ಸಿಬಿಎಸ್‌ಸಿ ಫಲಿತಾಂಶ‌: ಮಾರುತಿ ವಿದ್ಯಾ ಮಂದಿರ್ ಶಾಲೆಗೆ ಶೇಕಡ 100 ಫಲಿತಾಂಶ

2017-18 ಶೈಕ್ಷಣಿಕ ವರ್ಷದಿಂದ ಮಾರುತಿ ವಿದ್ಯಾ ಮಂದಿರ್ (ಎಂ.ವಿ. ಎಂ) ಶಾಲೆ ತನ್ನ ಶ್ರೇಷ್ಠತೆಯ ಪರಂಪರೆಯನ್ನು ಮುಂದುವರೆಸುತ್ತಾ 2024–25ನೇ ಸಾಲಿನ ಸಿಬಿಎಸ್‌ಇ 10ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಶೇಕಡಾ 100ರಷ್ಟು ಫಲಿತಾಂಶ ಗಳಿಸಿದೆ.

ಕೇಂದ್ರಿತ ಅಧ್ಯಯನ:

ಪ್ರಸಕ್ತ ಶೈಕ್ಷಣಿಕ ವರ್ಷದ ಫಲಿತಾಂಶದ ವಿಶೇಷತೆ ಏನೆಂದರೆ, ಈ ವಿದ್ಯಾರ್ಥಿಗಳು ಯಾರೂ ಖಾಸಗಿ ಟ್ಯೂಷನ್ ಅಥವಾ ಕೋಚಿಂಗ್ ಕ್ಲಾಸ್ ಗಳಿಗೆ ಹೋಗದೇ ಸಂಪೂರ್ಣವಾಗಿ ಶಾಲೆಯ ಗುಣಮಟ್ಟದ ಶಿಕ್ಷಣ, ಶಿಕ್ಷಕರ ಶ್ರಮ ಹಾಗೂ ವಿದ್ಯಾರ್ಥಿ ಕೇಂದ್ರಿತ ಅಧ್ಯಯನ ಸಾಧ್ಯವಾಗಿದೆ.

ಬಲವಾದ ಸಂದೇಶ:

ಎಂವಿಎಂ ಶಾಲೆಯಲ್ಲಿ ಉತ್ತಮ ನುರಿತ ಬೋಧನಾ ವಿಧಾನ, ನಾಯಕತ್ವದ ಬಲವನ್ನು ಎತ್ತಿ ತೋರಿಸುವುದಲ್ಲದೆ, ಗುಣಮಟ್ಟದ ಶಿಕ್ಷಣ ನಗರ ಕೇಂದ್ರಗಳಿಗೆ ಮಾತ್ರ ಸೀಮಿತವಾಗಿಲ್ಲ ಎಂಬ ಬಲವಾದ ಸಂದೇಶ ನೀಡುತ್ತದೆ ಎಂದು ಶಾಲೆಯ ಪ್ರಾಂಶುಪಾಲ ಕೆ.ಎಸ್.ಗೌರವ್ ಹೇಳಿದರು.

ಈ ಬಾರಿಯೂ ವಿದ್ಯಾರ್ಥಿಗಳು ಸಿಬಿಎಸ್‌ಇ 10ನೇ ತರಗತಿಯ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದಿರುವುದು ಸಂತಸದ ವಿಷಯ. ಮುಖ್ಯವಾಗಿ ನಮ್ಮ ಶಾಲೆಯ ವಿದ್ಯಾರ್ಥಿಗಳು ಶಾಲೆಯ ಪಾಠ ಬೋಧನೆಗಳನ್ನು ಹೊರತುಪಡಿಸಿ ಬೇರೆ ಎಲ್ಲಿಯೂ ತರಬೇತಿ ಪಡೆದಿಲ್ಲ ನಮ್ಮ ಶಾಲೆಯಲ್ಲಿಯೇ ನಡೆಸಿದ ಕಲಿಕೆಗೆ ಪೂರಕವಾದ ವಿಶೇಷ ಚಟುವಟಿಕೆ, ವಿಶೇಷ ತರಗತಿಯಿಂದ ಮಕ್ಕಳು ಉತ್ತಮ ಫಲಿತಾಂಶ ಪಡೆದಿದ್ದಾರೆಂದರು.

ಕ್ಯಾಮೆರಾ ಕಣ್ಗಾವಲಿನಲ್ಲೂ ಮಕ್ಕಳಿಂದ ಉತ್ತಮ ಸಾಧನೆ: ಶ್ರೀನಿವಾಸ್ ಮೆಚ್ಚುಗೆ

ಶಾಲೆಯ ಸಂಸ್ಥಾಪಕ ಅಧ್ಯಕ್ಷ ಕೆ. ಶ್ರೀನಿವಾಸ್ ಮಾತನಾಡಿ, ಕಳೆದ 08 ವರ್ಷಗಳಿಂದ ಶೇ.100 ಫಲಿತಾಂಶವನ್ನು ಶಾಲೆಯು ಪಡೆಯುತ್ತಿದೆ. ಈ ಬಾರಿ ಕ್ಯಾಮೆರಾ ಕಣ್ಣಾವಲಿನಲ್ಲಿ ನಡೆದ ಕಟ್ಟುನಿಟ್ಟಿನ ಪರೀಕ್ಷೆಯಲ್ಲೂ ನೂರರಷ್ಟು ಫಲಿತಾಂಶ ಪಡೆದಿರುವುದು ಶ್ಲಾಘನೀಯ, ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕ ತಂಡದ ಸದಸ್ಯರಿಗೆ ಅಭಿನಂದನೆ ಎಂದರು. ಈ ಸಾಧನೆ ಸಂದರ್ಭದಲ್ಲಿ ಅಧ್ಯಕ್ಷ ಕೆ.ಶ್ರೀನಿವಾಸ್, ಕಾರ್ಯದರ್ಶಿ ರಾಧಾ ಶ್ರೀನಿವಾಸ, ಪ್ರಾಂಶುಪಾಲ ಗೌರವ್ ಕೆ.ಎಸ್. ಮುಖ್ಯೊಪಾಧ್ಯಾಯರಾದ ರಾಘವೇಂದ್ರ, ನಾಗೇಶ್, ಶಿಕ್ಷಕರಾದ ಸರಸ್ವತಿ, ರೂಪ ಇದ್ದರು.

1. ದೀಕ್ಷಿತ್ ಎಲ್ – 9.1 CGPA
2. ಗೌತಮ್ ಗೌಡ .ಆರ್ – 9.08 CGPA
3. ಸೋನಿಕ. ಟಿ – 9.05 CGPA

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

12 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

21 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

22 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago