ನಗರದ ಎಂಎಸ್ ವಿ ಪಬ್ಲಿಕ್ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿಯಾದ ಹರ್ಷಿತಾ.ಎಂ., CBSE ದಕ್ಷಿಣ ವಲಯ ವಿಭಾಗದ ಅಂತರ್ ಶಾಲಾ ಟೈಕ್ವಾಂಡೋ ಸ್ಪರ್ಧೆಯಲ್ಲಿ ಭಾಗವಹಿಸಿ ತೀರ್ವವಾದ ಪೈಪೋಟಿಯನ್ನು ನೀಡುವುದರ ಮೂಲಕ ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡು ಶಾಲೆ, ಪೋಷಕರು ಹಾಗೂ ನಗರಕ್ಕೆ ಕೀರ್ತಿ ತಂದಿದ್ದಾರೆ.
ಈ ಸ್ಪರ್ಧೆಯು ಅ.19 ರಿಂದ 21ರವರೆಗೆ ಬೆಳಗಾವಿಯಲ್ಲಿ ಆಯೋಜಿಸಲಾಗಿತ್ತು, ಸುಮಾರು 265 ಶಾಲೆಗಳ 2,500ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
14 ವರ್ಷದೊಳಗಿನ ಹಾಗೂ 37 KG ವಿಭಾಗದಲ್ಲಿ ಹರ್ಷಿತಾ ಪಾಲ್ಗೊಂಡು, ಬೆಳ್ಳಿ ಪದಕವನ್ನು ಪಡೆದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುವುದು ಹೆಮ್ಮೆಯ ವಿಷಯ.
ಶಾಲಾ ಅಧ್ಯಕ್ಷರಾದ ಎ. ಸುಬ್ರಮಣ್ಯ, ಕಾರ್ಯದರ್ಶಿ ಮಂಜುಳಾ ಸುಬ್ರಮಣ್ಯ, ಉಪಾಧ್ಯಕ್ಷ ಸ್ವರೂಪ್, ಪ್ರಾಂಶುಪಾಲರಾದ ರಮ್ಯಾ.ಬಿ.ವಿ. ಹಾಗೂ ಶಿಕ್ಷಕವೃಂದ, ಟೇಕ್ವಾಂಡೋ ತಂಡ ಹಾಗೂ ಟೇಕ್ವಾಂಡೋ ತರಬೇತುದಾರ ಶಪರಮೇಶ್ವರ್ ರವರು ಸಾಧನೆಗೈದ ಕುಮಾರಿ ಹರ್ಷಿತಾ.ಎಂ ಅವರನ್ನು ಅಭಿನಂದಿಸಿದ್ದಾರೆ.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…