Categories: ಕೋಲಾರ

ಸಿಪಿಐಎಂ ನಗರ ಸಮ್ಮೇಳನ: ಕಾರ್ಪೊರೇಟ್ ಸಂಸ್ಥೆಗಳ ಪರವಾದ ಸರ್ಕಾರಗಳು- ಟಿ.ಎಂ.ವೆಂಕಟೇಶ್

ಕೋಲಾರ: ಕಾರ್ಪೊರೇಟ್ ಸಂಸ್ಥೆಗಳ ಪರವಾಗಿ ಕೇಂದ್ರದ ಬಿಜೆಪಿ ಹಾಗೂ ರಾಜ್ಯದ ಕಾಂಗ್ರೆಸ್ ಸರಕಾರಗಳೆರಡೂ ಇದ್ದು ಸಾಮಾನ್ಯ ಜನರ ವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ ಎಂದು ಸಿಪಿಐ(ಎಂ) ಪಕ್ಷದ ತಾಲೂಕು ಕಾರ್ಯದರ್ಶಿ ಟಿ.ಎಂ ವೆಂಕಟೇಶ್ ಆರೋಪಿಸಿದರು.

ನಗರದ ಪಾಲಸಂದ್ರ ಲೇಔಟ್ ನಲ್ಲಿರುವ ಕೆ.ಪಿ.ಆರ್.ಎಸ್ ಜಿಲ್ಲಾ ಸಮಿತಿ ಕಚೇರಿಯಲ್ಲಿ ಮಂಗಳವಾರ ಭಾರತ ಕಮ್ಯುನಿಷ್ಟ್‌ (ಮಾರ್ಕ್ಸ್‌ವಾದಿ) ಪಕ್ಷದ ನಗರ ಸಮ್ಮೇಳನದ ಭಾಗವಾಗಿ ಧ್ವಜಾರೋಹಣದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕೇಂದ್ರ ಸರ್ಕಾರ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೊಳಿಸುತ್ತಿದೆ ಬೆಲೆ ಏರಿಕೆಯಿಂದಾಗಿ ಜನರು ತತ್ತರಿಸುವಂತಾಗಿದೆ. ಆದರೆ, ಕೇಂದ್ರ ಸರ್ಕಾರವು ಈ ಬಗ್ಗೆ ಯಾವುದೇ ಚಿಂತೆಯಿಲ್ಲದಂತೆ ವರ್ತಿಸುತ್ತಿದೆ ಇನ್ನೂ ಕಾಂಗ್ರೆಸ್ ಭ್ರಷ್ಟಾಚಾರದ ಆರೋಪದಲ್ಲಿ ಜನರನ್ನು ಮರೆತಿದ್ದಾರೆ ಎಂದರು.

ಕೋಲಾರ ಜಿಲ್ಲೆಗೆ ಶಾಶ್ವತವಾದ ನೀರಾವರಿ ಯೋಜನೆಗಳು ಜಾರಿಯಾಗಬೇಕು, ಕೆ.ಸಿ ವ್ಯಾಲಿಗೆ ಮೂರನೇ ಹಂತದ ಶುದ್ದೀಕರಣ, ಕೈಗಾರಿಕೆಗಳ ಸ್ಥಾಪನೆ ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದಿಗೆ ಕೈಗೊಂಡಿರುವ ನಿರ್ಣಯಗಳನ್ನು ಜಾರಿ ಮಾಡಬೇಕಾದ ಜವಾಬ್ದಾರಿ ನಮ್ಮ ಮೇಲಿದೆ ಸಿಪಿಐಎಂ ಪಕ್ಷವನ್ನು ಬಲಪಡಿಸಿ ಜನಪರವಾದ ಹೋರಾಟಗಳನ್ನು ಹೆಚ್ಚು ಹೆಚ್ಚಾಗಿ ಮಾಡಬೇಕಾಗಿದೆ ಎಂದರು.

ಪಕ್ಷದ ತಾಲೂಕು ಸಮಿತಿ ಸದಸ್ಯೆ ಆಶಾ ಮಾತನಾಡಿ ಜನರಿಗೆ ಹುಸಿ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಗಳು ಜನತೆಯ ಆಶಯಗಳನ್ನು ಈಡೇರಿಸುವಲ್ಲಿ ವಿಫಲವಾಗಿವೆ. ಜೊತೆಗೆ ಭ್ರಷ್ಟಾಚಾರ ಮಿತಿ ಮೀರಿದ್ದು, ಜನ ಸಾಮಾನ್ಯರು ಪರದಾಡುವಂತೆ ಮಾಡಿದ್ದಾರೆ ಚುನಾವಣೆಯಲ್ಲಿ ತಕ್ಕ ಪಾಠವನ್ನು ಕಲಿಸಬೇಕಾಗಿದೆ ಎಂದರು.

ಕಳೆದ ಅವಧಿಯಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿದ ಎಂ.ಭೀಮರಾಜ್ ಅವರನ್ನು ಮುಂದಿನ ಅವಧಿಗೆ ಕಾರ್ಯದರ್ಶಿಯಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಈ ಸಂದರ್ಭದಲ್ಲಿ ಮುಖಂಡರಾದ ಭೀರಮಾನಹಳ್ಳಿ ರಮೇಶ್, ಮುಸ್ತಫಾ, ನಾಗರಾಜ್, ನಾರಾಯಣಪ್ಪ, ಶಾರದಮ್ಮ, ರಾಮಚಂದ್ರಪ್ಪ ಮುಂತಾದವರು ಇದ್ದರು,

Ramesh Babu

Journalist

Recent Posts

ಕಮಲೂರು ಕೆರೆ ಪುನಶ್ಚೇತನ: ಫಾಕ್ಸ್ಕಾನ್‌ನಿಂದ ಗ್ರಾಮ ಪಂಚಾಯಿತಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ಕೆರೆಗಳು ಗ್ರಾಮೀಣ ಭಾಗಗಳ ಪ್ರಮುಖ ನೀರಿನ ಮೂಲಗಳಾಗಿದ್ದು, ಅವುಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಫಾಕ್ಸ್ಕಾನ್…

7 hours ago

ಬಿಸಿಲ ಬೇಗೆಯ ಎಫೆಕ್ಟ್: 2 ತಿಂಗಳಲ್ಲಿ 2.82 ಲಕ್ಷ ಲೀಟರ್ ಬಿಯರ್ ಮಾರಾಟ!: ಕಳೆದ ವರ್ಷಕ್ಕಿಂತ ಶೇ.33ರಷ್ಟು ಏರಿಕೆ

ಬೆಂಗಳೂರು ಗ್ರಾಮಾಂತರ: ಈ ಬಾರಿ ಬೇಸಿಗೆಯ ಬಿರು ಬಿಸಿಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಯರ್ ಮಾರಾಟಕ್ಕೆ ಹೊಸ ಉತ್ತೇಜನ ನೀಡಿದೆ.…

9 hours ago

ಆರ್‌ಒ ಘಟಕಗಳ ನೀರಿನ ಗುಣಮಟ್ಟ ಪ್ರಮಾಣಪತ್ರ ಪ್ರದರ್ಶನಕ್ಕೆ ಸದಸ್ಯರ ಆಗ್ರಹ

ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್‌ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ…

21 hours ago

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ‍್ಯಾಂಕ್ ಪಡೆದ…

22 hours ago

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

22 hours ago

ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ ರಾಜೀನಾಮೆ: ಜಿಲ್ಲಾಧಿಕಾರಿ ಅಂಗೀಕಾರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…

1 day ago