ಸಿಬಿಎಸ್‌ಸಿ ಫಲಿತಾಂಶ‌: ಮಾರುತಿ ವಿದ್ಯಾ ಮಂದಿರ್ ಶಾಲೆಗೆ ಶೇಕಡ 100 ಫಲಿತಾಂಶ

2017-18 ಶೈಕ್ಷಣಿಕ ವರ್ಷದಿಂದ ಮಾರುತಿ ವಿದ್ಯಾ ಮಂದಿರ್ (ಎಂ.ವಿ. ಎಂ) ಶಾಲೆ ತನ್ನ ಶ್ರೇಷ್ಠತೆಯ ಪರಂಪರೆಯನ್ನು ಮುಂದುವರೆಸುತ್ತಾ 2024–25ನೇ ಸಾಲಿನ ಸಿಬಿಎಸ್‌ಇ 10ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಶೇಕಡಾ 100ರಷ್ಟು ಫಲಿತಾಂಶ ಗಳಿಸಿದೆ.

ಕೇಂದ್ರಿತ ಅಧ್ಯಯನ:

ಪ್ರಸಕ್ತ ಶೈಕ್ಷಣಿಕ ವರ್ಷದ ಫಲಿತಾಂಶದ ವಿಶೇಷತೆ ಏನೆಂದರೆ, ಈ ವಿದ್ಯಾರ್ಥಿಗಳು ಯಾರೂ ಖಾಸಗಿ ಟ್ಯೂಷನ್ ಅಥವಾ ಕೋಚಿಂಗ್ ಕ್ಲಾಸ್ ಗಳಿಗೆ ಹೋಗದೇ ಸಂಪೂರ್ಣವಾಗಿ ಶಾಲೆಯ ಗುಣಮಟ್ಟದ ಶಿಕ್ಷಣ, ಶಿಕ್ಷಕರ ಶ್ರಮ ಹಾಗೂ ವಿದ್ಯಾರ್ಥಿ ಕೇಂದ್ರಿತ ಅಧ್ಯಯನ ಸಾಧ್ಯವಾಗಿದೆ.

ಬಲವಾದ ಸಂದೇಶ:

ಎಂವಿಎಂ ಶಾಲೆಯಲ್ಲಿ ಉತ್ತಮ ನುರಿತ ಬೋಧನಾ ವಿಧಾನ, ನಾಯಕತ್ವದ ಬಲವನ್ನು ಎತ್ತಿ ತೋರಿಸುವುದಲ್ಲದೆ, ಗುಣಮಟ್ಟದ ಶಿಕ್ಷಣ ನಗರ ಕೇಂದ್ರಗಳಿಗೆ ಮಾತ್ರ ಸೀಮಿತವಾಗಿಲ್ಲ ಎಂಬ ಬಲವಾದ ಸಂದೇಶ ನೀಡುತ್ತದೆ ಎಂದು ಶಾಲೆಯ ಪ್ರಾಂಶುಪಾಲ ಕೆ.ಎಸ್.ಗೌರವ್ ಹೇಳಿದರು.

ಈ ಬಾರಿಯೂ ವಿದ್ಯಾರ್ಥಿಗಳು ಸಿಬಿಎಸ್‌ಇ 10ನೇ ತರಗತಿಯ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದಿರುವುದು ಸಂತಸದ ವಿಷಯ. ಮುಖ್ಯವಾಗಿ ನಮ್ಮ ಶಾಲೆಯ ವಿದ್ಯಾರ್ಥಿಗಳು ಶಾಲೆಯ ಪಾಠ ಬೋಧನೆಗಳನ್ನು ಹೊರತುಪಡಿಸಿ ಬೇರೆ ಎಲ್ಲಿಯೂ ತರಬೇತಿ ಪಡೆದಿಲ್ಲ ನಮ್ಮ ಶಾಲೆಯಲ್ಲಿಯೇ ನಡೆಸಿದ ಕಲಿಕೆಗೆ ಪೂರಕವಾದ ವಿಶೇಷ ಚಟುವಟಿಕೆ, ವಿಶೇಷ ತರಗತಿಯಿಂದ ಮಕ್ಕಳು ಉತ್ತಮ ಫಲಿತಾಂಶ ಪಡೆದಿದ್ದಾರೆಂದರು.

ಕ್ಯಾಮೆರಾ ಕಣ್ಗಾವಲಿನಲ್ಲೂ ಮಕ್ಕಳಿಂದ ಉತ್ತಮ ಸಾಧನೆ: ಶ್ರೀನಿವಾಸ್ ಮೆಚ್ಚುಗೆ

ಶಾಲೆಯ ಸಂಸ್ಥಾಪಕ ಅಧ್ಯಕ್ಷ ಕೆ. ಶ್ರೀನಿವಾಸ್ ಮಾತನಾಡಿ, ಕಳೆದ 08 ವರ್ಷಗಳಿಂದ ಶೇ.100 ಫಲಿತಾಂಶವನ್ನು ಶಾಲೆಯು ಪಡೆಯುತ್ತಿದೆ. ಈ ಬಾರಿ ಕ್ಯಾಮೆರಾ ಕಣ್ಣಾವಲಿನಲ್ಲಿ ನಡೆದ ಕಟ್ಟುನಿಟ್ಟಿನ ಪರೀಕ್ಷೆಯಲ್ಲೂ ನೂರರಷ್ಟು ಫಲಿತಾಂಶ ಪಡೆದಿರುವುದು ಶ್ಲಾಘನೀಯ, ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕ ತಂಡದ ಸದಸ್ಯರಿಗೆ ಅಭಿನಂದನೆ ಎಂದರು. ಈ ಸಾಧನೆ ಸಂದರ್ಭದಲ್ಲಿ ಅಧ್ಯಕ್ಷ ಕೆ.ಶ್ರೀನಿವಾಸ್, ಕಾರ್ಯದರ್ಶಿ ರಾಧಾ ಶ್ರೀನಿವಾಸ, ಪ್ರಾಂಶುಪಾಲ ಗೌರವ್ ಕೆ.ಎಸ್. ಮುಖ್ಯೊಪಾಧ್ಯಾಯರಾದ ರಾಘವೇಂದ್ರ, ನಾಗೇಶ್, ಶಿಕ್ಷಕರಾದ ಸರಸ್ವತಿ, ರೂಪ ಇದ್ದರು.

1. ದೀಕ್ಷಿತ್ ಎಲ್ – 9.1 CGPA
2. ಗೌತಮ್ ಗೌಡ .ಆರ್ – 9.08 CGPA
3. ಸೋನಿಕ. ಟಿ – 9.05 CGPA

Ramesh Babu

Journalist

Recent Posts

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

2 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

4 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

15 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

16 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago