ತಾಲೂಕಿನ ಕಂಟನಕುಂಟೆ ಹಾಗೂ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿ ಜಮೀನಿನಲ್ಲಿ ಸಿಮೆಂಟ್ ಉತ್ಪಾಧನ ಕೈಗಾರಿಕೆ ಪ್ರಾರಂಭಿಸಲು ಗ್ರಾಮ ಪಂಚಾಯಿತಿ ವತಿಯಿಂದ ಅನುಮತಿ ನೀಡಿರುವುದನ್ನು ರದ್ದುಗೊಳಿಸುವಂತೆ ಗುರುವಾರ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಜಿ.ಎಲ್.ನಂಜೇಗೌಡ ನೇತೃತ್ವದಲ್ಲಿ ಪಿಡಿಒ ಅವರಿಗೆ ಮನವಿ ಪತ್ರಸಲ್ಲಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಸಿಮೆಂಟ್ ಕೈಗಾರಿಕೆ ಸ್ಥಾಪನೆ ಮಾಡುವ ಕುರಿತಂತೆ ಸ್ಥಳೀಯ ರೈತರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಗಮನಕ್ಕು ಸಹ ತಾರದಲೇ ನಿರಪೇಕ್ಷಣ ಪ್ರಮಾಣ ಪತ್ರವನ್ನು ನೀಡಲಾಗಿದೆ. ಇದೇ ರೀತಿ ಕಂಟನಕುಂಟೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಹ ಸದಸ್ಯರು,ಸ್ಥಳೀಯ ರೈತರ ಅಭಿಪ್ರಾಯ ಕೇಳದಲೇ ಅನುಮತಿ ನೀಡಿರುವುದು ಖಂಡನೀಯ.
ದೊಡ್ಡಬಳ್ಳಾಪುರ ನಗರಕ್ಕೆ ಸಮೀಪದಲ್ಲೇ ಇರುವ ಈ ಎರಡೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೈತರ ಸಂಖ್ಯೆಯೇ ಹೆಚ್ಚಾಗಿದೆ. ರೇಷ್ಮೆ, ಹೂವು, ದ್ರಾಕ್ಷಿ, ವಿವಿಧ ರೀತಿಯ ಹಣ್ಣು,ತರಕಾರಿಗಳನ್ನು ಹೆಚ್ಚಾಗಿ ಬೇಳೆಯುವ ಪ್ರದೇಶವು ಇದಾಗಿದೆ.
ಕೃಷಿ ಭೂಮಿಯಲ್ಲಿ ಕೈಗಾರಿಕೆ ಸ್ಥಾಪನೆ ಮಾಡಲು ಸಾರ್ವಜನಿಕ ಸಭೆಯನ್ನು ನಡೆಸಿ ಜನರ ಅಭಿಪ್ರಾಯವನ್ನು ಪಡೆಯಬೇಕು. ಆದರೆ ಈ ಯಾವುದೇ ನಿಯಮವನ್ನು ಪಾಲಿಸದೆ, ಗ್ರಾಮ ಪಂಚಾಯಿತಿ ಸದಸ್ಯರ ಗಮನಕ್ಕು ಸಹ ಸಭೆಯಲ್ಲಿ ತಾರದಲೆ ಕೈಗಾರಿಕೆ ಸ್ಥಾಪನೆಗೆ ಅನುಮತಿ ನೀಡಿರುವುದನ್ನು ರದ್ದುಪಡಿಸುವಂತೆ ಮನವಿ ಸಲ್ಲಿಸಲಾಗಿದೆ.
ಈ ಪ್ರದೇಶದಲ್ಲಿ ಸಿಮೆಂಟ್ ಕೈಗಾರಿಕೆಯಿಂದ ಬರುವ ದೂಳಿನಿಂದ ಸಾವಿರಾರು ಎಕರೆಯಲ್ಲಿ ಕೃಷಿ ಮಾಡುವುದನ್ನೇ ರೈತರು ಕೈಬಿಡಬೇಕಾದ ಸ್ಥಿತಿ ಬರಲಿದೆ. ಕೆಲವೇ ಜನರ ಉದ್ಯೋಗದಿಂದ ಸಾವಿರಾರು ಕೃಷಿ ಕುಟುಂಬಗಳು ಬೆಳೆ ಇಲ್ಲದೆ ಬರಿಗೈ ಆಗುವಂತಹ ಸ್ಥಿತಿ ನಿರ್ಮಾಣವಾಗಲಿದೆ. ಬಯಲು ಪ್ರದೇಶ ಇರುವ ಕಡೆಯಲ್ಲಿ ಸ್ಥಾಪನೆ ಮಾಡಬೇಕಿರುವ ಕೈಗಾರಿಕೆಯನ್ನು ಜನವಸತಿ ಹಾಗೂ ಸಮೃದ್ಧ ಕೃಷಿ ಇರುವ ಸ್ಥಳದಲ್ಲಿ ಸ್ಥಾಪನೆ ಮಾಡುತ್ತಿರುವ ಕ್ರಮವೇ ಅವೈಜ್ಞಾನಿಕತೆಯಿಂದ ಕೂಡಿದೆ ಎಂದು ದೂರಿದ್ದಾರೆ.
ಮನವಿ ಸಲ್ಲಿಕೆ ಸಂದರ್ಭದಲ್ಲಿ ಸಿಮೆಂಟ್ ಕೈಗಾರಿಕೆ ಸ್ಥಾಪನ ಮಾಡುತ್ತಿರುವ ಸುತ್ತಮುತ್ತಲಿನ ಗ್ರಾಮದ ಕೃಷಿಕರಾದ ಬಾಲಚಂದ್ರ, ಶ್ರೀಧರ್, ಶ್ರೀನಿವಾಸರೆಡ್ಡಿ, ಮುನೇಗೌಡ, ಶ್ರೀಕಂಠಮೂರ್ತಿ, ಶೆಟ್ಟಪ್ಪ, ಮನೋಹರ್,ಪುಟ್ಟಪ್ಪ ಇದ್ದರು.
ಸಿಮೆಂಟ್ ಕೈಗಾರಿಕೆ ಸ್ಥಾಪನೆಗೆ ಹಾಡೋನಹಳ್ಳಿ ಹಾಗೂ ಕಂಟನಕುಂಟೆ ಗ್ರಾಮ ಪಂಚಾಯಿತಿ ವತಿಯಿಂದ ನೀಡಲಾಗಿದ್ದ ಅನುಮತಿಯನ್ನು ಹಿಂದಕ್ಕೆ ಪಡೆದಿರುವುದಾಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…