ಸಿಮೆಂಟ್ ಉತ್ಪಾದನ ಕೈಗಾರಿಕೆ ಪ್ರಾರಂಭಕ್ಕೆ ತೀವ್ರ ವಿರೋಧ

ತಾಲೂಕಿನ ಕಂಟನಕುಂಟೆ ಹಾಗೂ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿ ಜಮೀನಿನಲ್ಲಿ ಸಿಮೆಂಟ್ ಉತ್ಪಾಧನ ಕೈಗಾರಿಕೆ ಪ್ರಾರಂಭಿಸಲು ಗ್ರಾಮ ಪಂಚಾಯಿತಿ ವತಿಯಿಂದ ಅನುಮತಿ ನೀಡಿರುವುದನ್ನು ರದ್ದುಗೊಳಿಸುವಂತೆ ಗುರುವಾರ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಜಿ.ಎಲ್.ನಂಜೇಗೌಡ ನೇತೃತ್ವದಲ್ಲಿ ಪಿಡಿಒ ಅವರಿಗೆ ಮನವಿ ಪತ್ರಸಲ್ಲಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಸಿಮೆಂಟ್ ಕೈಗಾರಿಕೆ ಸ್ಥಾಪನೆ ಮಾಡುವ ಕುರಿತಂತೆ ಸ್ಥಳೀಯ ರೈತರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಗಮನಕ್ಕು ಸಹ ತಾರದಲೇ ನಿರಪೇಕ್ಷಣ ಪ್ರಮಾಣ ಪತ್ರವನ್ನು ನೀಡಲಾಗಿದೆ. ಇದೇ ರೀತಿ ಕಂಟನಕುಂಟೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಹ ಸದಸ್ಯರು,ಸ್ಥಳೀಯ ರೈತರ ಅಭಿಪ್ರಾಯ ಕೇಳದಲೇ ಅನುಮತಿ ನೀಡಿರುವುದು ಖಂಡನೀಯ.

ದೊಡ್ಡಬಳ್ಳಾಪುರ ನಗರಕ್ಕೆ ಸಮೀಪದಲ್ಲೇ ಇರುವ ಈ ಎರಡೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೈತರ ಸಂಖ್ಯೆಯೇ ಹೆಚ್ಚಾಗಿದೆ. ರೇಷ್ಮೆ, ಹೂವು, ದ್ರಾಕ್ಷಿ, ವಿವಿಧ ರೀತಿಯ ಹಣ್ಣು,ತರಕಾರಿಗಳನ್ನು ಹೆಚ್ಚಾಗಿ ಬೇಳೆಯುವ ಪ್ರದೇಶವು ಇದಾಗಿದೆ.

ಕೃಷಿ ಭೂಮಿಯಲ್ಲಿ ಕೈಗಾರಿಕೆ ಸ್ಥಾಪನೆ ಮಾಡಲು ಸಾರ್ವಜನಿಕ ಸಭೆಯನ್ನು ನಡೆಸಿ ಜನರ ಅಭಿಪ್ರಾಯವನ್ನು ಪಡೆಯಬೇಕು. ಆದರೆ ಈ ಯಾವುದೇ ನಿಯಮವನ್ನು ಪಾಲಿಸದೆ, ಗ್ರಾಮ ಪಂಚಾಯಿತಿ ಸದಸ್ಯರ ಗಮನಕ್ಕು ಸಹ ಸಭೆಯಲ್ಲಿ ತಾರದಲೆ ಕೈಗಾರಿಕೆ ಸ್ಥಾಪನೆಗೆ ಅನುಮತಿ ನೀಡಿರುವುದನ್ನು ರದ್ದುಪಡಿಸುವಂತೆ ಮನವಿ ಸಲ್ಲಿಸಲಾಗಿದೆ.

ಈ ಪ್ರದೇಶದಲ್ಲಿ ಸಿಮೆಂಟ್ ಕೈಗಾರಿಕೆಯಿಂದ ಬರುವ ದೂಳಿನಿಂದ ಸಾವಿರಾರು ಎಕರೆಯಲ್ಲಿ ಕೃಷಿ ಮಾಡುವುದನ್ನೇ ರೈತರು ಕೈಬಿಡಬೇಕಾದ ಸ್ಥಿತಿ ಬರಲಿದೆ. ಕೆಲವೇ ಜನರ ಉದ್ಯೋಗದಿಂದ ಸಾವಿರಾರು ಕೃಷಿ ಕುಟುಂಬಗಳು ಬೆಳೆ ಇಲ್ಲದೆ ಬರಿಗೈ ಆಗುವಂತಹ ಸ್ಥಿತಿ ನಿರ್ಮಾಣವಾಗಲಿದೆ. ಬಯಲು ಪ್ರದೇಶ ಇರುವ ಕಡೆಯಲ್ಲಿ ಸ್ಥಾಪನೆ ಮಾಡಬೇಕಿರುವ ಕೈಗಾರಿಕೆಯನ್ನು ಜನವಸತಿ ಹಾಗೂ ಸಮೃದ್ಧ ಕೃಷಿ ಇರುವ ಸ್ಥಳದಲ್ಲಿ ಸ್ಥಾಪನೆ ಮಾಡುತ್ತಿರುವ ಕ್ರಮವೇ ಅವೈಜ್ಞಾನಿಕತೆಯಿಂದ ಕೂಡಿದೆ ಎಂದು ದೂರಿದ್ದಾರೆ.

ಮನವಿ ಸಲ್ಲಿಕೆ ಸಂದರ್ಭದಲ್ಲಿ ಸಿಮೆಂಟ್ ಕೈಗಾರಿಕೆ ಸ್ಥಾಪನ ಮಾಡುತ್ತಿರುವ ಸುತ್ತಮುತ್ತಲಿನ ಗ್ರಾಮದ ಕೃಷಿಕರಾದ ಬಾಲಚಂದ್ರ, ಶ್ರೀಧರ್, ಶ್ರೀನಿವಾಸರೆಡ್ಡಿ, ಮುನೇಗೌಡ, ಶ್ರೀಕಂಠಮೂರ್ತಿ, ಶೆಟ್ಟಪ್ಪ, ಮನೋಹರ್,ಪುಟ್ಟಪ್ಪ ಇದ್ದರು.

ಸಿಮೆಂಟ್ ಕೈಗಾರಿಕೆ ಸ್ಥಾಪನೆಗೆ ಹಾಡೋನಹಳ್ಳಿ ಹಾಗೂ ಕಂಟನಕುಂಟೆ ಗ್ರಾಮ ಪಂಚಾಯಿತಿ ವತಿಯಿಂದ ನೀಡಲಾಗಿದ್ದ ಅನುಮತಿಯನ್ನು ಹಿಂದಕ್ಕೆ ಪಡೆದಿರುವುದಾಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.

Ramesh Babu

Journalist

Recent Posts

ನೊಂದವರ ನೋವಾ ನೋಯದವರೆತ್ತ ಬಲ್ಲರೋ……

ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…

27 minutes ago

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

15 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

15 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

23 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 days ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago