Categories: ಕೋಲಾರ

ಸಿಪಿಐಎಂ 9ನೇ ತಾಲೂಕು ಸಮ್ಮೇಳನ ಕಾರ್ಯದರ್ಶಿಯಾಗಿ ಟಿ.ಎಂ ವೆಂಕಟೇಶ್ ಮರು ಆಯ್ಕೆ

ಕೋಲಾರ: ಭಾರತ ಕಮ್ಯುನಿಸ್ಟ್ ಪಕ್ಷ ( ಮಾರ್ಕ್ಸ್‌ವಾದಿ) ಸಿಪಿಐಎಂನ 9ನೇ ತಾಲೂಕು ಸಮ್ಮೇಳನವು ನಗರದ ಲಯನ್ಸ್ ಕ್ಲಬ್ ನಲ್ಲಿ ನಡೆಯಿತು ಧ್ವಜಾರೋಹಣವನ್ನು ಪಕ್ಷದ ಹಿರಿಯ ಮುಖಂಡ ಎನ್.ಎನ್ ಶ್ರೀರಾಮ್ ನೇರವೆರಿಸಿದರು ನಂತರ ಎಲ್ಲಾ ಮುಖಂಡರು, ಸದಸ್ಯರು ಅಗಲಿದ ಸಂಗಾತಿಗಳ ಹುತಾತ್ಮ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.

ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಪಕ್ಷದ ಜಿಲ್ಲಾ ಕಾರ್ಯದರ್ಶಿ ಗಾಂಧಿನಗರ ನಾರಾಯಣಸ್ವಾಮಿ ಕೇಂದ್ರದ ಬಿಜೆಪಿ ಸರ್ಕಾರವು ಸಾಮಾನ್ಯ ಜನರ ವಿರೋಧಿ ನೀತಿಗಳಿಂದ ಪ್ರತಿಯೊಬ್ಬರಿಗೂ ತೊಂದರೆ ನೀಡುತ್ತಿದ್ದಾರೆ ಕಾರ್ಮಿಕರು ಮತ್ತು ರೈತರು ಈ ದೇಶದ ಆಸ್ತಿ. ಅನ್ನ ನೀಡುವ ರೈತ ಮತ್ತು ಅಗತ್ಯ ವಸ್ತು ಉತ್ಪಾದಿಸುವ ಕಾರ್ಮಿಕರಿಗೆ ಅನ್ಯಾಯ ಮಾಡಿದೆ ಶ್ರಮಿಕರು ತಮ್ಮ ಹಕ್ಕುಗಳಿಗಾಗಿ ನಿರಂತರವಾಗಿ ಒಂದಲ್ಲ ಒಂದು ರೀತಿಯಲ್ಲಿ ಹೋರಾಟ ಮಾಡಬೇಕಾದ ಸಂದರ್ಭ ಬಂದಿದೆ ಎಂದರು.

ದೇಶದಲ್ಲಿ ದುಡಿಯುವ ವರ್ಗ, ಶೋಷಿತರು, ದಲಿತರು, ರೈತರು, ಅಲ್ಪಸಂಖ್ಯಾತರ, ಅಸ್ಪೃಶ್ಯರು ಇನ್ನುಳಿದ ಕಾರ್ಮಿಕ ವರ್ಗ ಒಗ್ಗೂಡಬೇಕು. ಆಗ ಮಾತ್ರ ಆಳುವ ವರ್ಗ ಅಥವಾ ಬಂಡವಾಳಶಾಹಿಗಳಿಗೆ ಉತ್ತೇಜನ ನೀಡುವವರಿಗೆ ದಿಟ್ಟ ಉತ್ತರ ಕೊಡಲು ಸಾಧ್ಯವಾಗುತ್ತದೆ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಜನಪ್ರತಿನಿಧಿಗಳನ್ನು ಎಚ್ಚರಿಸುವ ನಿಟ್ಟಿನಲ್ಲಿ ಈ ಸಮ್ಮೇಳನ ಯಶಸ್ವಿಯಾಗಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಪಿ.ಶ್ರೀನಿವಾಸ್ ಮಾತನಾಡಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಕೋವಿಡ್ ಸಂದರ್ಭದಲ್ಲಿ ಬಡವರ ರಕ್ಷಿಸಲು ಮುಂದಾಗದೆ, ಬಂಡವಾಳಶಾಹಿಗಳಿಗೆ ನೆರವು ನೀಡುವಲ್ಲಿ ಕಾಲವ್ಯಯ ಮಾಡಿದೆ. ಒಂದರ್ಥದಲ್ಲಿ ಬಡವರ್ಗದ ಸರ್ವನಾಶಕ್ಕೆ ಮುಂದಾಗಿರುವ ಮೋದಿ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ, ಇಂಧನ ಬೆಲೆ ಏರಿಕೆ, ಕೃಷಿ ಸವಲತ್ತು ಬೆಲೆ ಗಗನಕ್ಕೇರಿಸುವುದಲ್ಲೇ ಕಾಲ ಕಳೆದಿದೆ. ಸಾರ್ವಜನಿಕ ರಂಗದ ಶಿಕ್ಷಣ ಸಂಸ್ಥೆ ಸೇರಿದಂತೆ ಸಹಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗಿಯವರಿಗೆ ನೀಡಲು ಮುಂದಾಗಿದೆ ಎಂದು ಆರೋಪಿಸಿದರು.

ಸಮ್ಮೇಳನದಲ್ಲಿ ಮೂರು ವರ್ಷಗಳ ಚಟುವಟಿಕೆಗಳನ್ನು ವಿಮರ್ಶಿಸಿ ನಂತರ ನೂತನ ಕಾರ್ಯದರ್ಶಿಯಾಗಿ ಟಿ.ಎಂ ವೆಂಕಟೇಶ್ ಅವರನ್ನು ಮರು ಆಯ್ಕೆ ಮಾಡಲಾಯಿತು.

ವೇದಿಕೆಯಲ್ಲಿ ಪಕ್ಷದ ಜಿಲ್ಲಾ ಸಮಿತಿ ಸದಸ್ಯರಾದ ವಿಜಯಕೃಷ್ಣ, ಗಂಗಮ್ಮ ಮುಂತಾದವರು ಇದ್ದರು.

Ramesh Babu

Journalist

Recent Posts

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

5 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

6 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

6 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

7 hours ago

ಗೌರಿ ಗಣೇಶ ಹಬ್ಬ: ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ-ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…

8 hours ago

ಜೇನುತುಪ್ಪಕ್ಕೂ ವರುಣನ ಬರೆ! ಮಳೆ ಕೊರತೆ ಹಿನ್ನೆಲೆಯಲ್ಲಿ ಒಣಗಿದ ಸಸ್ಯಗಳು: ಆಹಾರ ಅರಸಿ ಕಿಮೀಗಟ್ಟಲೆ ಜೇನುಹುಳುಗಳ ವಲಸೆ: ಜೇನುತುಪ್ಪ ಉತ್ಪಾದನೆಗೆ ಹೊಡೆತ

ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…

12 hours ago