ಸಿಮೆಂಟ್ ಉತ್ಪಾದನ ಕೈಗಾರಿಕೆ ಪ್ರಾರಂಭಕ್ಕೆ ತೀವ್ರ ವಿರೋಧ

ತಾಲೂಕಿನ ಕಂಟನಕುಂಟೆ ಹಾಗೂ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿ ಜಮೀನಿನಲ್ಲಿ ಸಿಮೆಂಟ್ ಉತ್ಪಾಧನ ಕೈಗಾರಿಕೆ ಪ್ರಾರಂಭಿಸಲು ಗ್ರಾಮ ಪಂಚಾಯಿತಿ ವತಿಯಿಂದ ಅನುಮತಿ ನೀಡಿರುವುದನ್ನು ರದ್ದುಗೊಳಿಸುವಂತೆ ಗುರುವಾರ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಜಿ.ಎಲ್.ನಂಜೇಗೌಡ ನೇತೃತ್ವದಲ್ಲಿ ಪಿಡಿಒ ಅವರಿಗೆ ಮನವಿ ಪತ್ರಸಲ್ಲಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಸಿಮೆಂಟ್ ಕೈಗಾರಿಕೆ ಸ್ಥಾಪನೆ ಮಾಡುವ ಕುರಿತಂತೆ ಸ್ಥಳೀಯ ರೈತರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಗಮನಕ್ಕು ಸಹ ತಾರದಲೇ ನಿರಪೇಕ್ಷಣ ಪ್ರಮಾಣ ಪತ್ರವನ್ನು ನೀಡಲಾಗಿದೆ. ಇದೇ ರೀತಿ ಕಂಟನಕುಂಟೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಹ ಸದಸ್ಯರು,ಸ್ಥಳೀಯ ರೈತರ ಅಭಿಪ್ರಾಯ ಕೇಳದಲೇ ಅನುಮತಿ ನೀಡಿರುವುದು ಖಂಡನೀಯ.

ದೊಡ್ಡಬಳ್ಳಾಪುರ ನಗರಕ್ಕೆ ಸಮೀಪದಲ್ಲೇ ಇರುವ ಈ ಎರಡೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೈತರ ಸಂಖ್ಯೆಯೇ ಹೆಚ್ಚಾಗಿದೆ. ರೇಷ್ಮೆ, ಹೂವು, ದ್ರಾಕ್ಷಿ, ವಿವಿಧ ರೀತಿಯ ಹಣ್ಣು,ತರಕಾರಿಗಳನ್ನು ಹೆಚ್ಚಾಗಿ ಬೇಳೆಯುವ ಪ್ರದೇಶವು ಇದಾಗಿದೆ.

ಕೃಷಿ ಭೂಮಿಯಲ್ಲಿ ಕೈಗಾರಿಕೆ ಸ್ಥಾಪನೆ ಮಾಡಲು ಸಾರ್ವಜನಿಕ ಸಭೆಯನ್ನು ನಡೆಸಿ ಜನರ ಅಭಿಪ್ರಾಯವನ್ನು ಪಡೆಯಬೇಕು. ಆದರೆ ಈ ಯಾವುದೇ ನಿಯಮವನ್ನು ಪಾಲಿಸದೆ, ಗ್ರಾಮ ಪಂಚಾಯಿತಿ ಸದಸ್ಯರ ಗಮನಕ್ಕು ಸಹ ಸಭೆಯಲ್ಲಿ ತಾರದಲೆ ಕೈಗಾರಿಕೆ ಸ್ಥಾಪನೆಗೆ ಅನುಮತಿ ನೀಡಿರುವುದನ್ನು ರದ್ದುಪಡಿಸುವಂತೆ ಮನವಿ ಸಲ್ಲಿಸಲಾಗಿದೆ.

ಈ ಪ್ರದೇಶದಲ್ಲಿ ಸಿಮೆಂಟ್ ಕೈಗಾರಿಕೆಯಿಂದ ಬರುವ ದೂಳಿನಿಂದ ಸಾವಿರಾರು ಎಕರೆಯಲ್ಲಿ ಕೃಷಿ ಮಾಡುವುದನ್ನೇ ರೈತರು ಕೈಬಿಡಬೇಕಾದ ಸ್ಥಿತಿ ಬರಲಿದೆ. ಕೆಲವೇ ಜನರ ಉದ್ಯೋಗದಿಂದ ಸಾವಿರಾರು ಕೃಷಿ ಕುಟುಂಬಗಳು ಬೆಳೆ ಇಲ್ಲದೆ ಬರಿಗೈ ಆಗುವಂತಹ ಸ್ಥಿತಿ ನಿರ್ಮಾಣವಾಗಲಿದೆ. ಬಯಲು ಪ್ರದೇಶ ಇರುವ ಕಡೆಯಲ್ಲಿ ಸ್ಥಾಪನೆ ಮಾಡಬೇಕಿರುವ ಕೈಗಾರಿಕೆಯನ್ನು ಜನವಸತಿ ಹಾಗೂ ಸಮೃದ್ಧ ಕೃಷಿ ಇರುವ ಸ್ಥಳದಲ್ಲಿ ಸ್ಥಾಪನೆ ಮಾಡುತ್ತಿರುವ ಕ್ರಮವೇ ಅವೈಜ್ಞಾನಿಕತೆಯಿಂದ ಕೂಡಿದೆ ಎಂದು ದೂರಿದ್ದಾರೆ.

ಮನವಿ ಸಲ್ಲಿಕೆ ಸಂದರ್ಭದಲ್ಲಿ ಸಿಮೆಂಟ್ ಕೈಗಾರಿಕೆ ಸ್ಥಾಪನ ಮಾಡುತ್ತಿರುವ ಸುತ್ತಮುತ್ತಲಿನ ಗ್ರಾಮದ ಕೃಷಿಕರಾದ ಬಾಲಚಂದ್ರ, ಶ್ರೀಧರ್, ಶ್ರೀನಿವಾಸರೆಡ್ಡಿ, ಮುನೇಗೌಡ, ಶ್ರೀಕಂಠಮೂರ್ತಿ, ಶೆಟ್ಟಪ್ಪ, ಮನೋಹರ್,ಪುಟ್ಟಪ್ಪ ಇದ್ದರು.

ಸಿಮೆಂಟ್ ಕೈಗಾರಿಕೆ ಸ್ಥಾಪನೆಗೆ ಹಾಡೋನಹಳ್ಳಿ ಹಾಗೂ ಕಂಟನಕುಂಟೆ ಗ್ರಾಮ ಪಂಚಾಯಿತಿ ವತಿಯಿಂದ ನೀಡಲಾಗಿದ್ದ ಅನುಮತಿಯನ್ನು ಹಿಂದಕ್ಕೆ ಪಡೆದಿರುವುದಾಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.

Ramesh Babu

Journalist

Recent Posts

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

2 hours ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

2 hours ago

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

15 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

16 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

18 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

2 days ago