‘ಸಿದ್ಧವನದಲ್ಲಿ ಹೆಣೆದ ಸಿದ್ದಸೂತ್ರ ನನಗೆ ಗೊತ್ತಿಲ್ಲದ ಚಿದಂಬರ ರಹಸ್ಯವೇ?’- ಮಾಜಿ ಸಿಎಂ ಕುಮಾರಸ್ವಾಮಿ

ಕುಣಿಯಲಾರದವನಿಗೆ ನೆಲ ಡೊಂಕು ಎನ್ನುವ ಮಾತೇನೋ ಸರಿ. ಆದರೆ, ಕುಣಿಯಲು ಬಿಟ್ಟು ನೆಲ ಅಗೆಯುವ ನಿಮ್ಮ ‘ಮೈತ್ರಿದ್ರೋಹ’ಕ್ಕೆ ಏನು ಹೇಳುವುದು ಸಿದ್ದರಾಮಯ್ಯನವರೇ? ದೋಖಾ ಮಾಡುವುದೇ ದುರುದ್ದೇಶವಾಗಿದ್ದಾಗ ನೆಲವನ್ನು ಡೊಂಕು ಮಾಡುವುದು ಕಷ್ಟವೇ? ‘ಮೀರುಸಾದಿಕ’ನ ಆಧುನಿಕ ಅವತಾರಿ ಆಗಿರುವ ನಿಮಗೆ ಇಂಥ ಕ್ಷುದ್ರವಿದ್ಯೆಗಳೆಲ್ಲ ಕರತಲಾಮಲಕ. ಅದನ್ನೇ ನೀವು ಸುತ್ತಿಬಳಸಿ ಹೇಳುತ್ತಿದ್ದೀರಿ. ಧೈರ್ಯವಾಗಿ, ನೇರವಾಗಿ ಸತ್ಯ ಹೇಳಲು ಭಯವೇ? ಹೇಳಿ, ಕುಮಾರಸ್ವಾಮಿ ಸರಕಾರವನ್ನು ತೆಗೆದಿದ್ದು ನಾನೇ ಎಂದು ಹೇಳಲು ನಿಮಗೆ ಗುಂಡಿಗೆ ಸಾಲದೇ? ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ.

ಸಿದ್ಧವನದಲ್ಲಿ ಹೆಣೆದ ಸಿದ್ದಸೂತ್ರ ನನಗೆ ಗೊತ್ತಿಲ್ಲದ ಚಿದಂಬರ ರಹಸ್ಯವೇ? ಬೆಕ್ಕು ಕಣ್ಮುಚ್ಚಿ, ಕದ್ದು ಹಾಲು ಕುಡಿದರೆ ಅನ್ಯರಿಗೆ ಕಾಣದು ಎನ್ನುವಷ್ಟು ಕಿಲಾಡಿತನವೇ? ಇದು ಕಿಲಾಡಿತನವೋ ಅಥವಾ ಕಿಡಿಗೇಡಿತನವೋ? ತಮ್ಮ ಇಂಥ ಸಿದ್ದಲೀಲೆಗಳು ನಮಗೇನೂ ಹೊಸತಲ್ಲ. ಯಡಿಯೂರಪ್ಪ ಅವರು ಕಾವೇರಿಯನ್ನು ಖಾಲಿ ಮಾಡಲಿಲ್ಲ ಸರಿ, ಜಾರ್ಜ್ ಅವರಿಗೆ ಹಂಚಿಕೆ ಆಗಿದ್ದ ನಿವಾಸದಲ್ಲಿ ನೀವು ಯಾಕೆ ಇದ್ದಿರಿ? ಪಾಪ.. ಅನ್ಯರ ಹಂಗೇಕೆ ಬೇಕಿತ್ತು ನಿಮಗೆ? ಮಾಜಿ ಮುಖ್ಯಮಂತ್ರಿಗಳಿಗೆ ಪ್ರತ್ಯೇಕ ಭಂಗಲೆಯನ್ನೇ ಹಂಚಿಕೆ ಮಾಡುತ್ತಿದ್ದೆವು. ನೀವು ಕೇಳಬಹುದಿತ್ತು. ಕುತಂತ್ರ, ಕುಯುಕ್ತಿಯೇ ಸಿದ್ದಸೂತ್ರ ಆಗಿರುವಾಗ ಭಂಗಲೆ ಬಿಟ್ಟುಕೊಡುವಷ್ಟು ಉದಾರತೆ ನಿಮಗೆ ಎಲ್ಲಿಂದ ಬರಬೇಕು? ಎಂದಿದ್ದಾರೆ.

ಇಷ್ಟಕ್ಕೂ ಇನ್ನೊಬ್ಬರು ಇದ್ದ, ಅದರಲ್ಲೂ ನನ್ನ ಸಂಪುಟದಲ್ಲಿ ಸಚಿವರಾಗಿದ್ದವರಿಗೆ ಹಂಚಿಕೆ ಆಗಿದ್ದ ಭಂಗಲೆಯಲ್ಲಿ ಸೇರಿಕೊಳ್ಳುವುದು ಸಮಾಜವಾದಿಗೆ ಅದೆಂಥ ಸಭ್ಯತೆ? ಅದೆಂಥ ಶೋಭೆ? ಛೀ! ಛೀ!! ಎಂದು ಗುಡುಗಿದ್ದಾರೆ.

ವೆಸ್ಟ್ ಎಂಡ್ ನಲ್ಲಿ ಇದ್ದ ಕಾರಣವನ್ನು ನಾನು ಈಗಾಗಲೇ ತಿಳಿಸಿದ್ದೇನೆ, ನೂರಾರು ಸಲ. ಆದರೆ, ಜಾರ್ಜ್ ಮನೆಯಲ್ಲಿ ತಾವು ನಡೆಸಿದ ಸಿದ್ದಲೀಲೆಯನ್ನು ಬಹಿರಂಗ ಮಾಡುವಿರಾ? ನಿಮ್ಮ ಅಂತರಂಗವನ್ನು ಒಮ್ಮೆಯಾದರೂ ಬಹಿರಂಗ ಮಾಡಿ ಸಿದ್ದರಾಮಯ್ಯನವರೇ.. ಎಂದು ಆಗ್ರಹಿಸಿದ್ದಾರೆ.

Ramesh Babu

Journalist

Recent Posts

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

11 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

13 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

16 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

1 day ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

1 day ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

2 days ago