Categories: ಕೋಲಾರ

ಸಿಪಿಐಎಂ ರಾಜ್ಯ ಕಾರ್ಯದರ್ಶಿ ಜಿ.ಸಿ ಬಯ್ಯಾರೆಡ್ಡಿಗೆ ನುಡಿನಮನ

ಕೋಲಾರ: ಜನರಿಗೆ ಸಮಾಜದಲ್ಲಿನ ಸಮಸ್ಯೆಗಳ ಬಗ್ಗೆ ಆಕ್ರೋಶವಿದ್ದರೂ ಅವುಗಳನ್ನು ಬಳಸಿಕೊಂಡು ಹೋರಾಟ ರೂಪಿಸಲು ಜನಪ್ರತಿನಿಧಿಗಳು ಸೇರಿದಂತೆ ಸಂಘಸಂಸ್ಥೆಗಳು ವಿಫಲವಾಗಿದ್ದಾರೆ. ವೇದಿಕೆಗಳಲ್ಲಿ ಇದ್ದವರು ಜಾಣತನ ಹೆಚ್ಚಾಗಿ ಬದ್ದತೆಯ ಅರ್ಥವೇ ಕಳೆದುಕೊಳ್ಳುತ್ತಿದೆ ಎಂದು ಮಾಜಿ ಸ್ಪೀಕರ್ ಕೆ.ಆರ್ ರಮೇಶ್ ಕುಮಾರ್ ವಿಷಾದಿಸಿದರು,

ನಗರದ ಪತ್ರಕರ್ತರ ಭವನದಲ್ಲಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ ರೈತ ಮುಖಂಡ ಹಾಗೂ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಜಿ.ಸಿ ಬಯ್ಯಾರೆಡ್ಡಿ ಅವರ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜನರ ಆಕ್ರೋಶದ ನೈಜತೆಯ ಬಗ್ಗೆ ಯಾವುದೇ ವ್ಯಕ್ತಿಯಾಗಲಿ ಪಕ್ಷವಾಗಲಿ ಸಹಾಯ ಮಾಡಲು ಮುಂದಾಗುತ್ತಿಲ್ಲ. ಜನತೆಯ ಅಸಹಾಯಕತೆಯನ್ನು ತಣ್ಣಗಾಗಿಸುವ ನೈಪುಣ್ಯತೆಯನ್ನು ಗೊತ್ತಿದ್ದರೂ ಮುಂದಾಗುವವರ ಸಂಖ್ಯೆ ಇಲ್ಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸುಮಾರು 60 ರ ದಶಕದಲ್ಲಿ ಬೆಂಗಳೂರು ಅಂತಹ ಪ್ರದೇಶದಲ್ಲಿ ಸೈಕಲ್ ಗೆ 25 ಪೈಸೆ ತೆರಿಗೆ ಹಾಕಿದಾಗ ಎಲ್ಲಾ ರಾಜಕೀಯ ಪಕ್ಷಗಳು ಬೀದಿಗೆ ಇಳಿದು ಆಕ್ರೋಶ ವ್ಯಕ್ತಪಡಿಸಿದ್ದರು. ಇವತ್ತು ಜನರ ಸೇವೆ ಹೆಸರಿನಲ್ಲಿ ದರೋಡೆ ಮಾಡುವವರ ವಿರುದ್ದ ಯಾವುದೇ ಆಕ್ರೋಶದ ಧ್ವನಿಯಿಲ್ಲವಾಗಿದೆ ಎಂದರು.

ಕಮ್ಯೂನಿಸ್ಟ್‌ ಚಳುವಳಿಯ ಕಟ್ಟಾಳುಗಳು ನಿರಂತರವಾಗಿ ಅಧ್ಯಯನ ಶೀಲರಾಗಿರುತ್ತಾರೆ. ಅದರಿಂದಲೇ ಅವರು ಮಾತಾಡುವ ಶೈಲಿ ವಿಭಿನ್ನವಾಗಿರುತ್ತದೆ. ಪ್ರತಿಯೊಂದು ಹಂತದಲ್ಲೂ ಜನಪರವಾದ ವಿಚಾರಗಳನ್ನು ಮೈಗೂಡಿಸಿಕೊಂಡು ಹೋಗುತ್ತಾರೆ. ಇವತ್ತಿನ ಕಲುಷಿತ ವಾತಾವರಣದ ರಾಜಕೀಯ ವ್ಯವಸ್ಥೆಯಲ್ಲಿ ನೈಜತೆಯ ರಾಜಕಾರಣ ಮುಖ್ಯವಾಗಿದೆ. ಜನಪರ ಹೋರಾಟಕ್ಕೆ ಜಯ ಸಿಗುತ್ತದೆ. ನಿಮ್ಮ ಜನಮುಖಿ ಸಮಾಜಮುಖಿ ಕಾರ್ಯಕ್ರಮಗಳಿಗೆ ಸದಾ ಬೆಂಬಲ ಇರುತ್ತದೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಮಾತನಾಡಿ, ಕಮ್ಯೂನಿಸ್ಟ್‌ ಚಳುವಳಿಗಳಿಂದಲ್ಲೇ ಜಿಲ್ಲೆಯ ಜನಪರ ಯೋಜನೆಗಳ ಜೊತೆಗೆ ಶಾಶ್ವತ ನೀರಾವರಿ ಯೋಜನೆಗಳ ಜಾರಿಗೆ ಕಾರಣವಾಗಿವೆ. ಬೆಲೆ ಏರಿಕೆ, ಭೂಸ್ವಾಧೀನ ವಿರುದ್ದ ಕೋಮುವಾದಿ ರಾಜಕಾರಣ ಕೊನೆಗಾಣಿಸುವ ನಿಟ್ಟಿನಲ್ಲಿ ಕಮ್ಯೂನಿಸ್ಟ್‌ ಪಕ್ಷವು ನಿರಂತರವಾಗಿ ಹೋರಾಟ ರೂಪಿಸಿದೆ. ದೇಶದಲ್ಲಿ ಜನತಾ ಪರಿಹಾರದ ಪಕ್ಷಗಳು ಹೊಂದಾಣಿಕೆ ರಾಜಕಾರಣ ಮಾಡಿದ್ದರಿಂದ ಕೆಲವು ಕಡೆಯಲ್ಲಿ ರಾಜಕಾರಣದಿಂದ ದೂರವಾಗಿವೆ ಇದು ಬಿಜೆಪಿಗೆ ಲಾಭವಾಗಿದೆ. ಕಮ್ಯೂನಿಸ್ಟ್‌ ಇತಿಹಾಸವನ್ನು ತಿಳಿದು ಜನರನ್ನು ಎಚ್ಚರಿಸುವ ಮೂಲಕ ಉತ್ತಮ ಸಮಾಜದ ನಿರ್ಮಾಣ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಮಾಜಿ ಶಾಸಕ ಜಿ.ವಿ ಶ್ರೀರಾಮರೆಡ್ಡಿ ಮತ್ತು ಜಿ.ಸಿ‌ ಬಯ್ಯಾರೆಡ್ಡಿ ಆಡಳಿತ ಪಕ್ಷಗಳಿಗೆ ನಿರಂತರವಾಗಿ ಎಚ್ಚರಿಕೆ ಕೊಟ್ಟಿದ್ದಾರೆ. ಮಹಿಳೆಯ, ಕಾರ್ಮಿಕರ, ರೈತರ ವಿಧ್ಯಾರ್ಥಿಗಳ ಧ್ವನಿಯಾಗಿ ಕೆಲಸ ಮಾಡಿದ್ದಾರೆ ಅಂತಹವರು ನಮ್ಮಿಂದ ದೂರವಾಗಿದ್ದರಿಂದ ಚಳುವಳಿಗೆ ಹಾಗೂ ಜಿಲ್ಲೆಗೆ ತುಂಬುಲಾರದ ನಷ್ಟವಾಗಿದೆ ಅವರ ಆದರ್ಶಗಳು ನಮಗೆಲ್ಲ ಸ್ಪೂರ್ತಿಯಾಗಬೇಕು ಎಂದರು.

ಈ ಸಂದರ್ಭದಲ್ಲಿ ಸಿಪಿಐಎಂ ರಾಜ್ಯ ಕಾರ್ಯದರ್ಶಿ ಡಾ.ಕೆ ಪ್ರಕಾಶ್ ಮಾತನಾಡಿ, ದೇಶದಲ್ಲಿ ಕಮ್ಯೂನಿಸ್ಟ್‌ ಪಕ್ಷದ ಕಾರ್ಯಕರ್ತರು ತತ್ವ ಸಿದ್ದಾಂತಗಳಿಗೆ ಬದ್ದರಾಗಿದ್ದಾರೆ ಅಧಿಕಾರಕ್ಕಾಗಿ ಆಸೆ ಪಟ್ಟವರಲ್ಲ ಸಂಯುಕ್ತರಂಗದ ತಂತ್ರಗಾರಿಕೆಯಿಲ್ಲದೇ ಚಳುವಳಿಗೂ ನಷ್ಟವಾಗಿದೆ ಬಯ್ಯಾರೆಡ್ಡಿ ಅಂತಹ ನಾಯಕ ಜಾತಿ ಧರ್ಮ ಪಕ್ಷ ಬಿಟ್ಟು ಸಮಾಜದ ಹಕ್ಕುಗಳಿಗಾಗಿ ಜೀವನವನ್ನು ಮುಡಿಪಾಗಿಟ್ಟಿದ್ದಾರೆ ಬಹುತ್ವ ಭಾರತ ಹಕ್ಕುಗಳಿಗಾಗಿ ನಾವು ಎಲ್ಲರೂ ಒಂದಾಗಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ ರೈತ ಪರವಾದ ಹೋರಾಟಗಳು ಜಿಲ್ಲೆಯಿಂದ ಪ್ರಾರಂಭವಾಗಿ ಯಶಸ್ಸು ಗಳಿಸಲು ಸಾಧ್ಯವಾಗಿದೆ ಅದಕ್ಕಾಗಿ ತ್ಯಾಗ ಮಾಡಿದವರ ನೆನಪು ಬದುಕಿನ ದಾರಿ ನಮಗೆಲ್ಲ ಸ್ಪೂರ್ತಿಯಾಗಿದೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸೌಲಭ್ಯಗಳನ್ನು ಕೊಡಿಸುವ ಚಳುವಳಿ ಹೋರಾಟ ಇವತ್ತಿನ ಸಂದರ್ಭದಲ್ಲಿ ಅವಶ್ಯಕತೆ ಇದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಪಿ.ಆರ್ ಸೂರ್ಯನಾರಾಯಣ ವಹಿಸಿದ್ದರು ಚಳುವಳಿಗಳ ನಾಯಕ ಜಿ.ಸಿ ಬಯ್ಯಾರೆಡ್ಡಿ ಪುಸ್ತಕ ಬಿಡುಗಡೆ ಮಾಡಲಾಯಿತು ಅವರ ಮಗಳು ನಿಲೋನಾ ಮಾತನಾಡಿದರು ವೇದಿಕೆಯಲ್ಲಿ ರೈತ ಸಂಘದ ಅಬ್ಬಣಿ ಶಿವಪ್ಪ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಟಿ.ಎಂ ವೆಂಕಟೇಶ್, ವಿ.ಗೀತಾ, ಪಿ.ಶ್ರೀನಿವಾಸ್, ಎ.ಆರ್ ಬಾಬು, ಪಿ.ತಂಗರಾಜ್, ಮುಂತಾದವರು ಇದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

17 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

21 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

21 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 day ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago