ನಗರದ ಎಂಎಸ್ ವಿ ಪಬ್ಲಿಕ್ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿಯಾದ ಹರ್ಷಿತಾ.ಎಂ., CBSE ದಕ್ಷಿಣ ವಲಯ ವಿಭಾಗದ ಅಂತರ್ ಶಾಲಾ ಟೈಕ್ವಾಂಡೋ ಸ್ಪರ್ಧೆಯಲ್ಲಿ ಭಾಗವಹಿಸಿ ತೀರ್ವವಾದ ಪೈಪೋಟಿಯನ್ನು ನೀಡುವುದರ ಮೂಲಕ ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡು ಶಾಲೆ, ಪೋಷಕರು ಹಾಗೂ ನಗರಕ್ಕೆ ಕೀರ್ತಿ ತಂದಿದ್ದಾರೆ.
ಈ ಸ್ಪರ್ಧೆಯು ಅ.19 ರಿಂದ 21ರವರೆಗೆ ಬೆಳಗಾವಿಯಲ್ಲಿ ಆಯೋಜಿಸಲಾಗಿತ್ತು, ಸುಮಾರು 265 ಶಾಲೆಗಳ 2,500ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
14 ವರ್ಷದೊಳಗಿನ ಹಾಗೂ 37 KG ವಿಭಾಗದಲ್ಲಿ ಹರ್ಷಿತಾ ಪಾಲ್ಗೊಂಡು, ಬೆಳ್ಳಿ ಪದಕವನ್ನು ಪಡೆದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುವುದು ಹೆಮ್ಮೆಯ ವಿಷಯ.
ಶಾಲಾ ಅಧ್ಯಕ್ಷರಾದ ಎ. ಸುಬ್ರಮಣ್ಯ, ಕಾರ್ಯದರ್ಶಿ ಮಂಜುಳಾ ಸುಬ್ರಮಣ್ಯ, ಉಪಾಧ್ಯಕ್ಷ ಸ್ವರೂಪ್, ಪ್ರಾಂಶುಪಾಲರಾದ ರಮ್ಯಾ.ಬಿ.ವಿ. ಹಾಗೂ ಶಿಕ್ಷಕವೃಂದ, ಟೇಕ್ವಾಂಡೋ ತಂಡ ಹಾಗೂ ಟೇಕ್ವಾಂಡೋ ತರಬೇತುದಾರ ಶಪರಮೇಶ್ವರ್ ರವರು ಸಾಧನೆಗೈದ ಕುಮಾರಿ ಹರ್ಷಿತಾ.ಎಂ ಅವರನ್ನು ಅಭಿನಂದಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…