ಕೋಲಾರ: ಕಾರ್ಪೊರೇಟ್ ಸಂಸ್ಥೆಗಳ ಪರವಾಗಿ ಕೇಂದ್ರದ ಬಿಜೆಪಿ ಹಾಗೂ ರಾಜ್ಯದ ಕಾಂಗ್ರೆಸ್ ಸರಕಾರಗಳೆರಡೂ ಇದ್ದು ಸಾಮಾನ್ಯ ಜನರ ವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ ಎಂದು ಸಿಪಿಐ(ಎಂ) ಪಕ್ಷದ ತಾಲೂಕು ಕಾರ್ಯದರ್ಶಿ ಟಿ.ಎಂ ವೆಂಕಟೇಶ್ ಆರೋಪಿಸಿದರು.
ನಗರದ ಪಾಲಸಂದ್ರ ಲೇಔಟ್ ನಲ್ಲಿರುವ ಕೆ.ಪಿ.ಆರ್.ಎಸ್ ಜಿಲ್ಲಾ ಸಮಿತಿ ಕಚೇರಿಯಲ್ಲಿ ಮಂಗಳವಾರ ಭಾರತ ಕಮ್ಯುನಿಷ್ಟ್ (ಮಾರ್ಕ್ಸ್ವಾದಿ) ಪಕ್ಷದ ನಗರ ಸಮ್ಮೇಳನದ ಭಾಗವಾಗಿ ಧ್ವಜಾರೋಹಣದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕೇಂದ್ರ ಸರ್ಕಾರ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೊಳಿಸುತ್ತಿದೆ ಬೆಲೆ ಏರಿಕೆಯಿಂದಾಗಿ ಜನರು ತತ್ತರಿಸುವಂತಾಗಿದೆ. ಆದರೆ, ಕೇಂದ್ರ ಸರ್ಕಾರವು ಈ ಬಗ್ಗೆ ಯಾವುದೇ ಚಿಂತೆಯಿಲ್ಲದಂತೆ ವರ್ತಿಸುತ್ತಿದೆ ಇನ್ನೂ ಕಾಂಗ್ರೆಸ್ ಭ್ರಷ್ಟಾಚಾರದ ಆರೋಪದಲ್ಲಿ ಜನರನ್ನು ಮರೆತಿದ್ದಾರೆ ಎಂದರು.
ಕೋಲಾರ ಜಿಲ್ಲೆಗೆ ಶಾಶ್ವತವಾದ ನೀರಾವರಿ ಯೋಜನೆಗಳು ಜಾರಿಯಾಗಬೇಕು, ಕೆ.ಸಿ ವ್ಯಾಲಿಗೆ ಮೂರನೇ ಹಂತದ ಶುದ್ದೀಕರಣ, ಕೈಗಾರಿಕೆಗಳ ಸ್ಥಾಪನೆ ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದಿಗೆ ಕೈಗೊಂಡಿರುವ ನಿರ್ಣಯಗಳನ್ನು ಜಾರಿ ಮಾಡಬೇಕಾದ ಜವಾಬ್ದಾರಿ ನಮ್ಮ ಮೇಲಿದೆ ಸಿಪಿಐಎಂ ಪಕ್ಷವನ್ನು ಬಲಪಡಿಸಿ ಜನಪರವಾದ ಹೋರಾಟಗಳನ್ನು ಹೆಚ್ಚು ಹೆಚ್ಚಾಗಿ ಮಾಡಬೇಕಾಗಿದೆ ಎಂದರು.
ಪಕ್ಷದ ತಾಲೂಕು ಸಮಿತಿ ಸದಸ್ಯೆ ಆಶಾ ಮಾತನಾಡಿ ಜನರಿಗೆ ಹುಸಿ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಗಳು ಜನತೆಯ ಆಶಯಗಳನ್ನು ಈಡೇರಿಸುವಲ್ಲಿ ವಿಫಲವಾಗಿವೆ. ಜೊತೆಗೆ ಭ್ರಷ್ಟಾಚಾರ ಮಿತಿ ಮೀರಿದ್ದು, ಜನ ಸಾಮಾನ್ಯರು ಪರದಾಡುವಂತೆ ಮಾಡಿದ್ದಾರೆ ಚುನಾವಣೆಯಲ್ಲಿ ತಕ್ಕ ಪಾಠವನ್ನು ಕಲಿಸಬೇಕಾಗಿದೆ ಎಂದರು.
ಕಳೆದ ಅವಧಿಯಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿದ ಎಂ.ಭೀಮರಾಜ್ ಅವರನ್ನು ಮುಂದಿನ ಅವಧಿಗೆ ಕಾರ್ಯದರ್ಶಿಯಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಈ ಸಂದರ್ಭದಲ್ಲಿ ಮುಖಂಡರಾದ ಭೀರಮಾನಹಳ್ಳಿ ರಮೇಶ್, ಮುಸ್ತಫಾ, ನಾಗರಾಜ್, ನಾರಾಯಣಪ್ಪ, ಶಾರದಮ್ಮ, ರಾಮಚಂದ್ರಪ್ಪ ಮುಂತಾದವರು ಇದ್ದರು,
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…