ಸಿಮೆಂಟ್ ಉತ್ಪಾದನ ಕೈಗಾರಿಕೆ ಪ್ರಾರಂಭಕ್ಕೆ ತೀವ್ರ ವಿರೋಧ

ತಾಲೂಕಿನ ಕಂಟನಕುಂಟೆ ಹಾಗೂ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿ ಜಮೀನಿನಲ್ಲಿ ಸಿಮೆಂಟ್ ಉತ್ಪಾಧನ ಕೈಗಾರಿಕೆ ಪ್ರಾರಂಭಿಸಲು ಗ್ರಾಮ ಪಂಚಾಯಿತಿ ವತಿಯಿಂದ ಅನುಮತಿ ನೀಡಿರುವುದನ್ನು ರದ್ದುಗೊಳಿಸುವಂತೆ ಗುರುವಾರ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಜಿ.ಎಲ್.ನಂಜೇಗೌಡ ನೇತೃತ್ವದಲ್ಲಿ ಪಿಡಿಒ ಅವರಿಗೆ ಮನವಿ ಪತ್ರಸಲ್ಲಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಸಿಮೆಂಟ್ ಕೈಗಾರಿಕೆ ಸ್ಥಾಪನೆ ಮಾಡುವ ಕುರಿತಂತೆ ಸ್ಥಳೀಯ ರೈತರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಗಮನಕ್ಕು ಸಹ ತಾರದಲೇ ನಿರಪೇಕ್ಷಣ ಪ್ರಮಾಣ ಪತ್ರವನ್ನು ನೀಡಲಾಗಿದೆ. ಇದೇ ರೀತಿ ಕಂಟನಕುಂಟೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಹ ಸದಸ್ಯರು,ಸ್ಥಳೀಯ ರೈತರ ಅಭಿಪ್ರಾಯ ಕೇಳದಲೇ ಅನುಮತಿ ನೀಡಿರುವುದು ಖಂಡನೀಯ.

ದೊಡ್ಡಬಳ್ಳಾಪುರ ನಗರಕ್ಕೆ ಸಮೀಪದಲ್ಲೇ ಇರುವ ಈ ಎರಡೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೈತರ ಸಂಖ್ಯೆಯೇ ಹೆಚ್ಚಾಗಿದೆ. ರೇಷ್ಮೆ, ಹೂವು, ದ್ರಾಕ್ಷಿ, ವಿವಿಧ ರೀತಿಯ ಹಣ್ಣು,ತರಕಾರಿಗಳನ್ನು ಹೆಚ್ಚಾಗಿ ಬೇಳೆಯುವ ಪ್ರದೇಶವು ಇದಾಗಿದೆ.

ಕೃಷಿ ಭೂಮಿಯಲ್ಲಿ ಕೈಗಾರಿಕೆ ಸ್ಥಾಪನೆ ಮಾಡಲು ಸಾರ್ವಜನಿಕ ಸಭೆಯನ್ನು ನಡೆಸಿ ಜನರ ಅಭಿಪ್ರಾಯವನ್ನು ಪಡೆಯಬೇಕು. ಆದರೆ ಈ ಯಾವುದೇ ನಿಯಮವನ್ನು ಪಾಲಿಸದೆ, ಗ್ರಾಮ ಪಂಚಾಯಿತಿ ಸದಸ್ಯರ ಗಮನಕ್ಕು ಸಹ ಸಭೆಯಲ್ಲಿ ತಾರದಲೆ ಕೈಗಾರಿಕೆ ಸ್ಥಾಪನೆಗೆ ಅನುಮತಿ ನೀಡಿರುವುದನ್ನು ರದ್ದುಪಡಿಸುವಂತೆ ಮನವಿ ಸಲ್ಲಿಸಲಾಗಿದೆ.

ಈ ಪ್ರದೇಶದಲ್ಲಿ ಸಿಮೆಂಟ್ ಕೈಗಾರಿಕೆಯಿಂದ ಬರುವ ದೂಳಿನಿಂದ ಸಾವಿರಾರು ಎಕರೆಯಲ್ಲಿ ಕೃಷಿ ಮಾಡುವುದನ್ನೇ ರೈತರು ಕೈಬಿಡಬೇಕಾದ ಸ್ಥಿತಿ ಬರಲಿದೆ. ಕೆಲವೇ ಜನರ ಉದ್ಯೋಗದಿಂದ ಸಾವಿರಾರು ಕೃಷಿ ಕುಟುಂಬಗಳು ಬೆಳೆ ಇಲ್ಲದೆ ಬರಿಗೈ ಆಗುವಂತಹ ಸ್ಥಿತಿ ನಿರ್ಮಾಣವಾಗಲಿದೆ. ಬಯಲು ಪ್ರದೇಶ ಇರುವ ಕಡೆಯಲ್ಲಿ ಸ್ಥಾಪನೆ ಮಾಡಬೇಕಿರುವ ಕೈಗಾರಿಕೆಯನ್ನು ಜನವಸತಿ ಹಾಗೂ ಸಮೃದ್ಧ ಕೃಷಿ ಇರುವ ಸ್ಥಳದಲ್ಲಿ ಸ್ಥಾಪನೆ ಮಾಡುತ್ತಿರುವ ಕ್ರಮವೇ ಅವೈಜ್ಞಾನಿಕತೆಯಿಂದ ಕೂಡಿದೆ ಎಂದು ದೂರಿದ್ದಾರೆ.

ಮನವಿ ಸಲ್ಲಿಕೆ ಸಂದರ್ಭದಲ್ಲಿ ಸಿಮೆಂಟ್ ಕೈಗಾರಿಕೆ ಸ್ಥಾಪನ ಮಾಡುತ್ತಿರುವ ಸುತ್ತಮುತ್ತಲಿನ ಗ್ರಾಮದ ಕೃಷಿಕರಾದ ಬಾಲಚಂದ್ರ, ಶ್ರೀಧರ್, ಶ್ರೀನಿವಾಸರೆಡ್ಡಿ, ಮುನೇಗೌಡ, ಶ್ರೀಕಂಠಮೂರ್ತಿ, ಶೆಟ್ಟಪ್ಪ, ಮನೋಹರ್,ಪುಟ್ಟಪ್ಪ ಇದ್ದರು.

ಸಿಮೆಂಟ್ ಕೈಗಾರಿಕೆ ಸ್ಥಾಪನೆಗೆ ಹಾಡೋನಹಳ್ಳಿ ಹಾಗೂ ಕಂಟನಕುಂಟೆ ಗ್ರಾಮ ಪಂಚಾಯಿತಿ ವತಿಯಿಂದ ನೀಡಲಾಗಿದ್ದ ಅನುಮತಿಯನ್ನು ಹಿಂದಕ್ಕೆ ಪಡೆದಿರುವುದಾಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

14 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

15 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

16 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

16 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

20 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

22 hours ago