ಸಿಮೆಂಟ್ ಉತ್ಪಾದನ ಕೈಗಾರಿಕೆ ಪ್ರಾರಂಭಕ್ಕೆ ತೀವ್ರ ವಿರೋಧ

ತಾಲೂಕಿನ ಕಂಟನಕುಂಟೆ ಹಾಗೂ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿ ಜಮೀನಿನಲ್ಲಿ ಸಿಮೆಂಟ್ ಉತ್ಪಾಧನ ಕೈಗಾರಿಕೆ ಪ್ರಾರಂಭಿಸಲು ಗ್ರಾಮ ಪಂಚಾಯಿತಿ ವತಿಯಿಂದ ಅನುಮತಿ ನೀಡಿರುವುದನ್ನು ರದ್ದುಗೊಳಿಸುವಂತೆ ಗುರುವಾರ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಜಿ.ಎಲ್.ನಂಜೇಗೌಡ ನೇತೃತ್ವದಲ್ಲಿ ಪಿಡಿಒ ಅವರಿಗೆ ಮನವಿ ಪತ್ರಸಲ್ಲಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಸಿಮೆಂಟ್ ಕೈಗಾರಿಕೆ ಸ್ಥಾಪನೆ ಮಾಡುವ ಕುರಿತಂತೆ ಸ್ಥಳೀಯ ರೈತರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಗಮನಕ್ಕು ಸಹ ತಾರದಲೇ ನಿರಪೇಕ್ಷಣ ಪ್ರಮಾಣ ಪತ್ರವನ್ನು ನೀಡಲಾಗಿದೆ. ಇದೇ ರೀತಿ ಕಂಟನಕುಂಟೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಹ ಸದಸ್ಯರು,ಸ್ಥಳೀಯ ರೈತರ ಅಭಿಪ್ರಾಯ ಕೇಳದಲೇ ಅನುಮತಿ ನೀಡಿರುವುದು ಖಂಡನೀಯ.

ದೊಡ್ಡಬಳ್ಳಾಪುರ ನಗರಕ್ಕೆ ಸಮೀಪದಲ್ಲೇ ಇರುವ ಈ ಎರಡೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೈತರ ಸಂಖ್ಯೆಯೇ ಹೆಚ್ಚಾಗಿದೆ. ರೇಷ್ಮೆ, ಹೂವು, ದ್ರಾಕ್ಷಿ, ವಿವಿಧ ರೀತಿಯ ಹಣ್ಣು,ತರಕಾರಿಗಳನ್ನು ಹೆಚ್ಚಾಗಿ ಬೇಳೆಯುವ ಪ್ರದೇಶವು ಇದಾಗಿದೆ.

ಕೃಷಿ ಭೂಮಿಯಲ್ಲಿ ಕೈಗಾರಿಕೆ ಸ್ಥಾಪನೆ ಮಾಡಲು ಸಾರ್ವಜನಿಕ ಸಭೆಯನ್ನು ನಡೆಸಿ ಜನರ ಅಭಿಪ್ರಾಯವನ್ನು ಪಡೆಯಬೇಕು. ಆದರೆ ಈ ಯಾವುದೇ ನಿಯಮವನ್ನು ಪಾಲಿಸದೆ, ಗ್ರಾಮ ಪಂಚಾಯಿತಿ ಸದಸ್ಯರ ಗಮನಕ್ಕು ಸಹ ಸಭೆಯಲ್ಲಿ ತಾರದಲೆ ಕೈಗಾರಿಕೆ ಸ್ಥಾಪನೆಗೆ ಅನುಮತಿ ನೀಡಿರುವುದನ್ನು ರದ್ದುಪಡಿಸುವಂತೆ ಮನವಿ ಸಲ್ಲಿಸಲಾಗಿದೆ.

ಈ ಪ್ರದೇಶದಲ್ಲಿ ಸಿಮೆಂಟ್ ಕೈಗಾರಿಕೆಯಿಂದ ಬರುವ ದೂಳಿನಿಂದ ಸಾವಿರಾರು ಎಕರೆಯಲ್ಲಿ ಕೃಷಿ ಮಾಡುವುದನ್ನೇ ರೈತರು ಕೈಬಿಡಬೇಕಾದ ಸ್ಥಿತಿ ಬರಲಿದೆ. ಕೆಲವೇ ಜನರ ಉದ್ಯೋಗದಿಂದ ಸಾವಿರಾರು ಕೃಷಿ ಕುಟುಂಬಗಳು ಬೆಳೆ ಇಲ್ಲದೆ ಬರಿಗೈ ಆಗುವಂತಹ ಸ್ಥಿತಿ ನಿರ್ಮಾಣವಾಗಲಿದೆ. ಬಯಲು ಪ್ರದೇಶ ಇರುವ ಕಡೆಯಲ್ಲಿ ಸ್ಥಾಪನೆ ಮಾಡಬೇಕಿರುವ ಕೈಗಾರಿಕೆಯನ್ನು ಜನವಸತಿ ಹಾಗೂ ಸಮೃದ್ಧ ಕೃಷಿ ಇರುವ ಸ್ಥಳದಲ್ಲಿ ಸ್ಥಾಪನೆ ಮಾಡುತ್ತಿರುವ ಕ್ರಮವೇ ಅವೈಜ್ಞಾನಿಕತೆಯಿಂದ ಕೂಡಿದೆ ಎಂದು ದೂರಿದ್ದಾರೆ.

ಮನವಿ ಸಲ್ಲಿಕೆ ಸಂದರ್ಭದಲ್ಲಿ ಸಿಮೆಂಟ್ ಕೈಗಾರಿಕೆ ಸ್ಥಾಪನ ಮಾಡುತ್ತಿರುವ ಸುತ್ತಮುತ್ತಲಿನ ಗ್ರಾಮದ ಕೃಷಿಕರಾದ ಬಾಲಚಂದ್ರ, ಶ್ರೀಧರ್, ಶ್ರೀನಿವಾಸರೆಡ್ಡಿ, ಮುನೇಗೌಡ, ಶ್ರೀಕಂಠಮೂರ್ತಿ, ಶೆಟ್ಟಪ್ಪ, ಮನೋಹರ್,ಪುಟ್ಟಪ್ಪ ಇದ್ದರು.

ಸಿಮೆಂಟ್ ಕೈಗಾರಿಕೆ ಸ್ಥಾಪನೆಗೆ ಹಾಡೋನಹಳ್ಳಿ ಹಾಗೂ ಕಂಟನಕುಂಟೆ ಗ್ರಾಮ ಪಂಚಾಯಿತಿ ವತಿಯಿಂದ ನೀಡಲಾಗಿದ್ದ ಅನುಮತಿಯನ್ನು ಹಿಂದಕ್ಕೆ ಪಡೆದಿರುವುದಾಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

9 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

10 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

15 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

17 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

20 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

21 hours ago