ಕುಣಿಯಲಾರದವನಿಗೆ ನೆಲ ಡೊಂಕು ಎನ್ನುವ ಮಾತೇನೋ ಸರಿ. ಆದರೆ, ಕುಣಿಯಲು ಬಿಟ್ಟು ನೆಲ ಅಗೆಯುವ ನಿಮ್ಮ ‘ಮೈತ್ರಿದ್ರೋಹ’ಕ್ಕೆ ಏನು ಹೇಳುವುದು ಸಿದ್ದರಾಮಯ್ಯನವರೇ? ದೋಖಾ ಮಾಡುವುದೇ ದುರುದ್ದೇಶವಾಗಿದ್ದಾಗ ನೆಲವನ್ನು ಡೊಂಕು ಮಾಡುವುದು ಕಷ್ಟವೇ? ‘ಮೀರುಸಾದಿಕ’ನ ಆಧುನಿಕ ಅವತಾರಿ ಆಗಿರುವ ನಿಮಗೆ ಇಂಥ ಕ್ಷುದ್ರವಿದ್ಯೆಗಳೆಲ್ಲ ಕರತಲಾಮಲಕ. ಅದನ್ನೇ ನೀವು ಸುತ್ತಿಬಳಸಿ ಹೇಳುತ್ತಿದ್ದೀರಿ. ಧೈರ್ಯವಾಗಿ, ನೇರವಾಗಿ ಸತ್ಯ ಹೇಳಲು ಭಯವೇ? ಹೇಳಿ, ಕುಮಾರಸ್ವಾಮಿ ಸರಕಾರವನ್ನು ತೆಗೆದಿದ್ದು ನಾನೇ ಎಂದು ಹೇಳಲು ನಿಮಗೆ ಗುಂಡಿಗೆ ಸಾಲದೇ? ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ.
ಸಿದ್ಧವನದಲ್ಲಿ ಹೆಣೆದ ಸಿದ್ದಸೂತ್ರ ನನಗೆ ಗೊತ್ತಿಲ್ಲದ ಚಿದಂಬರ ರಹಸ್ಯವೇ? ಬೆಕ್ಕು ಕಣ್ಮುಚ್ಚಿ, ಕದ್ದು ಹಾಲು ಕುಡಿದರೆ ಅನ್ಯರಿಗೆ ಕಾಣದು ಎನ್ನುವಷ್ಟು ಕಿಲಾಡಿತನವೇ? ಇದು ಕಿಲಾಡಿತನವೋ ಅಥವಾ ಕಿಡಿಗೇಡಿತನವೋ? ತಮ್ಮ ಇಂಥ ಸಿದ್ದಲೀಲೆಗಳು ನಮಗೇನೂ ಹೊಸತಲ್ಲ. ಯಡಿಯೂರಪ್ಪ ಅವರು ಕಾವೇರಿಯನ್ನು ಖಾಲಿ ಮಾಡಲಿಲ್ಲ ಸರಿ, ಜಾರ್ಜ್ ಅವರಿಗೆ ಹಂಚಿಕೆ ಆಗಿದ್ದ ನಿವಾಸದಲ್ಲಿ ನೀವು ಯಾಕೆ ಇದ್ದಿರಿ? ಪಾಪ.. ಅನ್ಯರ ಹಂಗೇಕೆ ಬೇಕಿತ್ತು ನಿಮಗೆ? ಮಾಜಿ ಮುಖ್ಯಮಂತ್ರಿಗಳಿಗೆ ಪ್ರತ್ಯೇಕ ಭಂಗಲೆಯನ್ನೇ ಹಂಚಿಕೆ ಮಾಡುತ್ತಿದ್ದೆವು. ನೀವು ಕೇಳಬಹುದಿತ್ತು. ಕುತಂತ್ರ, ಕುಯುಕ್ತಿಯೇ ಸಿದ್ದಸೂತ್ರ ಆಗಿರುವಾಗ ಭಂಗಲೆ ಬಿಟ್ಟುಕೊಡುವಷ್ಟು ಉದಾರತೆ ನಿಮಗೆ ಎಲ್ಲಿಂದ ಬರಬೇಕು? ಎಂದಿದ್ದಾರೆ.
ಇಷ್ಟಕ್ಕೂ ಇನ್ನೊಬ್ಬರು ಇದ್ದ, ಅದರಲ್ಲೂ ನನ್ನ ಸಂಪುಟದಲ್ಲಿ ಸಚಿವರಾಗಿದ್ದವರಿಗೆ ಹಂಚಿಕೆ ಆಗಿದ್ದ ಭಂಗಲೆಯಲ್ಲಿ ಸೇರಿಕೊಳ್ಳುವುದು ಸಮಾಜವಾದಿಗೆ ಅದೆಂಥ ಸಭ್ಯತೆ? ಅದೆಂಥ ಶೋಭೆ? ಛೀ! ಛೀ!! ಎಂದು ಗುಡುಗಿದ್ದಾರೆ.
ವೆಸ್ಟ್ ಎಂಡ್ ನಲ್ಲಿ ಇದ್ದ ಕಾರಣವನ್ನು ನಾನು ಈಗಾಗಲೇ ತಿಳಿಸಿದ್ದೇನೆ, ನೂರಾರು ಸಲ. ಆದರೆ, ಜಾರ್ಜ್ ಮನೆಯಲ್ಲಿ ತಾವು ನಡೆಸಿದ ಸಿದ್ದಲೀಲೆಯನ್ನು ಬಹಿರಂಗ ಮಾಡುವಿರಾ? ನಿಮ್ಮ ಅಂತರಂಗವನ್ನು ಒಮ್ಮೆಯಾದರೂ ಬಹಿರಂಗ ಮಾಡಿ ಸಿದ್ದರಾಮಯ್ಯನವರೇ.. ಎಂದು ಆಗ್ರಹಿಸಿದ್ದಾರೆ.
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…