Categories: ಕೋಲಾರ

ಸಿಪಿಐಎಂ ರಾಜ್ಯ ಕಾರ್ಯದರ್ಶಿ ಜಿ.ಸಿ ಬಯ್ಯಾರೆಡ್ಡಿಗೆ ನುಡಿನಮನ

ಕೋಲಾರ: ಜನರಿಗೆ ಸಮಾಜದಲ್ಲಿನ ಸಮಸ್ಯೆಗಳ ಬಗ್ಗೆ ಆಕ್ರೋಶವಿದ್ದರೂ ಅವುಗಳನ್ನು ಬಳಸಿಕೊಂಡು ಹೋರಾಟ ರೂಪಿಸಲು ಜನಪ್ರತಿನಿಧಿಗಳು ಸೇರಿದಂತೆ ಸಂಘಸಂಸ್ಥೆಗಳು ವಿಫಲವಾಗಿದ್ದಾರೆ. ವೇದಿಕೆಗಳಲ್ಲಿ ಇದ್ದವರು ಜಾಣತನ ಹೆಚ್ಚಾಗಿ ಬದ್ದತೆಯ ಅರ್ಥವೇ ಕಳೆದುಕೊಳ್ಳುತ್ತಿದೆ ಎಂದು ಮಾಜಿ ಸ್ಪೀಕರ್ ಕೆ.ಆರ್ ರಮೇಶ್ ಕುಮಾರ್ ವಿಷಾದಿಸಿದರು,

ನಗರದ ಪತ್ರಕರ್ತರ ಭವನದಲ್ಲಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ ರೈತ ಮುಖಂಡ ಹಾಗೂ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಜಿ.ಸಿ ಬಯ್ಯಾರೆಡ್ಡಿ ಅವರ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜನರ ಆಕ್ರೋಶದ ನೈಜತೆಯ ಬಗ್ಗೆ ಯಾವುದೇ ವ್ಯಕ್ತಿಯಾಗಲಿ ಪಕ್ಷವಾಗಲಿ ಸಹಾಯ ಮಾಡಲು ಮುಂದಾಗುತ್ತಿಲ್ಲ. ಜನತೆಯ ಅಸಹಾಯಕತೆಯನ್ನು ತಣ್ಣಗಾಗಿಸುವ ನೈಪುಣ್ಯತೆಯನ್ನು ಗೊತ್ತಿದ್ದರೂ ಮುಂದಾಗುವವರ ಸಂಖ್ಯೆ ಇಲ್ಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸುಮಾರು 60 ರ ದಶಕದಲ್ಲಿ ಬೆಂಗಳೂರು ಅಂತಹ ಪ್ರದೇಶದಲ್ಲಿ ಸೈಕಲ್ ಗೆ 25 ಪೈಸೆ ತೆರಿಗೆ ಹಾಕಿದಾಗ ಎಲ್ಲಾ ರಾಜಕೀಯ ಪಕ್ಷಗಳು ಬೀದಿಗೆ ಇಳಿದು ಆಕ್ರೋಶ ವ್ಯಕ್ತಪಡಿಸಿದ್ದರು. ಇವತ್ತು ಜನರ ಸೇವೆ ಹೆಸರಿನಲ್ಲಿ ದರೋಡೆ ಮಾಡುವವರ ವಿರುದ್ದ ಯಾವುದೇ ಆಕ್ರೋಶದ ಧ್ವನಿಯಿಲ್ಲವಾಗಿದೆ ಎಂದರು.

ಕಮ್ಯೂನಿಸ್ಟ್‌ ಚಳುವಳಿಯ ಕಟ್ಟಾಳುಗಳು ನಿರಂತರವಾಗಿ ಅಧ್ಯಯನ ಶೀಲರಾಗಿರುತ್ತಾರೆ. ಅದರಿಂದಲೇ ಅವರು ಮಾತಾಡುವ ಶೈಲಿ ವಿಭಿನ್ನವಾಗಿರುತ್ತದೆ. ಪ್ರತಿಯೊಂದು ಹಂತದಲ್ಲೂ ಜನಪರವಾದ ವಿಚಾರಗಳನ್ನು ಮೈಗೂಡಿಸಿಕೊಂಡು ಹೋಗುತ್ತಾರೆ. ಇವತ್ತಿನ ಕಲುಷಿತ ವಾತಾವರಣದ ರಾಜಕೀಯ ವ್ಯವಸ್ಥೆಯಲ್ಲಿ ನೈಜತೆಯ ರಾಜಕಾರಣ ಮುಖ್ಯವಾಗಿದೆ. ಜನಪರ ಹೋರಾಟಕ್ಕೆ ಜಯ ಸಿಗುತ್ತದೆ. ನಿಮ್ಮ ಜನಮುಖಿ ಸಮಾಜಮುಖಿ ಕಾರ್ಯಕ್ರಮಗಳಿಗೆ ಸದಾ ಬೆಂಬಲ ಇರುತ್ತದೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಮಾತನಾಡಿ, ಕಮ್ಯೂನಿಸ್ಟ್‌ ಚಳುವಳಿಗಳಿಂದಲ್ಲೇ ಜಿಲ್ಲೆಯ ಜನಪರ ಯೋಜನೆಗಳ ಜೊತೆಗೆ ಶಾಶ್ವತ ನೀರಾವರಿ ಯೋಜನೆಗಳ ಜಾರಿಗೆ ಕಾರಣವಾಗಿವೆ. ಬೆಲೆ ಏರಿಕೆ, ಭೂಸ್ವಾಧೀನ ವಿರುದ್ದ ಕೋಮುವಾದಿ ರಾಜಕಾರಣ ಕೊನೆಗಾಣಿಸುವ ನಿಟ್ಟಿನಲ್ಲಿ ಕಮ್ಯೂನಿಸ್ಟ್‌ ಪಕ್ಷವು ನಿರಂತರವಾಗಿ ಹೋರಾಟ ರೂಪಿಸಿದೆ. ದೇಶದಲ್ಲಿ ಜನತಾ ಪರಿಹಾರದ ಪಕ್ಷಗಳು ಹೊಂದಾಣಿಕೆ ರಾಜಕಾರಣ ಮಾಡಿದ್ದರಿಂದ ಕೆಲವು ಕಡೆಯಲ್ಲಿ ರಾಜಕಾರಣದಿಂದ ದೂರವಾಗಿವೆ ಇದು ಬಿಜೆಪಿಗೆ ಲಾಭವಾಗಿದೆ. ಕಮ್ಯೂನಿಸ್ಟ್‌ ಇತಿಹಾಸವನ್ನು ತಿಳಿದು ಜನರನ್ನು ಎಚ್ಚರಿಸುವ ಮೂಲಕ ಉತ್ತಮ ಸಮಾಜದ ನಿರ್ಮಾಣ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಮಾಜಿ ಶಾಸಕ ಜಿ.ವಿ ಶ್ರೀರಾಮರೆಡ್ಡಿ ಮತ್ತು ಜಿ.ಸಿ‌ ಬಯ್ಯಾರೆಡ್ಡಿ ಆಡಳಿತ ಪಕ್ಷಗಳಿಗೆ ನಿರಂತರವಾಗಿ ಎಚ್ಚರಿಕೆ ಕೊಟ್ಟಿದ್ದಾರೆ. ಮಹಿಳೆಯ, ಕಾರ್ಮಿಕರ, ರೈತರ ವಿಧ್ಯಾರ್ಥಿಗಳ ಧ್ವನಿಯಾಗಿ ಕೆಲಸ ಮಾಡಿದ್ದಾರೆ ಅಂತಹವರು ನಮ್ಮಿಂದ ದೂರವಾಗಿದ್ದರಿಂದ ಚಳುವಳಿಗೆ ಹಾಗೂ ಜಿಲ್ಲೆಗೆ ತುಂಬುಲಾರದ ನಷ್ಟವಾಗಿದೆ ಅವರ ಆದರ್ಶಗಳು ನಮಗೆಲ್ಲ ಸ್ಪೂರ್ತಿಯಾಗಬೇಕು ಎಂದರು.

ಈ ಸಂದರ್ಭದಲ್ಲಿ ಸಿಪಿಐಎಂ ರಾಜ್ಯ ಕಾರ್ಯದರ್ಶಿ ಡಾ.ಕೆ ಪ್ರಕಾಶ್ ಮಾತನಾಡಿ, ದೇಶದಲ್ಲಿ ಕಮ್ಯೂನಿಸ್ಟ್‌ ಪಕ್ಷದ ಕಾರ್ಯಕರ್ತರು ತತ್ವ ಸಿದ್ದಾಂತಗಳಿಗೆ ಬದ್ದರಾಗಿದ್ದಾರೆ ಅಧಿಕಾರಕ್ಕಾಗಿ ಆಸೆ ಪಟ್ಟವರಲ್ಲ ಸಂಯುಕ್ತರಂಗದ ತಂತ್ರಗಾರಿಕೆಯಿಲ್ಲದೇ ಚಳುವಳಿಗೂ ನಷ್ಟವಾಗಿದೆ ಬಯ್ಯಾರೆಡ್ಡಿ ಅಂತಹ ನಾಯಕ ಜಾತಿ ಧರ್ಮ ಪಕ್ಷ ಬಿಟ್ಟು ಸಮಾಜದ ಹಕ್ಕುಗಳಿಗಾಗಿ ಜೀವನವನ್ನು ಮುಡಿಪಾಗಿಟ್ಟಿದ್ದಾರೆ ಬಹುತ್ವ ಭಾರತ ಹಕ್ಕುಗಳಿಗಾಗಿ ನಾವು ಎಲ್ಲರೂ ಒಂದಾಗಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ ರೈತ ಪರವಾದ ಹೋರಾಟಗಳು ಜಿಲ್ಲೆಯಿಂದ ಪ್ರಾರಂಭವಾಗಿ ಯಶಸ್ಸು ಗಳಿಸಲು ಸಾಧ್ಯವಾಗಿದೆ ಅದಕ್ಕಾಗಿ ತ್ಯಾಗ ಮಾಡಿದವರ ನೆನಪು ಬದುಕಿನ ದಾರಿ ನಮಗೆಲ್ಲ ಸ್ಪೂರ್ತಿಯಾಗಿದೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸೌಲಭ್ಯಗಳನ್ನು ಕೊಡಿಸುವ ಚಳುವಳಿ ಹೋರಾಟ ಇವತ್ತಿನ ಸಂದರ್ಭದಲ್ಲಿ ಅವಶ್ಯಕತೆ ಇದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಪಿ.ಆರ್ ಸೂರ್ಯನಾರಾಯಣ ವಹಿಸಿದ್ದರು ಚಳುವಳಿಗಳ ನಾಯಕ ಜಿ.ಸಿ ಬಯ್ಯಾರೆಡ್ಡಿ ಪುಸ್ತಕ ಬಿಡುಗಡೆ ಮಾಡಲಾಯಿತು ಅವರ ಮಗಳು ನಿಲೋನಾ ಮಾತನಾಡಿದರು ವೇದಿಕೆಯಲ್ಲಿ ರೈತ ಸಂಘದ ಅಬ್ಬಣಿ ಶಿವಪ್ಪ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಟಿ.ಎಂ ವೆಂಕಟೇಶ್, ವಿ.ಗೀತಾ, ಪಿ.ಶ್ರೀನಿವಾಸ್, ಎ.ಆರ್ ಬಾಬು, ಪಿ.ತಂಗರಾಜ್, ಮುಂತಾದವರು ಇದ್ದರು.

Ramesh Babu

Journalist

Recent Posts

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

7 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

18 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

19 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

23 hours ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

1 day ago

ರಕ್ತ ಸಿಕ್ತ ದೆಹಲಿ… ಇದು ಒಳ್ಳೆಯ ಬೆಳವಣಿಗೆಯಲ್ಲ….

ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…

1 day ago