Categories: ಕೋಲಾರ

ಸಿಪಿಐಎಂ 9ನೇ ತಾಲೂಕು ಸಮ್ಮೇಳನ ಕಾರ್ಯದರ್ಶಿಯಾಗಿ ಟಿ.ಎಂ ವೆಂಕಟೇಶ್ ಮರು ಆಯ್ಕೆ

ಕೋಲಾರ: ಭಾರತ ಕಮ್ಯುನಿಸ್ಟ್ ಪಕ್ಷ ( ಮಾರ್ಕ್ಸ್‌ವಾದಿ) ಸಿಪಿಐಎಂನ 9ನೇ ತಾಲೂಕು ಸಮ್ಮೇಳನವು ನಗರದ ಲಯನ್ಸ್ ಕ್ಲಬ್ ನಲ್ಲಿ ನಡೆಯಿತು ಧ್ವಜಾರೋಹಣವನ್ನು ಪಕ್ಷದ ಹಿರಿಯ ಮುಖಂಡ ಎನ್.ಎನ್ ಶ್ರೀರಾಮ್ ನೇರವೆರಿಸಿದರು ನಂತರ ಎಲ್ಲಾ ಮುಖಂಡರು, ಸದಸ್ಯರು ಅಗಲಿದ ಸಂಗಾತಿಗಳ ಹುತಾತ್ಮ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.

ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಪಕ್ಷದ ಜಿಲ್ಲಾ ಕಾರ್ಯದರ್ಶಿ ಗಾಂಧಿನಗರ ನಾರಾಯಣಸ್ವಾಮಿ ಕೇಂದ್ರದ ಬಿಜೆಪಿ ಸರ್ಕಾರವು ಸಾಮಾನ್ಯ ಜನರ ವಿರೋಧಿ ನೀತಿಗಳಿಂದ ಪ್ರತಿಯೊಬ್ಬರಿಗೂ ತೊಂದರೆ ನೀಡುತ್ತಿದ್ದಾರೆ ಕಾರ್ಮಿಕರು ಮತ್ತು ರೈತರು ಈ ದೇಶದ ಆಸ್ತಿ. ಅನ್ನ ನೀಡುವ ರೈತ ಮತ್ತು ಅಗತ್ಯ ವಸ್ತು ಉತ್ಪಾದಿಸುವ ಕಾರ್ಮಿಕರಿಗೆ ಅನ್ಯಾಯ ಮಾಡಿದೆ ಶ್ರಮಿಕರು ತಮ್ಮ ಹಕ್ಕುಗಳಿಗಾಗಿ ನಿರಂತರವಾಗಿ ಒಂದಲ್ಲ ಒಂದು ರೀತಿಯಲ್ಲಿ ಹೋರಾಟ ಮಾಡಬೇಕಾದ ಸಂದರ್ಭ ಬಂದಿದೆ ಎಂದರು.

ದೇಶದಲ್ಲಿ ದುಡಿಯುವ ವರ್ಗ, ಶೋಷಿತರು, ದಲಿತರು, ರೈತರು, ಅಲ್ಪಸಂಖ್ಯಾತರ, ಅಸ್ಪೃಶ್ಯರು ಇನ್ನುಳಿದ ಕಾರ್ಮಿಕ ವರ್ಗ ಒಗ್ಗೂಡಬೇಕು. ಆಗ ಮಾತ್ರ ಆಳುವ ವರ್ಗ ಅಥವಾ ಬಂಡವಾಳಶಾಹಿಗಳಿಗೆ ಉತ್ತೇಜನ ನೀಡುವವರಿಗೆ ದಿಟ್ಟ ಉತ್ತರ ಕೊಡಲು ಸಾಧ್ಯವಾಗುತ್ತದೆ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಜನಪ್ರತಿನಿಧಿಗಳನ್ನು ಎಚ್ಚರಿಸುವ ನಿಟ್ಟಿನಲ್ಲಿ ಈ ಸಮ್ಮೇಳನ ಯಶಸ್ವಿಯಾಗಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಪಿ.ಶ್ರೀನಿವಾಸ್ ಮಾತನಾಡಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಕೋವಿಡ್ ಸಂದರ್ಭದಲ್ಲಿ ಬಡವರ ರಕ್ಷಿಸಲು ಮುಂದಾಗದೆ, ಬಂಡವಾಳಶಾಹಿಗಳಿಗೆ ನೆರವು ನೀಡುವಲ್ಲಿ ಕಾಲವ್ಯಯ ಮಾಡಿದೆ. ಒಂದರ್ಥದಲ್ಲಿ ಬಡವರ್ಗದ ಸರ್ವನಾಶಕ್ಕೆ ಮುಂದಾಗಿರುವ ಮೋದಿ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ, ಇಂಧನ ಬೆಲೆ ಏರಿಕೆ, ಕೃಷಿ ಸವಲತ್ತು ಬೆಲೆ ಗಗನಕ್ಕೇರಿಸುವುದಲ್ಲೇ ಕಾಲ ಕಳೆದಿದೆ. ಸಾರ್ವಜನಿಕ ರಂಗದ ಶಿಕ್ಷಣ ಸಂಸ್ಥೆ ಸೇರಿದಂತೆ ಸಹಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗಿಯವರಿಗೆ ನೀಡಲು ಮುಂದಾಗಿದೆ ಎಂದು ಆರೋಪಿಸಿದರು.

ಸಮ್ಮೇಳನದಲ್ಲಿ ಮೂರು ವರ್ಷಗಳ ಚಟುವಟಿಕೆಗಳನ್ನು ವಿಮರ್ಶಿಸಿ ನಂತರ ನೂತನ ಕಾರ್ಯದರ್ಶಿಯಾಗಿ ಟಿ.ಎಂ ವೆಂಕಟೇಶ್ ಅವರನ್ನು ಮರು ಆಯ್ಕೆ ಮಾಡಲಾಯಿತು.

ವೇದಿಕೆಯಲ್ಲಿ ಪಕ್ಷದ ಜಿಲ್ಲಾ ಸಮಿತಿ ಸದಸ್ಯರಾದ ವಿಜಯಕೃಷ್ಣ, ಗಂಗಮ್ಮ ಮುಂತಾದವರು ಇದ್ದರು.

Ramesh Babu

Journalist

Recent Posts

ಕೊಡಗು ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಮಳೆ

ಕೊಡಗು ಜಿಲ್ಲೆಯ ವಿವಿಧೆಡೆ ಇಂದು ಸಂಜೆ ಗುಡುಗು ಸಹಿತ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ವಿರಾಜಪೇಟೆ ತಾಲೂಕಿನ ವಿವಿಧ ಭಾಗಗಳು ಪೊನ್ನಂಪೇಟೆ…

19 minutes ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 6.5 ಕೋಟಿ ರೂ. ಮೌಲ್ಯದ 18.6 ಕೆಜಿ ಹೈಡ್ರೋಪೋನಿಕ್ ಗಾಂಜಾ ಸೀಜ್

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಎರಡು‌ ಪ್ರತ್ಯೇಕ ಪ್ರಕರಣಗಳಲ್ಲಿ‌ ಕೋಟಿ ಕೋಟಿ ಮೌಲ್ಯದ…

38 minutes ago

ಚರಂಡಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ..!

ಚರಂಡಿಯಲ್ಲಿ‌ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿರುವ ಘಟನೆ ದೇವನಹಳ್ಳಿ ಪಟ್ಟಣದ ಸ್ವರ್ಣಾದ್ರಿ ಹೋಟೆಲ್ ಮುಂಭಾಗದಲ್ಲಿ ನಡೆದಿದೆ... ಮಹಿಳೆ…

5 hours ago

ಮಾ.6ರಂದು ಗುತ್ತಿಗೆದಾರರ ಸಂಘದಿಂದ ಪ್ರತಿಭಟನೆ: ಸರ್ಕಾರ ಬಾಕಿ ಉಳಿಸಿಕೊಂಡಿರುವ ಗುತ್ತಿಗೆದಾರರ 38 ಸಾವಿರ ಕೋಟಿ ಬಿಲ್‌ಗಾಗಿ ಆಗ್ರಹ

ಕಳೆದ ಎರಡ್ಮೂರು ವರ್ಷಗಳಿಂದ ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿರುವ ಗುತ್ತಿಗೆದಾರರ 38 ಸಾವಿರ ಕೋಟಿ ಬಿಲ್‌ಗಾಗಿ ಆಗ್ರಹಿಸಿ ಮಾ.6ರಂದು ಬೆಂಗಳೂರಿನ…

7 hours ago

ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮ: ವಿಜೇತರಿಗೆ ಬಹುಮಾನ ವಿತರಣೆ

ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ…

11 hours ago

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

22 hours ago