ನಗರದ ಎಂಎಸ್ ವಿ ಪಬ್ಲಿಕ್ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿಯಾದ ಹರ್ಷಿತಾ.ಎಂ., CBSE ದಕ್ಷಿಣ ವಲಯ ವಿಭಾಗದ ಅಂತರ್ ಶಾಲಾ ಟೈಕ್ವಾಂಡೋ ಸ್ಪರ್ಧೆಯಲ್ಲಿ ಭಾಗವಹಿಸಿ ತೀರ್ವವಾದ ಪೈಪೋಟಿಯನ್ನು ನೀಡುವುದರ ಮೂಲಕ ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡು ಶಾಲೆ, ಪೋಷಕರು ಹಾಗೂ ನಗರಕ್ಕೆ ಕೀರ್ತಿ ತಂದಿದ್ದಾರೆ.
ಈ ಸ್ಪರ್ಧೆಯು ಅ.19 ರಿಂದ 21ರವರೆಗೆ ಬೆಳಗಾವಿಯಲ್ಲಿ ಆಯೋಜಿಸಲಾಗಿತ್ತು, ಸುಮಾರು 265 ಶಾಲೆಗಳ 2,500ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
14 ವರ್ಷದೊಳಗಿನ ಹಾಗೂ 37 KG ವಿಭಾಗದಲ್ಲಿ ಹರ್ಷಿತಾ ಪಾಲ್ಗೊಂಡು, ಬೆಳ್ಳಿ ಪದಕವನ್ನು ಪಡೆದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುವುದು ಹೆಮ್ಮೆಯ ವಿಷಯ.
ಶಾಲಾ ಅಧ್ಯಕ್ಷರಾದ ಎ. ಸುಬ್ರಮಣ್ಯ, ಕಾರ್ಯದರ್ಶಿ ಮಂಜುಳಾ ಸುಬ್ರಮಣ್ಯ, ಉಪಾಧ್ಯಕ್ಷ ಸ್ವರೂಪ್, ಪ್ರಾಂಶುಪಾಲರಾದ ರಮ್ಯಾ.ಬಿ.ವಿ. ಹಾಗೂ ಶಿಕ್ಷಕವೃಂದ, ಟೇಕ್ವಾಂಡೋ ತಂಡ ಹಾಗೂ ಟೇಕ್ವಾಂಡೋ ತರಬೇತುದಾರ ಶಪರಮೇಶ್ವರ್ ರವರು ಸಾಧನೆಗೈದ ಕುಮಾರಿ ಹರ್ಷಿತಾ.ಎಂ ಅವರನ್ನು ಅಭಿನಂದಿಸಿದ್ದಾರೆ.
ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…
ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…