2017-18 ಶೈಕ್ಷಣಿಕ ವರ್ಷದಿಂದ ಮಾರುತಿ ವಿದ್ಯಾ ಮಂದಿರ್ (ಎಂ.ವಿ. ಎಂ) ಶಾಲೆ ತನ್ನ ಶ್ರೇಷ್ಠತೆಯ ಪರಂಪರೆಯನ್ನು ಮುಂದುವರೆಸುತ್ತಾ 2024–25ನೇ ಸಾಲಿನ ಸಿಬಿಎಸ್ಇ 10ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಶೇಕಡಾ 100ರಷ್ಟು ಫಲಿತಾಂಶ ಗಳಿಸಿದೆ.
ಕೇಂದ್ರಿತ ಅಧ್ಯಯನ:
ಪ್ರಸಕ್ತ ಶೈಕ್ಷಣಿಕ ವರ್ಷದ ಫಲಿತಾಂಶದ ವಿಶೇಷತೆ ಏನೆಂದರೆ, ಈ ವಿದ್ಯಾರ್ಥಿಗಳು ಯಾರೂ ಖಾಸಗಿ ಟ್ಯೂಷನ್ ಅಥವಾ ಕೋಚಿಂಗ್ ಕ್ಲಾಸ್ ಗಳಿಗೆ ಹೋಗದೇ ಸಂಪೂರ್ಣವಾಗಿ ಶಾಲೆಯ ಗುಣಮಟ್ಟದ ಶಿಕ್ಷಣ, ಶಿಕ್ಷಕರ ಶ್ರಮ ಹಾಗೂ ವಿದ್ಯಾರ್ಥಿ ಕೇಂದ್ರಿತ ಅಧ್ಯಯನ ಸಾಧ್ಯವಾಗಿದೆ.
ಬಲವಾದ ಸಂದೇಶ:
ಎಂವಿಎಂ ಶಾಲೆಯಲ್ಲಿ ಉತ್ತಮ ನುರಿತ ಬೋಧನಾ ವಿಧಾನ, ನಾಯಕತ್ವದ ಬಲವನ್ನು ಎತ್ತಿ ತೋರಿಸುವುದಲ್ಲದೆ, ಗುಣಮಟ್ಟದ ಶಿಕ್ಷಣ ನಗರ ಕೇಂದ್ರಗಳಿಗೆ ಮಾತ್ರ ಸೀಮಿತವಾಗಿಲ್ಲ ಎಂಬ ಬಲವಾದ ಸಂದೇಶ ನೀಡುತ್ತದೆ ಎಂದು ಶಾಲೆಯ ಪ್ರಾಂಶುಪಾಲ ಕೆ.ಎಸ್.ಗೌರವ್ ಹೇಳಿದರು.
ಈ ಬಾರಿಯೂ ವಿದ್ಯಾರ್ಥಿಗಳು ಸಿಬಿಎಸ್ಇ 10ನೇ ತರಗತಿಯ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದಿರುವುದು ಸಂತಸದ ವಿಷಯ. ಮುಖ್ಯವಾಗಿ ನಮ್ಮ ಶಾಲೆಯ ವಿದ್ಯಾರ್ಥಿಗಳು ಶಾಲೆಯ ಪಾಠ ಬೋಧನೆಗಳನ್ನು ಹೊರತುಪಡಿಸಿ ಬೇರೆ ಎಲ್ಲಿಯೂ ತರಬೇತಿ ಪಡೆದಿಲ್ಲ ನಮ್ಮ ಶಾಲೆಯಲ್ಲಿಯೇ ನಡೆಸಿದ ಕಲಿಕೆಗೆ ಪೂರಕವಾದ ವಿಶೇಷ ಚಟುವಟಿಕೆ, ವಿಶೇಷ ತರಗತಿಯಿಂದ ಮಕ್ಕಳು ಉತ್ತಮ ಫಲಿತಾಂಶ ಪಡೆದಿದ್ದಾರೆಂದರು.
ಕ್ಯಾಮೆರಾ ಕಣ್ಗಾವಲಿನಲ್ಲೂ ಮಕ್ಕಳಿಂದ ಉತ್ತಮ ಸಾಧನೆ: ಶ್ರೀನಿವಾಸ್ ಮೆಚ್ಚುಗೆ
ಶಾಲೆಯ ಸಂಸ್ಥಾಪಕ ಅಧ್ಯಕ್ಷ ಕೆ. ಶ್ರೀನಿವಾಸ್ ಮಾತನಾಡಿ, ಕಳೆದ 08 ವರ್ಷಗಳಿಂದ ಶೇ.100 ಫಲಿತಾಂಶವನ್ನು ಶಾಲೆಯು ಪಡೆಯುತ್ತಿದೆ. ಈ ಬಾರಿ ಕ್ಯಾಮೆರಾ ಕಣ್ಣಾವಲಿನಲ್ಲಿ ನಡೆದ ಕಟ್ಟುನಿಟ್ಟಿನ ಪರೀಕ್ಷೆಯಲ್ಲೂ ನೂರರಷ್ಟು ಫಲಿತಾಂಶ ಪಡೆದಿರುವುದು ಶ್ಲಾಘನೀಯ, ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕ ತಂಡದ ಸದಸ್ಯರಿಗೆ ಅಭಿನಂದನೆ ಎಂದರು. ಈ ಸಾಧನೆ ಸಂದರ್ಭದಲ್ಲಿ ಅಧ್ಯಕ್ಷ ಕೆ.ಶ್ರೀನಿವಾಸ್, ಕಾರ್ಯದರ್ಶಿ ರಾಧಾ ಶ್ರೀನಿವಾಸ, ಪ್ರಾಂಶುಪಾಲ ಗೌರವ್ ಕೆ.ಎಸ್. ಮುಖ್ಯೊಪಾಧ್ಯಾಯರಾದ ರಾಘವೇಂದ್ರ, ನಾಗೇಶ್, ಶಿಕ್ಷಕರಾದ ಸರಸ್ವತಿ, ರೂಪ ಇದ್ದರು.
1. ದೀಕ್ಷಿತ್ ಎಲ್ – 9.1 CGPA
2. ಗೌತಮ್ ಗೌಡ .ಆರ್ – 9.08 CGPA
3. ಸೋನಿಕ. ಟಿ – 9.05 CGPA
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…