Categories: ಕೋಲಾರ

ಸಿಪಿಐಎಂ ನಗರ ಸಮ್ಮೇಳನ: ಕಾರ್ಪೊರೇಟ್ ಸಂಸ್ಥೆಗಳ ಪರವಾದ ಸರ್ಕಾರಗಳು- ಟಿ.ಎಂ.ವೆಂಕಟೇಶ್

ಕೋಲಾರ: ಕಾರ್ಪೊರೇಟ್ ಸಂಸ್ಥೆಗಳ ಪರವಾಗಿ ಕೇಂದ್ರದ ಬಿಜೆಪಿ ಹಾಗೂ ರಾಜ್ಯದ ಕಾಂಗ್ರೆಸ್ ಸರಕಾರಗಳೆರಡೂ ಇದ್ದು ಸಾಮಾನ್ಯ ಜನರ ವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ ಎಂದು ಸಿಪಿಐ(ಎಂ) ಪಕ್ಷದ ತಾಲೂಕು ಕಾರ್ಯದರ್ಶಿ ಟಿ.ಎಂ ವೆಂಕಟೇಶ್ ಆರೋಪಿಸಿದರು.

ನಗರದ ಪಾಲಸಂದ್ರ ಲೇಔಟ್ ನಲ್ಲಿರುವ ಕೆ.ಪಿ.ಆರ್.ಎಸ್ ಜಿಲ್ಲಾ ಸಮಿತಿ ಕಚೇರಿಯಲ್ಲಿ ಮಂಗಳವಾರ ಭಾರತ ಕಮ್ಯುನಿಷ್ಟ್‌ (ಮಾರ್ಕ್ಸ್‌ವಾದಿ) ಪಕ್ಷದ ನಗರ ಸಮ್ಮೇಳನದ ಭಾಗವಾಗಿ ಧ್ವಜಾರೋಹಣದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕೇಂದ್ರ ಸರ್ಕಾರ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೊಳಿಸುತ್ತಿದೆ ಬೆಲೆ ಏರಿಕೆಯಿಂದಾಗಿ ಜನರು ತತ್ತರಿಸುವಂತಾಗಿದೆ. ಆದರೆ, ಕೇಂದ್ರ ಸರ್ಕಾರವು ಈ ಬಗ್ಗೆ ಯಾವುದೇ ಚಿಂತೆಯಿಲ್ಲದಂತೆ ವರ್ತಿಸುತ್ತಿದೆ ಇನ್ನೂ ಕಾಂಗ್ರೆಸ್ ಭ್ರಷ್ಟಾಚಾರದ ಆರೋಪದಲ್ಲಿ ಜನರನ್ನು ಮರೆತಿದ್ದಾರೆ ಎಂದರು.

ಕೋಲಾರ ಜಿಲ್ಲೆಗೆ ಶಾಶ್ವತವಾದ ನೀರಾವರಿ ಯೋಜನೆಗಳು ಜಾರಿಯಾಗಬೇಕು, ಕೆ.ಸಿ ವ್ಯಾಲಿಗೆ ಮೂರನೇ ಹಂತದ ಶುದ್ದೀಕರಣ, ಕೈಗಾರಿಕೆಗಳ ಸ್ಥಾಪನೆ ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದಿಗೆ ಕೈಗೊಂಡಿರುವ ನಿರ್ಣಯಗಳನ್ನು ಜಾರಿ ಮಾಡಬೇಕಾದ ಜವಾಬ್ದಾರಿ ನಮ್ಮ ಮೇಲಿದೆ ಸಿಪಿಐಎಂ ಪಕ್ಷವನ್ನು ಬಲಪಡಿಸಿ ಜನಪರವಾದ ಹೋರಾಟಗಳನ್ನು ಹೆಚ್ಚು ಹೆಚ್ಚಾಗಿ ಮಾಡಬೇಕಾಗಿದೆ ಎಂದರು.

ಪಕ್ಷದ ತಾಲೂಕು ಸಮಿತಿ ಸದಸ್ಯೆ ಆಶಾ ಮಾತನಾಡಿ ಜನರಿಗೆ ಹುಸಿ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಗಳು ಜನತೆಯ ಆಶಯಗಳನ್ನು ಈಡೇರಿಸುವಲ್ಲಿ ವಿಫಲವಾಗಿವೆ. ಜೊತೆಗೆ ಭ್ರಷ್ಟಾಚಾರ ಮಿತಿ ಮೀರಿದ್ದು, ಜನ ಸಾಮಾನ್ಯರು ಪರದಾಡುವಂತೆ ಮಾಡಿದ್ದಾರೆ ಚುನಾವಣೆಯಲ್ಲಿ ತಕ್ಕ ಪಾಠವನ್ನು ಕಲಿಸಬೇಕಾಗಿದೆ ಎಂದರು.

ಕಳೆದ ಅವಧಿಯಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿದ ಎಂ.ಭೀಮರಾಜ್ ಅವರನ್ನು ಮುಂದಿನ ಅವಧಿಗೆ ಕಾರ್ಯದರ್ಶಿಯಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಈ ಸಂದರ್ಭದಲ್ಲಿ ಮುಖಂಡರಾದ ಭೀರಮಾನಹಳ್ಳಿ ರಮೇಶ್, ಮುಸ್ತಫಾ, ನಾಗರಾಜ್, ನಾರಾಯಣಪ್ಪ, ಶಾರದಮ್ಮ, ರಾಮಚಂದ್ರಪ್ಪ ಮುಂತಾದವರು ಇದ್ದರು,

Ramesh Babu

Journalist

Recent Posts

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

2 hours ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

3 hours ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

3 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

6 hours ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

13 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

13 hours ago