‘ಸಿದ್ಧವನದಲ್ಲಿ ಹೆಣೆದ ಸಿದ್ದಸೂತ್ರ ನನಗೆ ಗೊತ್ತಿಲ್ಲದ ಚಿದಂಬರ ರಹಸ್ಯವೇ?’- ಮಾಜಿ ಸಿಎಂ ಕುಮಾರಸ್ವಾಮಿ

ಕುಣಿಯಲಾರದವನಿಗೆ ನೆಲ ಡೊಂಕು ಎನ್ನುವ ಮಾತೇನೋ ಸರಿ. ಆದರೆ, ಕುಣಿಯಲು ಬಿಟ್ಟು ನೆಲ ಅಗೆಯುವ ನಿಮ್ಮ ‘ಮೈತ್ರಿದ್ರೋಹ’ಕ್ಕೆ ಏನು ಹೇಳುವುದು ಸಿದ್ದರಾಮಯ್ಯನವರೇ? ದೋಖಾ ಮಾಡುವುದೇ ದುರುದ್ದೇಶವಾಗಿದ್ದಾಗ ನೆಲವನ್ನು ಡೊಂಕು ಮಾಡುವುದು ಕಷ್ಟವೇ? ‘ಮೀರುಸಾದಿಕ’ನ ಆಧುನಿಕ ಅವತಾರಿ ಆಗಿರುವ ನಿಮಗೆ ಇಂಥ ಕ್ಷುದ್ರವಿದ್ಯೆಗಳೆಲ್ಲ ಕರತಲಾಮಲಕ. ಅದನ್ನೇ ನೀವು ಸುತ್ತಿಬಳಸಿ ಹೇಳುತ್ತಿದ್ದೀರಿ. ಧೈರ್ಯವಾಗಿ, ನೇರವಾಗಿ ಸತ್ಯ ಹೇಳಲು ಭಯವೇ? ಹೇಳಿ, ಕುಮಾರಸ್ವಾಮಿ ಸರಕಾರವನ್ನು ತೆಗೆದಿದ್ದು ನಾನೇ ಎಂದು ಹೇಳಲು ನಿಮಗೆ ಗುಂಡಿಗೆ ಸಾಲದೇ? ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ.

ಸಿದ್ಧವನದಲ್ಲಿ ಹೆಣೆದ ಸಿದ್ದಸೂತ್ರ ನನಗೆ ಗೊತ್ತಿಲ್ಲದ ಚಿದಂಬರ ರಹಸ್ಯವೇ? ಬೆಕ್ಕು ಕಣ್ಮುಚ್ಚಿ, ಕದ್ದು ಹಾಲು ಕುಡಿದರೆ ಅನ್ಯರಿಗೆ ಕಾಣದು ಎನ್ನುವಷ್ಟು ಕಿಲಾಡಿತನವೇ? ಇದು ಕಿಲಾಡಿತನವೋ ಅಥವಾ ಕಿಡಿಗೇಡಿತನವೋ? ತಮ್ಮ ಇಂಥ ಸಿದ್ದಲೀಲೆಗಳು ನಮಗೇನೂ ಹೊಸತಲ್ಲ. ಯಡಿಯೂರಪ್ಪ ಅವರು ಕಾವೇರಿಯನ್ನು ಖಾಲಿ ಮಾಡಲಿಲ್ಲ ಸರಿ, ಜಾರ್ಜ್ ಅವರಿಗೆ ಹಂಚಿಕೆ ಆಗಿದ್ದ ನಿವಾಸದಲ್ಲಿ ನೀವು ಯಾಕೆ ಇದ್ದಿರಿ? ಪಾಪ.. ಅನ್ಯರ ಹಂಗೇಕೆ ಬೇಕಿತ್ತು ನಿಮಗೆ? ಮಾಜಿ ಮುಖ್ಯಮಂತ್ರಿಗಳಿಗೆ ಪ್ರತ್ಯೇಕ ಭಂಗಲೆಯನ್ನೇ ಹಂಚಿಕೆ ಮಾಡುತ್ತಿದ್ದೆವು. ನೀವು ಕೇಳಬಹುದಿತ್ತು. ಕುತಂತ್ರ, ಕುಯುಕ್ತಿಯೇ ಸಿದ್ದಸೂತ್ರ ಆಗಿರುವಾಗ ಭಂಗಲೆ ಬಿಟ್ಟುಕೊಡುವಷ್ಟು ಉದಾರತೆ ನಿಮಗೆ ಎಲ್ಲಿಂದ ಬರಬೇಕು? ಎಂದಿದ್ದಾರೆ.

ಇಷ್ಟಕ್ಕೂ ಇನ್ನೊಬ್ಬರು ಇದ್ದ, ಅದರಲ್ಲೂ ನನ್ನ ಸಂಪುಟದಲ್ಲಿ ಸಚಿವರಾಗಿದ್ದವರಿಗೆ ಹಂಚಿಕೆ ಆಗಿದ್ದ ಭಂಗಲೆಯಲ್ಲಿ ಸೇರಿಕೊಳ್ಳುವುದು ಸಮಾಜವಾದಿಗೆ ಅದೆಂಥ ಸಭ್ಯತೆ? ಅದೆಂಥ ಶೋಭೆ? ಛೀ! ಛೀ!! ಎಂದು ಗುಡುಗಿದ್ದಾರೆ.

ವೆಸ್ಟ್ ಎಂಡ್ ನಲ್ಲಿ ಇದ್ದ ಕಾರಣವನ್ನು ನಾನು ಈಗಾಗಲೇ ತಿಳಿಸಿದ್ದೇನೆ, ನೂರಾರು ಸಲ. ಆದರೆ, ಜಾರ್ಜ್ ಮನೆಯಲ್ಲಿ ತಾವು ನಡೆಸಿದ ಸಿದ್ದಲೀಲೆಯನ್ನು ಬಹಿರಂಗ ಮಾಡುವಿರಾ? ನಿಮ್ಮ ಅಂತರಂಗವನ್ನು ಒಮ್ಮೆಯಾದರೂ ಬಹಿರಂಗ ಮಾಡಿ ಸಿದ್ದರಾಮಯ್ಯನವರೇ.. ಎಂದು ಆಗ್ರಹಿಸಿದ್ದಾರೆ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 hour ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

3 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

3 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

3 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

8 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

9 hours ago