ಸಿಮೆಂಟ್ ಉತ್ಪಾದನ ಕೈಗಾರಿಕೆ ಪ್ರಾರಂಭಕ್ಕೆ ತೀವ್ರ ವಿರೋಧ

ತಾಲೂಕಿನ ಕಂಟನಕುಂಟೆ ಹಾಗೂ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿ ಜಮೀನಿನಲ್ಲಿ ಸಿಮೆಂಟ್ ಉತ್ಪಾಧನ ಕೈಗಾರಿಕೆ ಪ್ರಾರಂಭಿಸಲು ಗ್ರಾಮ ಪಂಚಾಯಿತಿ ವತಿಯಿಂದ ಅನುಮತಿ ನೀಡಿರುವುದನ್ನು ರದ್ದುಗೊಳಿಸುವಂತೆ ಗುರುವಾರ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಜಿ.ಎಲ್.ನಂಜೇಗೌಡ ನೇತೃತ್ವದಲ್ಲಿ ಪಿಡಿಒ ಅವರಿಗೆ ಮನವಿ ಪತ್ರಸಲ್ಲಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಸಿಮೆಂಟ್ ಕೈಗಾರಿಕೆ ಸ್ಥಾಪನೆ ಮಾಡುವ ಕುರಿತಂತೆ ಸ್ಥಳೀಯ ರೈತರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಗಮನಕ್ಕು ಸಹ ತಾರದಲೇ ನಿರಪೇಕ್ಷಣ ಪ್ರಮಾಣ ಪತ್ರವನ್ನು ನೀಡಲಾಗಿದೆ. ಇದೇ ರೀತಿ ಕಂಟನಕುಂಟೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಹ ಸದಸ್ಯರು,ಸ್ಥಳೀಯ ರೈತರ ಅಭಿಪ್ರಾಯ ಕೇಳದಲೇ ಅನುಮತಿ ನೀಡಿರುವುದು ಖಂಡನೀಯ.

ದೊಡ್ಡಬಳ್ಳಾಪುರ ನಗರಕ್ಕೆ ಸಮೀಪದಲ್ಲೇ ಇರುವ ಈ ಎರಡೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೈತರ ಸಂಖ್ಯೆಯೇ ಹೆಚ್ಚಾಗಿದೆ. ರೇಷ್ಮೆ, ಹೂವು, ದ್ರಾಕ್ಷಿ, ವಿವಿಧ ರೀತಿಯ ಹಣ್ಣು,ತರಕಾರಿಗಳನ್ನು ಹೆಚ್ಚಾಗಿ ಬೇಳೆಯುವ ಪ್ರದೇಶವು ಇದಾಗಿದೆ.

ಕೃಷಿ ಭೂಮಿಯಲ್ಲಿ ಕೈಗಾರಿಕೆ ಸ್ಥಾಪನೆ ಮಾಡಲು ಸಾರ್ವಜನಿಕ ಸಭೆಯನ್ನು ನಡೆಸಿ ಜನರ ಅಭಿಪ್ರಾಯವನ್ನು ಪಡೆಯಬೇಕು. ಆದರೆ ಈ ಯಾವುದೇ ನಿಯಮವನ್ನು ಪಾಲಿಸದೆ, ಗ್ರಾಮ ಪಂಚಾಯಿತಿ ಸದಸ್ಯರ ಗಮನಕ್ಕು ಸಹ ಸಭೆಯಲ್ಲಿ ತಾರದಲೆ ಕೈಗಾರಿಕೆ ಸ್ಥಾಪನೆಗೆ ಅನುಮತಿ ನೀಡಿರುವುದನ್ನು ರದ್ದುಪಡಿಸುವಂತೆ ಮನವಿ ಸಲ್ಲಿಸಲಾಗಿದೆ.

ಈ ಪ್ರದೇಶದಲ್ಲಿ ಸಿಮೆಂಟ್ ಕೈಗಾರಿಕೆಯಿಂದ ಬರುವ ದೂಳಿನಿಂದ ಸಾವಿರಾರು ಎಕರೆಯಲ್ಲಿ ಕೃಷಿ ಮಾಡುವುದನ್ನೇ ರೈತರು ಕೈಬಿಡಬೇಕಾದ ಸ್ಥಿತಿ ಬರಲಿದೆ. ಕೆಲವೇ ಜನರ ಉದ್ಯೋಗದಿಂದ ಸಾವಿರಾರು ಕೃಷಿ ಕುಟುಂಬಗಳು ಬೆಳೆ ಇಲ್ಲದೆ ಬರಿಗೈ ಆಗುವಂತಹ ಸ್ಥಿತಿ ನಿರ್ಮಾಣವಾಗಲಿದೆ. ಬಯಲು ಪ್ರದೇಶ ಇರುವ ಕಡೆಯಲ್ಲಿ ಸ್ಥಾಪನೆ ಮಾಡಬೇಕಿರುವ ಕೈಗಾರಿಕೆಯನ್ನು ಜನವಸತಿ ಹಾಗೂ ಸಮೃದ್ಧ ಕೃಷಿ ಇರುವ ಸ್ಥಳದಲ್ಲಿ ಸ್ಥಾಪನೆ ಮಾಡುತ್ತಿರುವ ಕ್ರಮವೇ ಅವೈಜ್ಞಾನಿಕತೆಯಿಂದ ಕೂಡಿದೆ ಎಂದು ದೂರಿದ್ದಾರೆ.

ಮನವಿ ಸಲ್ಲಿಕೆ ಸಂದರ್ಭದಲ್ಲಿ ಸಿಮೆಂಟ್ ಕೈಗಾರಿಕೆ ಸ್ಥಾಪನ ಮಾಡುತ್ತಿರುವ ಸುತ್ತಮುತ್ತಲಿನ ಗ್ರಾಮದ ಕೃಷಿಕರಾದ ಬಾಲಚಂದ್ರ, ಶ್ರೀಧರ್, ಶ್ರೀನಿವಾಸರೆಡ್ಡಿ, ಮುನೇಗೌಡ, ಶ್ರೀಕಂಠಮೂರ್ತಿ, ಶೆಟ್ಟಪ್ಪ, ಮನೋಹರ್,ಪುಟ್ಟಪ್ಪ ಇದ್ದರು.

ಸಿಮೆಂಟ್ ಕೈಗಾರಿಕೆ ಸ್ಥಾಪನೆಗೆ ಹಾಡೋನಹಳ್ಳಿ ಹಾಗೂ ಕಂಟನಕುಂಟೆ ಗ್ರಾಮ ಪಂಚಾಯಿತಿ ವತಿಯಿಂದ ನೀಡಲಾಗಿದ್ದ ಅನುಮತಿಯನ್ನು ಹಿಂದಕ್ಕೆ ಪಡೆದಿರುವುದಾಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

3 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

5 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

8 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

22 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago