‘ಸಿದ್ಧವನದಲ್ಲಿ ಹೆಣೆದ ಸಿದ್ದಸೂತ್ರ ನನಗೆ ಗೊತ್ತಿಲ್ಲದ ಚಿದಂಬರ ರಹಸ್ಯವೇ?’- ಮಾಜಿ ಸಿಎಂ ಕುಮಾರಸ್ವಾಮಿ

ಕುಣಿಯಲಾರದವನಿಗೆ ನೆಲ ಡೊಂಕು ಎನ್ನುವ ಮಾತೇನೋ ಸರಿ. ಆದರೆ, ಕುಣಿಯಲು ಬಿಟ್ಟು ನೆಲ ಅಗೆಯುವ ನಿಮ್ಮ ‘ಮೈತ್ರಿದ್ರೋಹ’ಕ್ಕೆ ಏನು ಹೇಳುವುದು ಸಿದ್ದರಾಮಯ್ಯನವರೇ? ದೋಖಾ ಮಾಡುವುದೇ ದುರುದ್ದೇಶವಾಗಿದ್ದಾಗ ನೆಲವನ್ನು ಡೊಂಕು ಮಾಡುವುದು ಕಷ್ಟವೇ? ‘ಮೀರುಸಾದಿಕ’ನ ಆಧುನಿಕ ಅವತಾರಿ ಆಗಿರುವ ನಿಮಗೆ ಇಂಥ ಕ್ಷುದ್ರವಿದ್ಯೆಗಳೆಲ್ಲ ಕರತಲಾಮಲಕ. ಅದನ್ನೇ ನೀವು ಸುತ್ತಿಬಳಸಿ ಹೇಳುತ್ತಿದ್ದೀರಿ. ಧೈರ್ಯವಾಗಿ, ನೇರವಾಗಿ ಸತ್ಯ ಹೇಳಲು ಭಯವೇ? ಹೇಳಿ, ಕುಮಾರಸ್ವಾಮಿ ಸರಕಾರವನ್ನು ತೆಗೆದಿದ್ದು ನಾನೇ ಎಂದು ಹೇಳಲು ನಿಮಗೆ ಗುಂಡಿಗೆ ಸಾಲದೇ? ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ.

ಸಿದ್ಧವನದಲ್ಲಿ ಹೆಣೆದ ಸಿದ್ದಸೂತ್ರ ನನಗೆ ಗೊತ್ತಿಲ್ಲದ ಚಿದಂಬರ ರಹಸ್ಯವೇ? ಬೆಕ್ಕು ಕಣ್ಮುಚ್ಚಿ, ಕದ್ದು ಹಾಲು ಕುಡಿದರೆ ಅನ್ಯರಿಗೆ ಕಾಣದು ಎನ್ನುವಷ್ಟು ಕಿಲಾಡಿತನವೇ? ಇದು ಕಿಲಾಡಿತನವೋ ಅಥವಾ ಕಿಡಿಗೇಡಿತನವೋ? ತಮ್ಮ ಇಂಥ ಸಿದ್ದಲೀಲೆಗಳು ನಮಗೇನೂ ಹೊಸತಲ್ಲ. ಯಡಿಯೂರಪ್ಪ ಅವರು ಕಾವೇರಿಯನ್ನು ಖಾಲಿ ಮಾಡಲಿಲ್ಲ ಸರಿ, ಜಾರ್ಜ್ ಅವರಿಗೆ ಹಂಚಿಕೆ ಆಗಿದ್ದ ನಿವಾಸದಲ್ಲಿ ನೀವು ಯಾಕೆ ಇದ್ದಿರಿ? ಪಾಪ.. ಅನ್ಯರ ಹಂಗೇಕೆ ಬೇಕಿತ್ತು ನಿಮಗೆ? ಮಾಜಿ ಮುಖ್ಯಮಂತ್ರಿಗಳಿಗೆ ಪ್ರತ್ಯೇಕ ಭಂಗಲೆಯನ್ನೇ ಹಂಚಿಕೆ ಮಾಡುತ್ತಿದ್ದೆವು. ನೀವು ಕೇಳಬಹುದಿತ್ತು. ಕುತಂತ್ರ, ಕುಯುಕ್ತಿಯೇ ಸಿದ್ದಸೂತ್ರ ಆಗಿರುವಾಗ ಭಂಗಲೆ ಬಿಟ್ಟುಕೊಡುವಷ್ಟು ಉದಾರತೆ ನಿಮಗೆ ಎಲ್ಲಿಂದ ಬರಬೇಕು? ಎಂದಿದ್ದಾರೆ.

ಇಷ್ಟಕ್ಕೂ ಇನ್ನೊಬ್ಬರು ಇದ್ದ, ಅದರಲ್ಲೂ ನನ್ನ ಸಂಪುಟದಲ್ಲಿ ಸಚಿವರಾಗಿದ್ದವರಿಗೆ ಹಂಚಿಕೆ ಆಗಿದ್ದ ಭಂಗಲೆಯಲ್ಲಿ ಸೇರಿಕೊಳ್ಳುವುದು ಸಮಾಜವಾದಿಗೆ ಅದೆಂಥ ಸಭ್ಯತೆ? ಅದೆಂಥ ಶೋಭೆ? ಛೀ! ಛೀ!! ಎಂದು ಗುಡುಗಿದ್ದಾರೆ.

ವೆಸ್ಟ್ ಎಂಡ್ ನಲ್ಲಿ ಇದ್ದ ಕಾರಣವನ್ನು ನಾನು ಈಗಾಗಲೇ ತಿಳಿಸಿದ್ದೇನೆ, ನೂರಾರು ಸಲ. ಆದರೆ, ಜಾರ್ಜ್ ಮನೆಯಲ್ಲಿ ತಾವು ನಡೆಸಿದ ಸಿದ್ದಲೀಲೆಯನ್ನು ಬಹಿರಂಗ ಮಾಡುವಿರಾ? ನಿಮ್ಮ ಅಂತರಂಗವನ್ನು ಒಮ್ಮೆಯಾದರೂ ಬಹಿರಂಗ ಮಾಡಿ ಸಿದ್ದರಾಮಯ್ಯನವರೇ.. ಎಂದು ಆಗ್ರಹಿಸಿದ್ದಾರೆ.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

22 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

1 day ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago