ಸಿಮೆಂಟ್ ಉತ್ಪಾದನ ಕೈಗಾರಿಕೆ ಪ್ರಾರಂಭಕ್ಕೆ ತೀವ್ರ ವಿರೋಧ

ತಾಲೂಕಿನ ಕಂಟನಕುಂಟೆ ಹಾಗೂ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿ ಜಮೀನಿನಲ್ಲಿ ಸಿಮೆಂಟ್ ಉತ್ಪಾಧನ ಕೈಗಾರಿಕೆ ಪ್ರಾರಂಭಿಸಲು ಗ್ರಾಮ ಪಂಚಾಯಿತಿ ವತಿಯಿಂದ ಅನುಮತಿ ನೀಡಿರುವುದನ್ನು ರದ್ದುಗೊಳಿಸುವಂತೆ ಗುರುವಾರ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಜಿ.ಎಲ್.ನಂಜೇಗೌಡ ನೇತೃತ್ವದಲ್ಲಿ ಪಿಡಿಒ ಅವರಿಗೆ ಮನವಿ ಪತ್ರಸಲ್ಲಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಸಿಮೆಂಟ್ ಕೈಗಾರಿಕೆ ಸ್ಥಾಪನೆ ಮಾಡುವ ಕುರಿತಂತೆ ಸ್ಥಳೀಯ ರೈತರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಗಮನಕ್ಕು ಸಹ ತಾರದಲೇ ನಿರಪೇಕ್ಷಣ ಪ್ರಮಾಣ ಪತ್ರವನ್ನು ನೀಡಲಾಗಿದೆ. ಇದೇ ರೀತಿ ಕಂಟನಕುಂಟೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಹ ಸದಸ್ಯರು,ಸ್ಥಳೀಯ ರೈತರ ಅಭಿಪ್ರಾಯ ಕೇಳದಲೇ ಅನುಮತಿ ನೀಡಿರುವುದು ಖಂಡನೀಯ.

ದೊಡ್ಡಬಳ್ಳಾಪುರ ನಗರಕ್ಕೆ ಸಮೀಪದಲ್ಲೇ ಇರುವ ಈ ಎರಡೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೈತರ ಸಂಖ್ಯೆಯೇ ಹೆಚ್ಚಾಗಿದೆ. ರೇಷ್ಮೆ, ಹೂವು, ದ್ರಾಕ್ಷಿ, ವಿವಿಧ ರೀತಿಯ ಹಣ್ಣು,ತರಕಾರಿಗಳನ್ನು ಹೆಚ್ಚಾಗಿ ಬೇಳೆಯುವ ಪ್ರದೇಶವು ಇದಾಗಿದೆ.

ಕೃಷಿ ಭೂಮಿಯಲ್ಲಿ ಕೈಗಾರಿಕೆ ಸ್ಥಾಪನೆ ಮಾಡಲು ಸಾರ್ವಜನಿಕ ಸಭೆಯನ್ನು ನಡೆಸಿ ಜನರ ಅಭಿಪ್ರಾಯವನ್ನು ಪಡೆಯಬೇಕು. ಆದರೆ ಈ ಯಾವುದೇ ನಿಯಮವನ್ನು ಪಾಲಿಸದೆ, ಗ್ರಾಮ ಪಂಚಾಯಿತಿ ಸದಸ್ಯರ ಗಮನಕ್ಕು ಸಹ ಸಭೆಯಲ್ಲಿ ತಾರದಲೆ ಕೈಗಾರಿಕೆ ಸ್ಥಾಪನೆಗೆ ಅನುಮತಿ ನೀಡಿರುವುದನ್ನು ರದ್ದುಪಡಿಸುವಂತೆ ಮನವಿ ಸಲ್ಲಿಸಲಾಗಿದೆ.

ಈ ಪ್ರದೇಶದಲ್ಲಿ ಸಿಮೆಂಟ್ ಕೈಗಾರಿಕೆಯಿಂದ ಬರುವ ದೂಳಿನಿಂದ ಸಾವಿರಾರು ಎಕರೆಯಲ್ಲಿ ಕೃಷಿ ಮಾಡುವುದನ್ನೇ ರೈತರು ಕೈಬಿಡಬೇಕಾದ ಸ್ಥಿತಿ ಬರಲಿದೆ. ಕೆಲವೇ ಜನರ ಉದ್ಯೋಗದಿಂದ ಸಾವಿರಾರು ಕೃಷಿ ಕುಟುಂಬಗಳು ಬೆಳೆ ಇಲ್ಲದೆ ಬರಿಗೈ ಆಗುವಂತಹ ಸ್ಥಿತಿ ನಿರ್ಮಾಣವಾಗಲಿದೆ. ಬಯಲು ಪ್ರದೇಶ ಇರುವ ಕಡೆಯಲ್ಲಿ ಸ್ಥಾಪನೆ ಮಾಡಬೇಕಿರುವ ಕೈಗಾರಿಕೆಯನ್ನು ಜನವಸತಿ ಹಾಗೂ ಸಮೃದ್ಧ ಕೃಷಿ ಇರುವ ಸ್ಥಳದಲ್ಲಿ ಸ್ಥಾಪನೆ ಮಾಡುತ್ತಿರುವ ಕ್ರಮವೇ ಅವೈಜ್ಞಾನಿಕತೆಯಿಂದ ಕೂಡಿದೆ ಎಂದು ದೂರಿದ್ದಾರೆ.

ಮನವಿ ಸಲ್ಲಿಕೆ ಸಂದರ್ಭದಲ್ಲಿ ಸಿಮೆಂಟ್ ಕೈಗಾರಿಕೆ ಸ್ಥಾಪನ ಮಾಡುತ್ತಿರುವ ಸುತ್ತಮುತ್ತಲಿನ ಗ್ರಾಮದ ಕೃಷಿಕರಾದ ಬಾಲಚಂದ್ರ, ಶ್ರೀಧರ್, ಶ್ರೀನಿವಾಸರೆಡ್ಡಿ, ಮುನೇಗೌಡ, ಶ್ರೀಕಂಠಮೂರ್ತಿ, ಶೆಟ್ಟಪ್ಪ, ಮನೋಹರ್,ಪುಟ್ಟಪ್ಪ ಇದ್ದರು.

ಸಿಮೆಂಟ್ ಕೈಗಾರಿಕೆ ಸ್ಥಾಪನೆಗೆ ಹಾಡೋನಹಳ್ಳಿ ಹಾಗೂ ಕಂಟನಕುಂಟೆ ಗ್ರಾಮ ಪಂಚಾಯಿತಿ ವತಿಯಿಂದ ನೀಡಲಾಗಿದ್ದ ಅನುಮತಿಯನ್ನು ಹಿಂದಕ್ಕೆ ಪಡೆದಿರುವುದಾಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

13 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

13 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

14 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

15 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

18 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

18 hours ago