Categories: ಕೋಲಾರ

ಸಿಪಿಐಎಂ 9ನೇ ತಾಲೂಕು ಸಮ್ಮೇಳನ ಕಾರ್ಯದರ್ಶಿಯಾಗಿ ಟಿ.ಎಂ ವೆಂಕಟೇಶ್ ಮರು ಆಯ್ಕೆ

ಕೋಲಾರ: ಭಾರತ ಕಮ್ಯುನಿಸ್ಟ್ ಪಕ್ಷ ( ಮಾರ್ಕ್ಸ್‌ವಾದಿ) ಸಿಪಿಐಎಂನ 9ನೇ ತಾಲೂಕು ಸಮ್ಮೇಳನವು ನಗರದ ಲಯನ್ಸ್ ಕ್ಲಬ್ ನಲ್ಲಿ ನಡೆಯಿತು ಧ್ವಜಾರೋಹಣವನ್ನು ಪಕ್ಷದ ಹಿರಿಯ ಮುಖಂಡ ಎನ್.ಎನ್ ಶ್ರೀರಾಮ್ ನೇರವೆರಿಸಿದರು ನಂತರ ಎಲ್ಲಾ ಮುಖಂಡರು, ಸದಸ್ಯರು ಅಗಲಿದ ಸಂಗಾತಿಗಳ ಹುತಾತ್ಮ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.

ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಪಕ್ಷದ ಜಿಲ್ಲಾ ಕಾರ್ಯದರ್ಶಿ ಗಾಂಧಿನಗರ ನಾರಾಯಣಸ್ವಾಮಿ ಕೇಂದ್ರದ ಬಿಜೆಪಿ ಸರ್ಕಾರವು ಸಾಮಾನ್ಯ ಜನರ ವಿರೋಧಿ ನೀತಿಗಳಿಂದ ಪ್ರತಿಯೊಬ್ಬರಿಗೂ ತೊಂದರೆ ನೀಡುತ್ತಿದ್ದಾರೆ ಕಾರ್ಮಿಕರು ಮತ್ತು ರೈತರು ಈ ದೇಶದ ಆಸ್ತಿ. ಅನ್ನ ನೀಡುವ ರೈತ ಮತ್ತು ಅಗತ್ಯ ವಸ್ತು ಉತ್ಪಾದಿಸುವ ಕಾರ್ಮಿಕರಿಗೆ ಅನ್ಯಾಯ ಮಾಡಿದೆ ಶ್ರಮಿಕರು ತಮ್ಮ ಹಕ್ಕುಗಳಿಗಾಗಿ ನಿರಂತರವಾಗಿ ಒಂದಲ್ಲ ಒಂದು ರೀತಿಯಲ್ಲಿ ಹೋರಾಟ ಮಾಡಬೇಕಾದ ಸಂದರ್ಭ ಬಂದಿದೆ ಎಂದರು.

ದೇಶದಲ್ಲಿ ದುಡಿಯುವ ವರ್ಗ, ಶೋಷಿತರು, ದಲಿತರು, ರೈತರು, ಅಲ್ಪಸಂಖ್ಯಾತರ, ಅಸ್ಪೃಶ್ಯರು ಇನ್ನುಳಿದ ಕಾರ್ಮಿಕ ವರ್ಗ ಒಗ್ಗೂಡಬೇಕು. ಆಗ ಮಾತ್ರ ಆಳುವ ವರ್ಗ ಅಥವಾ ಬಂಡವಾಳಶಾಹಿಗಳಿಗೆ ಉತ್ತೇಜನ ನೀಡುವವರಿಗೆ ದಿಟ್ಟ ಉತ್ತರ ಕೊಡಲು ಸಾಧ್ಯವಾಗುತ್ತದೆ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಜನಪ್ರತಿನಿಧಿಗಳನ್ನು ಎಚ್ಚರಿಸುವ ನಿಟ್ಟಿನಲ್ಲಿ ಈ ಸಮ್ಮೇಳನ ಯಶಸ್ವಿಯಾಗಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಪಿ.ಶ್ರೀನಿವಾಸ್ ಮಾತನಾಡಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಕೋವಿಡ್ ಸಂದರ್ಭದಲ್ಲಿ ಬಡವರ ರಕ್ಷಿಸಲು ಮುಂದಾಗದೆ, ಬಂಡವಾಳಶಾಹಿಗಳಿಗೆ ನೆರವು ನೀಡುವಲ್ಲಿ ಕಾಲವ್ಯಯ ಮಾಡಿದೆ. ಒಂದರ್ಥದಲ್ಲಿ ಬಡವರ್ಗದ ಸರ್ವನಾಶಕ್ಕೆ ಮುಂದಾಗಿರುವ ಮೋದಿ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ, ಇಂಧನ ಬೆಲೆ ಏರಿಕೆ, ಕೃಷಿ ಸವಲತ್ತು ಬೆಲೆ ಗಗನಕ್ಕೇರಿಸುವುದಲ್ಲೇ ಕಾಲ ಕಳೆದಿದೆ. ಸಾರ್ವಜನಿಕ ರಂಗದ ಶಿಕ್ಷಣ ಸಂಸ್ಥೆ ಸೇರಿದಂತೆ ಸಹಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗಿಯವರಿಗೆ ನೀಡಲು ಮುಂದಾಗಿದೆ ಎಂದು ಆರೋಪಿಸಿದರು.

ಸಮ್ಮೇಳನದಲ್ಲಿ ಮೂರು ವರ್ಷಗಳ ಚಟುವಟಿಕೆಗಳನ್ನು ವಿಮರ್ಶಿಸಿ ನಂತರ ನೂತನ ಕಾರ್ಯದರ್ಶಿಯಾಗಿ ಟಿ.ಎಂ ವೆಂಕಟೇಶ್ ಅವರನ್ನು ಮರು ಆಯ್ಕೆ ಮಾಡಲಾಯಿತು.

ವೇದಿಕೆಯಲ್ಲಿ ಪಕ್ಷದ ಜಿಲ್ಲಾ ಸಮಿತಿ ಸದಸ್ಯರಾದ ವಿಜಯಕೃಷ್ಣ, ಗಂಗಮ್ಮ ಮುಂತಾದವರು ಇದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

9 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

10 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

12 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

13 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

18 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

21 hours ago