ಸಿಬಿಎಸ್ ಸಿ ದಕ್ಷಿಣ ವಲಯ ಅಂತರ್ ಶಾಲಾ ಟೈಕ್ವಾಂಡೋ ಕ್ರೀಡಾಕೂಟ: ಟೈಕ್ವಾಂಡೋ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದ ನಗರದ ಎಂಎಸ್ ವಿ ಶಾಲಾ ವಿದ್ಯಾರ್ಥಿನಿ ಹರ್ಷಿತಾ.ಎಂ

ನಗರದ ಎಂಎಸ್ ವಿ ಪಬ್ಲಿಕ್ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿಯಾದ ಹರ್ಷಿತಾ.ಎಂ., CBSE ದಕ್ಷಿಣ ವಲಯ ವಿಭಾಗದ ಅಂತರ್ ಶಾಲಾ ಟೈಕ್ವಾಂಡೋ ಸ್ಪರ್ಧೆಯಲ್ಲಿ ಭಾಗವಹಿಸಿ ತೀರ್ವವಾದ ಪೈಪೋಟಿಯನ್ನು ನೀಡುವುದರ ಮೂಲಕ ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡು ಶಾಲೆ, ಪೋಷಕರು ಹಾಗೂ‌ ನಗರಕ್ಕೆ ಕೀರ್ತಿ ತಂದಿದ್ದಾರೆ.

ಈ ಸ್ಪರ್ಧೆಯು ಅ.19 ರಿಂದ 21ರವರೆಗೆ ಬೆಳಗಾವಿಯಲ್ಲಿ ಆಯೋಜಿಸಲಾಗಿತ್ತು, ಸುಮಾರು 265 ಶಾಲೆಗಳ 2,500ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

14 ವರ್ಷದೊಳಗಿನ ಹಾಗೂ 37 KG ವಿಭಾಗದಲ್ಲಿ ಹರ್ಷಿತಾ ಪಾಲ್ಗೊಂಡು, ಬೆಳ್ಳಿ ಪದಕವನ್ನು ಪಡೆದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುವುದು ಹೆಮ್ಮೆಯ ವಿಷಯ.

ಶಾಲಾ ಅಧ್ಯಕ್ಷರಾದ ಎ. ಸುಬ್ರಮಣ್ಯ, ಕಾರ್ಯದರ್ಶಿ ಮಂಜುಳಾ ಸುಬ್ರಮಣ್ಯ, ಉಪಾಧ್ಯಕ್ಷ ಸ್ವರೂಪ್, ಪ್ರಾಂಶುಪಾಲರಾದ  ರಮ್ಯಾ.ಬಿ.ವಿ. ಹಾಗೂ ಶಿಕ್ಷಕವೃಂದ, ಟೇಕ್ವಾಂಡೋ ತಂಡ ಹಾಗೂ ಟೇಕ್ವಾಂಡೋ ತರಬೇತುದಾರ ಶಪರಮೇಶ್ವರ್ ರವರು ಸಾಧನೆಗೈದ ಕುಮಾರಿ ಹರ್ಷಿತಾ.ಎಂ ಅವರನ್ನು ಅಭಿನಂದಿಸಿದ್ದಾರೆ.

Ramesh Babu

Journalist

Recent Posts

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

43 minutes ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

11 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

12 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

20 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

3 days ago