Categories: ಕೋಲಾರ

ಸಿಪಿಐಎಂ ನಗರ ಸಮ್ಮೇಳನ: ಕಾರ್ಪೊರೇಟ್ ಸಂಸ್ಥೆಗಳ ಪರವಾದ ಸರ್ಕಾರಗಳು- ಟಿ.ಎಂ.ವೆಂಕಟೇಶ್

ಕೋಲಾರ: ಕಾರ್ಪೊರೇಟ್ ಸಂಸ್ಥೆಗಳ ಪರವಾಗಿ ಕೇಂದ್ರದ ಬಿಜೆಪಿ ಹಾಗೂ ರಾಜ್ಯದ ಕಾಂಗ್ರೆಸ್ ಸರಕಾರಗಳೆರಡೂ ಇದ್ದು ಸಾಮಾನ್ಯ ಜನರ ವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ ಎಂದು ಸಿಪಿಐ(ಎಂ) ಪಕ್ಷದ ತಾಲೂಕು ಕಾರ್ಯದರ್ಶಿ ಟಿ.ಎಂ ವೆಂಕಟೇಶ್ ಆರೋಪಿಸಿದರು.

ನಗರದ ಪಾಲಸಂದ್ರ ಲೇಔಟ್ ನಲ್ಲಿರುವ ಕೆ.ಪಿ.ಆರ್.ಎಸ್ ಜಿಲ್ಲಾ ಸಮಿತಿ ಕಚೇರಿಯಲ್ಲಿ ಮಂಗಳವಾರ ಭಾರತ ಕಮ್ಯುನಿಷ್ಟ್‌ (ಮಾರ್ಕ್ಸ್‌ವಾದಿ) ಪಕ್ಷದ ನಗರ ಸಮ್ಮೇಳನದ ಭಾಗವಾಗಿ ಧ್ವಜಾರೋಹಣದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕೇಂದ್ರ ಸರ್ಕಾರ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೊಳಿಸುತ್ತಿದೆ ಬೆಲೆ ಏರಿಕೆಯಿಂದಾಗಿ ಜನರು ತತ್ತರಿಸುವಂತಾಗಿದೆ. ಆದರೆ, ಕೇಂದ್ರ ಸರ್ಕಾರವು ಈ ಬಗ್ಗೆ ಯಾವುದೇ ಚಿಂತೆಯಿಲ್ಲದಂತೆ ವರ್ತಿಸುತ್ತಿದೆ ಇನ್ನೂ ಕಾಂಗ್ರೆಸ್ ಭ್ರಷ್ಟಾಚಾರದ ಆರೋಪದಲ್ಲಿ ಜನರನ್ನು ಮರೆತಿದ್ದಾರೆ ಎಂದರು.

ಕೋಲಾರ ಜಿಲ್ಲೆಗೆ ಶಾಶ್ವತವಾದ ನೀರಾವರಿ ಯೋಜನೆಗಳು ಜಾರಿಯಾಗಬೇಕು, ಕೆ.ಸಿ ವ್ಯಾಲಿಗೆ ಮೂರನೇ ಹಂತದ ಶುದ್ದೀಕರಣ, ಕೈಗಾರಿಕೆಗಳ ಸ್ಥಾಪನೆ ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದಿಗೆ ಕೈಗೊಂಡಿರುವ ನಿರ್ಣಯಗಳನ್ನು ಜಾರಿ ಮಾಡಬೇಕಾದ ಜವಾಬ್ದಾರಿ ನಮ್ಮ ಮೇಲಿದೆ ಸಿಪಿಐಎಂ ಪಕ್ಷವನ್ನು ಬಲಪಡಿಸಿ ಜನಪರವಾದ ಹೋರಾಟಗಳನ್ನು ಹೆಚ್ಚು ಹೆಚ್ಚಾಗಿ ಮಾಡಬೇಕಾಗಿದೆ ಎಂದರು.

ಪಕ್ಷದ ತಾಲೂಕು ಸಮಿತಿ ಸದಸ್ಯೆ ಆಶಾ ಮಾತನಾಡಿ ಜನರಿಗೆ ಹುಸಿ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಗಳು ಜನತೆಯ ಆಶಯಗಳನ್ನು ಈಡೇರಿಸುವಲ್ಲಿ ವಿಫಲವಾಗಿವೆ. ಜೊತೆಗೆ ಭ್ರಷ್ಟಾಚಾರ ಮಿತಿ ಮೀರಿದ್ದು, ಜನ ಸಾಮಾನ್ಯರು ಪರದಾಡುವಂತೆ ಮಾಡಿದ್ದಾರೆ ಚುನಾವಣೆಯಲ್ಲಿ ತಕ್ಕ ಪಾಠವನ್ನು ಕಲಿಸಬೇಕಾಗಿದೆ ಎಂದರು.

ಕಳೆದ ಅವಧಿಯಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿದ ಎಂ.ಭೀಮರಾಜ್ ಅವರನ್ನು ಮುಂದಿನ ಅವಧಿಗೆ ಕಾರ್ಯದರ್ಶಿಯಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಈ ಸಂದರ್ಭದಲ್ಲಿ ಮುಖಂಡರಾದ ಭೀರಮಾನಹಳ್ಳಿ ರಮೇಶ್, ಮುಸ್ತಫಾ, ನಾಗರಾಜ್, ನಾರಾಯಣಪ್ಪ, ಶಾರದಮ್ಮ, ರಾಮಚಂದ್ರಪ್ಪ ಮುಂತಾದವರು ಇದ್ದರು,

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

3 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

16 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

16 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

19 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

20 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

1 day ago