭಂಗಲೆ ಬಿಟ್ಟುಕೊಡುವಷ್ಟು ಉದಾರತೆ ನಿಮಗೆ ಎಲ್ಲಿಂದ ಬರಬೇಕು? ಎಂದಿದ್ದಾರೆ.
ಇಷ್ಟಕ್ಕೂ ಇನ್ನೊಬ್ಬರು ಇದ್ದ, ಅದರಲ್ಲೂ ನನ್ನ ಸಂಪುಟದಲ್ಲಿ ಸಚಿವರಾಗಿದ್ದವರಿಗೆ ಹಂಚಿಕೆ ಆಗಿದ್ದ ಭಂಗಲೆಯಲ್ಲಿ ಸೇರಿಕೊಳ್ಳುವುದು ಸಮಾಜವಾದಿಗೆ ಅದೆಂಥ ಸಭ್ಯತೆ? ಅದೆಂಥ ಶೋಭೆ? ಛೀ! ಛೀ!! ಎಂದು ಗುಡುಗಿದ್ದಾರೆ.
ವೆಸ್ಟ್ ಎಂಡ್ ನಲ್ಲಿ ಇದ್ದ ಕಾರಣವನ್ನು ನಾನು ಈಗಾಗಲೇ ತಿಳಿಸಿದ್ದೇನೆ, ನೂರಾರು ಸಲ. ಆದರೆ, ಜಾರ್ಜ್ ಮನೆಯಲ್ಲಿ ತಾವು ನಡೆಸಿದ ಸಿದ್ದಲೀಲೆಯನ್ನು ಬಹಿರಂಗ ಮಾಡುವಿರಾ? ನಿಮ್ಮ ಅಂತರಂಗವನ್ನು ಒಮ್ಮೆಯಾದರೂ ಬಹಿರಂಗ ಮಾಡಿ ಸಿದ್ದರಾಮಯ್ಯನವರೇ.. ಎಂದು ಆಗ್ರಹಿಸಿದ್ದಾರೆ.
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…