Categories: ಕೋಲಾರ

ಸಿಪಿಐಎಂ ರಾಜ್ಯ ಕಾರ್ಯದರ್ಶಿ ಜಿ.ಸಿ ಬಯ್ಯಾರೆಡ್ಡಿಗೆ ನುಡಿನಮನ

ಕೋಲಾರ: ಜನರಿಗೆ ಸಮಾಜದಲ್ಲಿನ ಸಮಸ್ಯೆಗಳ ಬಗ್ಗೆ ಆಕ್ರೋಶವಿದ್ದರೂ ಅವುಗಳನ್ನು ಬಳಸಿಕೊಂಡು ಹೋರಾಟ ರೂಪಿಸಲು ಜನಪ್ರತಿನಿಧಿಗಳು ಸೇರಿದಂತೆ ಸಂಘಸಂಸ್ಥೆಗಳು ವಿಫಲವಾಗಿದ್ದಾರೆ. ವೇದಿಕೆಗಳಲ್ಲಿ ಇದ್ದವರು ಜಾಣತನ ಹೆಚ್ಚಾಗಿ ಬದ್ದತೆಯ ಅರ್ಥವೇ ಕಳೆದುಕೊಳ್ಳುತ್ತಿದೆ ಎಂದು ಮಾಜಿ ಸ್ಪೀಕರ್ ಕೆ.ಆರ್ ರಮೇಶ್ ಕುಮಾರ್ ವಿಷಾದಿಸಿದರು,

ನಗರದ ಪತ್ರಕರ್ತರ ಭವನದಲ್ಲಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ ರೈತ ಮುಖಂಡ ಹಾಗೂ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಜಿ.ಸಿ ಬಯ್ಯಾರೆಡ್ಡಿ ಅವರ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜನರ ಆಕ್ರೋಶದ ನೈಜತೆಯ ಬಗ್ಗೆ ಯಾವುದೇ ವ್ಯಕ್ತಿಯಾಗಲಿ ಪಕ್ಷವಾಗಲಿ ಸಹಾಯ ಮಾಡಲು ಮುಂದಾಗುತ್ತಿಲ್ಲ. ಜನತೆಯ ಅಸಹಾಯಕತೆಯನ್ನು ತಣ್ಣಗಾಗಿಸುವ ನೈಪುಣ್ಯತೆಯನ್ನು ಗೊತ್ತಿದ್ದರೂ ಮುಂದಾಗುವವರ ಸಂಖ್ಯೆ ಇಲ್ಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸುಮಾರು 60 ರ ದಶಕದಲ್ಲಿ ಬೆಂಗಳೂರು ಅಂತಹ ಪ್ರದೇಶದಲ್ಲಿ ಸೈಕಲ್ ಗೆ 25 ಪೈಸೆ ತೆರಿಗೆ ಹಾಕಿದಾಗ ಎಲ್ಲಾ ರಾಜಕೀಯ ಪಕ್ಷಗಳು ಬೀದಿಗೆ ಇಳಿದು ಆಕ್ರೋಶ ವ್ಯಕ್ತಪಡಿಸಿದ್ದರು. ಇವತ್ತು ಜನರ ಸೇವೆ ಹೆಸರಿನಲ್ಲಿ ದರೋಡೆ ಮಾಡುವವರ ವಿರುದ್ದ ಯಾವುದೇ ಆಕ್ರೋಶದ ಧ್ವನಿಯಿಲ್ಲವಾಗಿದೆ ಎಂದರು.

ಕಮ್ಯೂನಿಸ್ಟ್‌ ಚಳುವಳಿಯ ಕಟ್ಟಾಳುಗಳು ನಿರಂತರವಾಗಿ ಅಧ್ಯಯನ ಶೀಲರಾಗಿರುತ್ತಾರೆ. ಅದರಿಂದಲೇ ಅವರು ಮಾತಾಡುವ ಶೈಲಿ ವಿಭಿನ್ನವಾಗಿರುತ್ತದೆ. ಪ್ರತಿಯೊಂದು ಹಂತದಲ್ಲೂ ಜನಪರವಾದ ವಿಚಾರಗಳನ್ನು ಮೈಗೂಡಿಸಿಕೊಂಡು ಹೋಗುತ್ತಾರೆ. ಇವತ್ತಿನ ಕಲುಷಿತ ವಾತಾವರಣದ ರಾಜಕೀಯ ವ್ಯವಸ್ಥೆಯಲ್ಲಿ ನೈಜತೆಯ ರಾಜಕಾರಣ ಮುಖ್ಯವಾಗಿದೆ. ಜನಪರ ಹೋರಾಟಕ್ಕೆ ಜಯ ಸಿಗುತ್ತದೆ. ನಿಮ್ಮ ಜನಮುಖಿ ಸಮಾಜಮುಖಿ ಕಾರ್ಯಕ್ರಮಗಳಿಗೆ ಸದಾ ಬೆಂಬಲ ಇರುತ್ತದೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಮಾತನಾಡಿ, ಕಮ್ಯೂನಿಸ್ಟ್‌ ಚಳುವಳಿಗಳಿಂದಲ್ಲೇ ಜಿಲ್ಲೆಯ ಜನಪರ ಯೋಜನೆಗಳ ಜೊತೆಗೆ ಶಾಶ್ವತ ನೀರಾವರಿ ಯೋಜನೆಗಳ ಜಾರಿಗೆ ಕಾರಣವಾಗಿವೆ. ಬೆಲೆ ಏರಿಕೆ, ಭೂಸ್ವಾಧೀನ ವಿರುದ್ದ ಕೋಮುವಾದಿ ರಾಜಕಾರಣ ಕೊನೆಗಾಣಿಸುವ ನಿಟ್ಟಿನಲ್ಲಿ ಕಮ್ಯೂನಿಸ್ಟ್‌ ಪಕ್ಷವು ನಿರಂತರವಾಗಿ ಹೋರಾಟ ರೂಪಿಸಿದೆ. ದೇಶದಲ್ಲಿ ಜನತಾ ಪರಿಹಾರದ ಪಕ್ಷಗಳು ಹೊಂದಾಣಿಕೆ ರಾಜಕಾರಣ ಮಾಡಿದ್ದರಿಂದ ಕೆಲವು ಕಡೆಯಲ್ಲಿ ರಾಜಕಾರಣದಿಂದ ದೂರವಾಗಿವೆ ಇದು ಬಿಜೆಪಿಗೆ ಲಾಭವಾಗಿದೆ. ಕಮ್ಯೂನಿಸ್ಟ್‌ ಇತಿಹಾಸವನ್ನು ತಿಳಿದು ಜನರನ್ನು ಎಚ್ಚರಿಸುವ ಮೂಲಕ ಉತ್ತಮ ಸಮಾಜದ ನಿರ್ಮಾಣ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಮಾಜಿ ಶಾಸಕ ಜಿ.ವಿ ಶ್ರೀರಾಮರೆಡ್ಡಿ ಮತ್ತು ಜಿ.ಸಿ‌ ಬಯ್ಯಾರೆಡ್ಡಿ ಆಡಳಿತ ಪಕ್ಷಗಳಿಗೆ ನಿರಂತರವಾಗಿ ಎಚ್ಚರಿಕೆ ಕೊಟ್ಟಿದ್ದಾರೆ. ಮಹಿಳೆಯ, ಕಾರ್ಮಿಕರ, ರೈತರ ವಿಧ್ಯಾರ್ಥಿಗಳ ಧ್ವನಿಯಾಗಿ ಕೆಲಸ ಮಾಡಿದ್ದಾರೆ ಅಂತಹವರು ನಮ್ಮಿಂದ ದೂರವಾಗಿದ್ದರಿಂದ ಚಳುವಳಿಗೆ ಹಾಗೂ ಜಿಲ್ಲೆಗೆ ತುಂಬುಲಾರದ ನಷ್ಟವಾಗಿದೆ ಅವರ ಆದರ್ಶಗಳು ನಮಗೆಲ್ಲ ಸ್ಪೂರ್ತಿಯಾಗಬೇಕು ಎಂದರು.

ಈ ಸಂದರ್ಭದಲ್ಲಿ ಸಿಪಿಐಎಂ ರಾಜ್ಯ ಕಾರ್ಯದರ್ಶಿ ಡಾ.ಕೆ ಪ್ರಕಾಶ್ ಮಾತನಾಡಿ, ದೇಶದಲ್ಲಿ ಕಮ್ಯೂನಿಸ್ಟ್‌ ಪಕ್ಷದ ಕಾರ್ಯಕರ್ತರು ತತ್ವ ಸಿದ್ದಾಂತಗಳಿಗೆ ಬದ್ದರಾಗಿದ್ದಾರೆ ಅಧಿಕಾರಕ್ಕಾಗಿ ಆಸೆ ಪಟ್ಟವರಲ್ಲ ಸಂಯುಕ್ತರಂಗದ ತಂತ್ರಗಾರಿಕೆಯಿಲ್ಲದೇ ಚಳುವಳಿಗೂ ನಷ್ಟವಾಗಿದೆ ಬಯ್ಯಾರೆಡ್ಡಿ ಅಂತಹ ನಾಯಕ ಜಾತಿ ಧರ್ಮ ಪಕ್ಷ ಬಿಟ್ಟು ಸಮಾಜದ ಹಕ್ಕುಗಳಿಗಾಗಿ ಜೀವನವನ್ನು ಮುಡಿಪಾಗಿಟ್ಟಿದ್ದಾರೆ ಬಹುತ್ವ ಭಾರತ ಹಕ್ಕುಗಳಿಗಾಗಿ ನಾವು ಎಲ್ಲರೂ ಒಂದಾಗಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ ರೈತ ಪರವಾದ ಹೋರಾಟಗಳು ಜಿಲ್ಲೆಯಿಂದ ಪ್ರಾರಂಭವಾಗಿ ಯಶಸ್ಸು ಗಳಿಸಲು ಸಾಧ್ಯವಾಗಿದೆ ಅದಕ್ಕಾಗಿ ತ್ಯಾಗ ಮಾಡಿದವರ ನೆನಪು ಬದುಕಿನ ದಾರಿ ನಮಗೆಲ್ಲ ಸ್ಪೂರ್ತಿಯಾಗಿದೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸೌಲಭ್ಯಗಳನ್ನು ಕೊಡಿಸುವ ಚಳುವಳಿ ಹೋರಾಟ ಇವತ್ತಿನ ಸಂದರ್ಭದಲ್ಲಿ ಅವಶ್ಯಕತೆ ಇದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಪಿ.ಆರ್ ಸೂರ್ಯನಾರಾಯಣ ವಹಿಸಿದ್ದರು ಚಳುವಳಿಗಳ ನಾಯಕ ಜಿ.ಸಿ ಬಯ್ಯಾರೆಡ್ಡಿ ಪುಸ್ತಕ ಬಿಡುಗಡೆ ಮಾಡಲಾಯಿತು ಅವರ ಮಗಳು ನಿಲೋನಾ ಮಾತನಾಡಿದರು ವೇದಿಕೆಯಲ್ಲಿ ರೈತ ಸಂಘದ ಅಬ್ಬಣಿ ಶಿವಪ್ಪ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಟಿ.ಎಂ ವೆಂಕಟೇಶ್, ವಿ.ಗೀತಾ, ಪಿ.ಶ್ರೀನಿವಾಸ್, ಎ.ಆರ್ ಬಾಬು, ಪಿ.ತಂಗರಾಜ್, ಮುಂತಾದವರು ಇದ್ದರು.

Ramesh Babu

Journalist

Recent Posts

ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ……

ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…

7 hours ago

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

18 hours ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

1 day ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

1 day ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

1 day ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

2 days ago