ಕುಣಿಯಲಾರದವನಿಗೆ ನೆಲ ಡೊಂಕು ಎನ್ನುವ ಮಾತೇನೋ ಸರಿ. ಆದರೆ, ಕುಣಿಯಲು ಬಿಟ್ಟು ನೆಲ ಅಗೆಯುವ ನಿಮ್ಮ ‘ಮೈತ್ರಿದ್ರೋಹ’ಕ್ಕೆ ಏನು ಹೇಳುವುದು ಸಿದ್ದರಾಮಯ್ಯನವರೇ? ದೋಖಾ ಮಾಡುವುದೇ ದುರುದ್ದೇಶವಾಗಿದ್ದಾಗ ನೆಲವನ್ನು ಡೊಂಕು ಮಾಡುವುದು ಕಷ್ಟವೇ? ‘ಮೀರುಸಾದಿಕ’ನ ಆಧುನಿಕ ಅವತಾರಿ ಆಗಿರುವ ನಿಮಗೆ ಇಂಥ ಕ್ಷುದ್ರವಿದ್ಯೆಗಳೆಲ್ಲ ಕರತಲಾಮಲಕ. ಅದನ್ನೇ ನೀವು ಸುತ್ತಿಬಳಸಿ ಹೇಳುತ್ತಿದ್ದೀರಿ. ಧೈರ್ಯವಾಗಿ, ನೇರವಾಗಿ ಸತ್ಯ ಹೇಳಲು ಭಯವೇ? ಹೇಳಿ, ಕುಮಾರಸ್ವಾಮಿ ಸರಕಾರವನ್ನು ತೆಗೆದಿದ್ದು ನಾನೇ ಎಂದು ಹೇಳಲು ನಿಮಗೆ ಗುಂಡಿಗೆ ಸಾಲದೇ? ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ.
ಸಿದ್ಧವನದಲ್ಲಿ ಹೆಣೆದ ಸಿದ್ದಸೂತ್ರ ನನಗೆ ಗೊತ್ತಿಲ್ಲದ ಚಿದಂಬರ ರಹಸ್ಯವೇ? ಬೆಕ್ಕು ಕಣ್ಮುಚ್ಚಿ, ಕದ್ದು ಹಾಲು ಕುಡಿದರೆ ಅನ್ಯರಿಗೆ ಕಾಣದು ಎನ್ನುವಷ್ಟು ಕಿಲಾಡಿತನವೇ? ಇದು ಕಿಲಾಡಿತನವೋ ಅಥವಾ ಕಿಡಿಗೇಡಿತನವೋ? ತಮ್ಮ ಇಂಥ ಸಿದ್ದಲೀಲೆಗಳು ನಮಗೇನೂ ಹೊಸತಲ್ಲ. ಯಡಿಯೂರಪ್ಪ ಅವರು ಕಾವೇರಿಯನ್ನು ಖಾಲಿ ಮಾಡಲಿಲ್ಲ ಸರಿ, ಜಾರ್ಜ್ ಅವರಿಗೆ ಹಂಚಿಕೆ ಆಗಿದ್ದ ನಿವಾಸದಲ್ಲಿ ನೀವು ಯಾಕೆ ಇದ್ದಿರಿ? ಪಾಪ.. ಅನ್ಯರ ಹಂಗೇಕೆ ಬೇಕಿತ್ತು ನಿಮಗೆ? ಮಾಜಿ ಮುಖ್ಯಮಂತ್ರಿಗಳಿಗೆ ಪ್ರತ್ಯೇಕ ಭಂಗಲೆಯನ್ನೇ ಹಂಚಿಕೆ ಮಾಡುತ್ತಿದ್ದೆವು. ನೀವು ಕೇಳಬಹುದಿತ್ತು. ಕುತಂತ್ರ, ಕುಯುಕ್ತಿಯೇ ಸಿದ್ದಸೂತ್ರ ಆಗಿರುವಾಗ ಭಂಗಲೆ ಬಿಟ್ಟುಕೊಡುವಷ್ಟು ಉದಾರತೆ ನಿಮಗೆ ಎಲ್ಲಿಂದ ಬರಬೇಕು? ಎಂದಿದ್ದಾರೆ.
ಇಷ್ಟಕ್ಕೂ ಇನ್ನೊಬ್ಬರು ಇದ್ದ, ಅದರಲ್ಲೂ ನನ್ನ ಸಂಪುಟದಲ್ಲಿ ಸಚಿವರಾಗಿದ್ದವರಿಗೆ ಹಂಚಿಕೆ ಆಗಿದ್ದ ಭಂಗಲೆಯಲ್ಲಿ ಸೇರಿಕೊಳ್ಳುವುದು ಸಮಾಜವಾದಿಗೆ ಅದೆಂಥ ಸಭ್ಯತೆ? ಅದೆಂಥ ಶೋಭೆ? ಛೀ! ಛೀ!! ಎಂದು ಗುಡುಗಿದ್ದಾರೆ.
ವೆಸ್ಟ್ ಎಂಡ್ ನಲ್ಲಿ ಇದ್ದ ಕಾರಣವನ್ನು ನಾನು ಈಗಾಗಲೇ ತಿಳಿಸಿದ್ದೇನೆ, ನೂರಾರು ಸಲ. ಆದರೆ, ಜಾರ್ಜ್ ಮನೆಯಲ್ಲಿ ತಾವು ನಡೆಸಿದ ಸಿದ್ದಲೀಲೆಯನ್ನು ಬಹಿರಂಗ ಮಾಡುವಿರಾ? ನಿಮ್ಮ ಅಂತರಂಗವನ್ನು ಒಮ್ಮೆಯಾದರೂ ಬಹಿರಂಗ ಮಾಡಿ ಸಿದ್ದರಾಮಯ್ಯನವರೇ.. ಎಂದು ಆಗ್ರಹಿಸಿದ್ದಾರೆ.
ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…
ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…
ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…
ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…