2017-18 ಶೈಕ್ಷಣಿಕ ವರ್ಷದಿಂದ ಮಾರುತಿ ವಿದ್ಯಾ ಮಂದಿರ್ (ಎಂ.ವಿ. ಎಂ) ಶಾಲೆ ತನ್ನ ಶ್ರೇಷ್ಠತೆಯ ಪರಂಪರೆಯನ್ನು ಮುಂದುವರೆಸುತ್ತಾ 2024–25ನೇ ಸಾಲಿನ ಸಿಬಿಎಸ್ಇ 10ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಶೇಕಡಾ 100ರಷ್ಟು ಫಲಿತಾಂಶ ಗಳಿಸಿದೆ.
ಕೇಂದ್ರಿತ ಅಧ್ಯಯನ:
ಪ್ರಸಕ್ತ ಶೈಕ್ಷಣಿಕ ವರ್ಷದ ಫಲಿತಾಂಶದ ವಿಶೇಷತೆ ಏನೆಂದರೆ, ಈ ವಿದ್ಯಾರ್ಥಿಗಳು ಯಾರೂ ಖಾಸಗಿ ಟ್ಯೂಷನ್ ಅಥವಾ ಕೋಚಿಂಗ್ ಕ್ಲಾಸ್ ಗಳಿಗೆ ಹೋಗದೇ ಸಂಪೂರ್ಣವಾಗಿ ಶಾಲೆಯ ಗುಣಮಟ್ಟದ ಶಿಕ್ಷಣ, ಶಿಕ್ಷಕರ ಶ್ರಮ ಹಾಗೂ ವಿದ್ಯಾರ್ಥಿ ಕೇಂದ್ರಿತ ಅಧ್ಯಯನ ಸಾಧ್ಯವಾಗಿದೆ.
ಬಲವಾದ ಸಂದೇಶ:
ಎಂವಿಎಂ ಶಾಲೆಯಲ್ಲಿ ಉತ್ತಮ ನುರಿತ ಬೋಧನಾ ವಿಧಾನ, ನಾಯಕತ್ವದ ಬಲವನ್ನು ಎತ್ತಿ ತೋರಿಸುವುದಲ್ಲದೆ, ಗುಣಮಟ್ಟದ ಶಿಕ್ಷಣ ನಗರ ಕೇಂದ್ರಗಳಿಗೆ ಮಾತ್ರ ಸೀಮಿತವಾಗಿಲ್ಲ ಎಂಬ ಬಲವಾದ ಸಂದೇಶ ನೀಡುತ್ತದೆ ಎಂದು ಶಾಲೆಯ ಪ್ರಾಂಶುಪಾಲ ಕೆ.ಎಸ್.ಗೌರವ್ ಹೇಳಿದರು.
ಈ ಬಾರಿಯೂ ವಿದ್ಯಾರ್ಥಿಗಳು ಸಿಬಿಎಸ್ಇ 10ನೇ ತರಗತಿಯ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದಿರುವುದು ಸಂತಸದ ವಿಷಯ. ಮುಖ್ಯವಾಗಿ ನಮ್ಮ ಶಾಲೆಯ ವಿದ್ಯಾರ್ಥಿಗಳು ಶಾಲೆಯ ಪಾಠ ಬೋಧನೆಗಳನ್ನು ಹೊರತುಪಡಿಸಿ ಬೇರೆ ಎಲ್ಲಿಯೂ ತರಬೇತಿ ಪಡೆದಿಲ್ಲ ನಮ್ಮ ಶಾಲೆಯಲ್ಲಿಯೇ ನಡೆಸಿದ ಕಲಿಕೆಗೆ ಪೂರಕವಾದ ವಿಶೇಷ ಚಟುವಟಿಕೆ, ವಿಶೇಷ ತರಗತಿಯಿಂದ ಮಕ್ಕಳು ಉತ್ತಮ ಫಲಿತಾಂಶ ಪಡೆದಿದ್ದಾರೆಂದರು.
ಕ್ಯಾಮೆರಾ ಕಣ್ಗಾವಲಿನಲ್ಲೂ ಮಕ್ಕಳಿಂದ ಉತ್ತಮ ಸಾಧನೆ: ಶ್ರೀನಿವಾಸ್ ಮೆಚ್ಚುಗೆ
ಶಾಲೆಯ ಸಂಸ್ಥಾಪಕ ಅಧ್ಯಕ್ಷ ಕೆ. ಶ್ರೀನಿವಾಸ್ ಮಾತನಾಡಿ, ಕಳೆದ 08 ವರ್ಷಗಳಿಂದ ಶೇ.100 ಫಲಿತಾಂಶವನ್ನು ಶಾಲೆಯು ಪಡೆಯುತ್ತಿದೆ. ಈ ಬಾರಿ ಕ್ಯಾಮೆರಾ ಕಣ್ಣಾವಲಿನಲ್ಲಿ ನಡೆದ ಕಟ್ಟುನಿಟ್ಟಿನ ಪರೀಕ್ಷೆಯಲ್ಲೂ ನೂರರಷ್ಟು ಫಲಿತಾಂಶ ಪಡೆದಿರುವುದು ಶ್ಲಾಘನೀಯ, ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕ ತಂಡದ ಸದಸ್ಯರಿಗೆ ಅಭಿನಂದನೆ ಎಂದರು. ಈ ಸಾಧನೆ ಸಂದರ್ಭದಲ್ಲಿ ಅಧ್ಯಕ್ಷ ಕೆ.ಶ್ರೀನಿವಾಸ್, ಕಾರ್ಯದರ್ಶಿ ರಾಧಾ ಶ್ರೀನಿವಾಸ, ಪ್ರಾಂಶುಪಾಲ ಗೌರವ್ ಕೆ.ಎಸ್. ಮುಖ್ಯೊಪಾಧ್ಯಾಯರಾದ ರಾಘವೇಂದ್ರ, ನಾಗೇಶ್, ಶಿಕ್ಷಕರಾದ ಸರಸ್ವತಿ, ರೂಪ ಇದ್ದರು.
1. ದೀಕ್ಷಿತ್ ಎಲ್ – 9.1 CGPA
2. ಗೌತಮ್ ಗೌಡ .ಆರ್ – 9.08 CGPA
3. ಸೋನಿಕ. ಟಿ – 9.05 CGPA
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…