Categories: ಕೋಲಾರ

ಸಿಪಿಐಎಂ 9ನೇ ತಾಲೂಕು ಸಮ್ಮೇಳನ ಕಾರ್ಯದರ್ಶಿಯಾಗಿ ಟಿ.ಎಂ ವೆಂಕಟೇಶ್ ಮರು ಆಯ್ಕೆ

ಕೋಲಾರ: ಭಾರತ ಕಮ್ಯುನಿಸ್ಟ್ ಪಕ್ಷ ( ಮಾರ್ಕ್ಸ್‌ವಾದಿ) ಸಿಪಿಐಎಂನ 9ನೇ ತಾಲೂಕು ಸಮ್ಮೇಳನವು ನಗರದ ಲಯನ್ಸ್ ಕ್ಲಬ್ ನಲ್ಲಿ ನಡೆಯಿತು ಧ್ವಜಾರೋಹಣವನ್ನು ಪಕ್ಷದ ಹಿರಿಯ ಮುಖಂಡ ಎನ್.ಎನ್ ಶ್ರೀರಾಮ್ ನೇರವೆರಿಸಿದರು ನಂತರ ಎಲ್ಲಾ ಮುಖಂಡರು, ಸದಸ್ಯರು ಅಗಲಿದ ಸಂಗಾತಿಗಳ ಹುತಾತ್ಮ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.

ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಪಕ್ಷದ ಜಿಲ್ಲಾ ಕಾರ್ಯದರ್ಶಿ ಗಾಂಧಿನಗರ ನಾರಾಯಣಸ್ವಾಮಿ ಕೇಂದ್ರದ ಬಿಜೆಪಿ ಸರ್ಕಾರವು ಸಾಮಾನ್ಯ ಜನರ ವಿರೋಧಿ ನೀತಿಗಳಿಂದ ಪ್ರತಿಯೊಬ್ಬರಿಗೂ ತೊಂದರೆ ನೀಡುತ್ತಿದ್ದಾರೆ ಕಾರ್ಮಿಕರು ಮತ್ತು ರೈತರು ಈ ದೇಶದ ಆಸ್ತಿ. ಅನ್ನ ನೀಡುವ ರೈತ ಮತ್ತು ಅಗತ್ಯ ವಸ್ತು ಉತ್ಪಾದಿಸುವ ಕಾರ್ಮಿಕರಿಗೆ ಅನ್ಯಾಯ ಮಾಡಿದೆ ಶ್ರಮಿಕರು ತಮ್ಮ ಹಕ್ಕುಗಳಿಗಾಗಿ ನಿರಂತರವಾಗಿ ಒಂದಲ್ಲ ಒಂದು ರೀತಿಯಲ್ಲಿ ಹೋರಾಟ ಮಾಡಬೇಕಾದ ಸಂದರ್ಭ ಬಂದಿದೆ ಎಂದರು.

ದೇಶದಲ್ಲಿ ದುಡಿಯುವ ವರ್ಗ, ಶೋಷಿತರು, ದಲಿತರು, ರೈತರು, ಅಲ್ಪಸಂಖ್ಯಾತರ, ಅಸ್ಪೃಶ್ಯರು ಇನ್ನುಳಿದ ಕಾರ್ಮಿಕ ವರ್ಗ ಒಗ್ಗೂಡಬೇಕು. ಆಗ ಮಾತ್ರ ಆಳುವ ವರ್ಗ ಅಥವಾ ಬಂಡವಾಳಶಾಹಿಗಳಿಗೆ ಉತ್ತೇಜನ ನೀಡುವವರಿಗೆ ದಿಟ್ಟ ಉತ್ತರ ಕೊಡಲು ಸಾಧ್ಯವಾಗುತ್ತದೆ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಜನಪ್ರತಿನಿಧಿಗಳನ್ನು ಎಚ್ಚರಿಸುವ ನಿಟ್ಟಿನಲ್ಲಿ ಈ ಸಮ್ಮೇಳನ ಯಶಸ್ವಿಯಾಗಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಪಿ.ಶ್ರೀನಿವಾಸ್ ಮಾತನಾಡಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಕೋವಿಡ್ ಸಂದರ್ಭದಲ್ಲಿ ಬಡವರ ರಕ್ಷಿಸಲು ಮುಂದಾಗದೆ, ಬಂಡವಾಳಶಾಹಿಗಳಿಗೆ ನೆರವು ನೀಡುವಲ್ಲಿ ಕಾಲವ್ಯಯ ಮಾಡಿದೆ. ಒಂದರ್ಥದಲ್ಲಿ ಬಡವರ್ಗದ ಸರ್ವನಾಶಕ್ಕೆ ಮುಂದಾಗಿರುವ ಮೋದಿ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ, ಇಂಧನ ಬೆಲೆ ಏರಿಕೆ, ಕೃಷಿ ಸವಲತ್ತು ಬೆಲೆ ಗಗನಕ್ಕೇರಿಸುವುದಲ್ಲೇ ಕಾಲ ಕಳೆದಿದೆ. ಸಾರ್ವಜನಿಕ ರಂಗದ ಶಿಕ್ಷಣ ಸಂಸ್ಥೆ ಸೇರಿದಂತೆ ಸಹಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗಿಯವರಿಗೆ ನೀಡಲು ಮುಂದಾಗಿದೆ ಎಂದು ಆರೋಪಿಸಿದರು.

ಸಮ್ಮೇಳನದಲ್ಲಿ ಮೂರು ವರ್ಷಗಳ ಚಟುವಟಿಕೆಗಳನ್ನು ವಿಮರ್ಶಿಸಿ ನಂತರ ನೂತನ ಕಾರ್ಯದರ್ಶಿಯಾಗಿ ಟಿ.ಎಂ ವೆಂಕಟೇಶ್ ಅವರನ್ನು ಮರು ಆಯ್ಕೆ ಮಾಡಲಾಯಿತು.

ವೇದಿಕೆಯಲ್ಲಿ ಪಕ್ಷದ ಜಿಲ್ಲಾ ಸಮಿತಿ ಸದಸ್ಯರಾದ ವಿಜಯಕೃಷ್ಣ, ಗಂಗಮ್ಮ ಮುಂತಾದವರು ಇದ್ದರು.

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

4 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

14 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

16 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

21 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

23 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

1 day ago