Categories: ಕೋಲಾರ

ಸಿಪಿಐಎಂ 9ನೇ ತಾಲೂಕು ಸಮ್ಮೇಳನ ಕಾರ್ಯದರ್ಶಿಯಾಗಿ ಟಿ.ಎಂ ವೆಂಕಟೇಶ್ ಮರು ಆಯ್ಕೆ

ಕೋಲಾರ: ಭಾರತ ಕಮ್ಯುನಿಸ್ಟ್ ಪಕ್ಷ ( ಮಾರ್ಕ್ಸ್‌ವಾದಿ) ಸಿಪಿಐಎಂನ 9ನೇ ತಾಲೂಕು ಸಮ್ಮೇಳನವು ನಗರದ ಲಯನ್ಸ್ ಕ್ಲಬ್ ನಲ್ಲಿ ನಡೆಯಿತು ಧ್ವಜಾರೋಹಣವನ್ನು ಪಕ್ಷದ ಹಿರಿಯ ಮುಖಂಡ ಎನ್.ಎನ್ ಶ್ರೀರಾಮ್ ನೇರವೆರಿಸಿದರು ನಂತರ ಎಲ್ಲಾ ಮುಖಂಡರು, ಸದಸ್ಯರು ಅಗಲಿದ ಸಂಗಾತಿಗಳ ಹುತಾತ್ಮ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.

ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಪಕ್ಷದ ಜಿಲ್ಲಾ ಕಾರ್ಯದರ್ಶಿ ಗಾಂಧಿನಗರ ನಾರಾಯಣಸ್ವಾಮಿ ಕೇಂದ್ರದ ಬಿಜೆಪಿ ಸರ್ಕಾರವು ಸಾಮಾನ್ಯ ಜನರ ವಿರೋಧಿ ನೀತಿಗಳಿಂದ ಪ್ರತಿಯೊಬ್ಬರಿಗೂ ತೊಂದರೆ ನೀಡುತ್ತಿದ್ದಾರೆ ಕಾರ್ಮಿಕರು ಮತ್ತು ರೈತರು ಈ ದೇಶದ ಆಸ್ತಿ. ಅನ್ನ ನೀಡುವ ರೈತ ಮತ್ತು ಅಗತ್ಯ ವಸ್ತು ಉತ್ಪಾದಿಸುವ ಕಾರ್ಮಿಕರಿಗೆ ಅನ್ಯಾಯ ಮಾಡಿದೆ ಶ್ರಮಿಕರು ತಮ್ಮ ಹಕ್ಕುಗಳಿಗಾಗಿ ನಿರಂತರವಾಗಿ ಒಂದಲ್ಲ ಒಂದು ರೀತಿಯಲ್ಲಿ ಹೋರಾಟ ಮಾಡಬೇಕಾದ ಸಂದರ್ಭ ಬಂದಿದೆ ಎಂದರು.

ದೇಶದಲ್ಲಿ ದುಡಿಯುವ ವರ್ಗ, ಶೋಷಿತರು, ದಲಿತರು, ರೈತರು, ಅಲ್ಪಸಂಖ್ಯಾತರ, ಅಸ್ಪೃಶ್ಯರು ಇನ್ನುಳಿದ ಕಾರ್ಮಿಕ ವರ್ಗ ಒಗ್ಗೂಡಬೇಕು. ಆಗ ಮಾತ್ರ ಆಳುವ ವರ್ಗ ಅಥವಾ ಬಂಡವಾಳಶಾಹಿಗಳಿಗೆ ಉತ್ತೇಜನ ನೀಡುವವರಿಗೆ ದಿಟ್ಟ ಉತ್ತರ ಕೊಡಲು ಸಾಧ್ಯವಾಗುತ್ತದೆ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಜನಪ್ರತಿನಿಧಿಗಳನ್ನು ಎಚ್ಚರಿಸುವ ನಿಟ್ಟಿನಲ್ಲಿ ಈ ಸಮ್ಮೇಳನ ಯಶಸ್ವಿಯಾಗಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಪಿ.ಶ್ರೀನಿವಾಸ್ ಮಾತನಾಡಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಕೋವಿಡ್ ಸಂದರ್ಭದಲ್ಲಿ ಬಡವರ ರಕ್ಷಿಸಲು ಮುಂದಾಗದೆ, ಬಂಡವಾಳಶಾಹಿಗಳಿಗೆ ನೆರವು ನೀಡುವಲ್ಲಿ ಕಾಲವ್ಯಯ ಮಾಡಿದೆ. ಒಂದರ್ಥದಲ್ಲಿ ಬಡವರ್ಗದ ಸರ್ವನಾಶಕ್ಕೆ ಮುಂದಾಗಿರುವ ಮೋದಿ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ, ಇಂಧನ ಬೆಲೆ ಏರಿಕೆ, ಕೃಷಿ ಸವಲತ್ತು ಬೆಲೆ ಗಗನಕ್ಕೇರಿಸುವುದಲ್ಲೇ ಕಾಲ ಕಳೆದಿದೆ. ಸಾರ್ವಜನಿಕ ರಂಗದ ಶಿಕ್ಷಣ ಸಂಸ್ಥೆ ಸೇರಿದಂತೆ ಸಹಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗಿಯವರಿಗೆ ನೀಡಲು ಮುಂದಾಗಿದೆ ಎಂದು ಆರೋಪಿಸಿದರು.

ಸಮ್ಮೇಳನದಲ್ಲಿ ಮೂರು ವರ್ಷಗಳ ಚಟುವಟಿಕೆಗಳನ್ನು ವಿಮರ್ಶಿಸಿ ನಂತರ ನೂತನ ಕಾರ್ಯದರ್ಶಿಯಾಗಿ ಟಿ.ಎಂ ವೆಂಕಟೇಶ್ ಅವರನ್ನು ಮರು ಆಯ್ಕೆ ಮಾಡಲಾಯಿತು.

ವೇದಿಕೆಯಲ್ಲಿ ಪಕ್ಷದ ಜಿಲ್ಲಾ ಸಮಿತಿ ಸದಸ್ಯರಾದ ವಿಜಯಕೃಷ್ಣ, ಗಂಗಮ್ಮ ಮುಂತಾದವರು ಇದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

7 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

11 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

11 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

16 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago