ಸಿರಾಜ್ ಬೆಂಕಿ ಬೌಲಿಂಗ್ ಗೆ ಲಂಕಾ ದಹನ!: ಏಷ್ಯನ್ ಕ್ರಿಕೆಟ್ ಗೆ ಭಾರತವೇ ಬಾಸ್

ಕೊಲಂಬೊದ ಆರ್. ಪ್ರೇಮದಾಸ್ ಕ್ರೀಡಾಂಗಣದಲ್ಲಿ ನಡೆದ ಏಷ್ಯಾ ಕಪ್ ಕ್ರಿಕೆಟ್ ನ ಫೈನಲ್ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ವೇಗಿ ಮೊಹಮ್ಮದ್ ಸಿರಾಜ್ ಹಾಗೂ ಜಸ್ಪ್ರಿತ್ ಬುಮ್ರಾ ಅವರ ಕೈಚಳಕದಿಂದ ಭಾರತ ಸುಲಭ ಗೆಲುವು ಸಾಧಿಸುವ ಮೂಲಕ ಏಷ್ಯಾ ಕ್ರಿಕೆಟ್ ಗೆ ಭಾರತವೇ ಬಾಸ್ ಎಂದು ಸಾರಿದರು.

ಟೂರ್ನಿ ಉದ್ದಕ್ಕೂ ಅತ್ಯುತ್ತಮ ಪ್ರದರ್ಶನ ನೀಡಿದ್ದ ಎರಡೂ ತಂಡಗಳಿಗೆ ಫೈನಲ್ ಪಂದ್ಯದಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಹೋರಾಟ ಮಾಡಿ ಗೆಲುವು ಸಾಧಿಸುವುದು ಬಹುತೇಕ ಖಚಿತವಾಗಿತ್ತು.

ಟಾಸ್ ಗೆದ್ದ ಶ್ರೀಲಂಕಾ ತಂಡದ ನಾಯಕ ದಸುನ್ ಶನಕ ಬ್ಯಾಟಿಂಗ್ ಆಯ್ದುಕೊಂಡರು, ಆದರೆ ಅವರ ನಿರ್ಧಾರವನ್ನು ಬ್ಯಾಟಿಂಗ್ ಪಡೆ ಸಮರ್ಥಿಸುವಲ್ಲಿ ವಿಫಲವಾಗುವ ಮೂಲಕ ಪೆವಿಲಿಯನ್ ಗೆ ಪರೇಡ್ ನಡೆಸಿದರು.

ಭಾರತದ ಪರವಾಗಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ಮಾಡಿದ ವೇಗಿ ಮೊಹಮ್ಮದ್ ಸಿರಾಜ್ 21 ರನ್ ನೀಡಿ 6 ವಿಕೆಟ್ ಕಬಳಿಸುವ ಮೂಲಕ ಭಾರತದ ಪರವಾಗಿ ಕಡಿಮೆ ರನ್ ನೀಡಿ 6 ವಿಕೆಟ್ ಪಡೆದ ನಾಲ್ಕನೇ ಬೌಲರ್ ಎನಿಸಿದರು.

ಈ ಮೊದಲು ಸ್ಟುವರ್ಟ್ ಬಿನ್ನಿ, ಅನಿಲ್ ಕುಂಬ್ಳೆ ಹಾಗೂ ಜಸ್ಪ್ರಿತ್ ಬುಮ್ರಾ ಈ ಸಾಧನೆ ಮಾಡಿದ್ದರು. ಇದೀಗ ಇವರ ಪೆಟ್ಟಿಗೆ ಸಿರಾಜ್ ಕೂಡ ಸೇರ್ಪಡೆಯಾದರು. ಹಾರ್ದಿಕ್ ಪಾಂಡ್ಯ 3 ವಿಕೆಟ್ ಹಾಗೂ ಬುಮ್ರಾ 1 ವಿಕೆಟ್ ಪಡೆದು ಮಿಂಚಿದರು.

ಶ್ರೀಲಂಕಾ ಪರವಾಗಿ ಕುಶಾಲ್ ಮೆಂಡಿಸ್ (17) ಹಾಗೂ ದುಶಾನ್ ಹೇಮಂತ್ (13) ರನ್ ಗಳಿಸಿದರೆ ಉಳಿದ ಯಾವುದೇ ಬ್ಯಾಟ್ಸ್ಮನ್ ಎರಡಂಕಿ ಮೊತ್ತ ದಾಟಲಿಲ್ಲ ಹಾಗೂ ನಾಲ್ವರು ಬ್ಯಾಟ್ಸ್ಮನ್ ಸೊನ್ನೆ ಸುತ್ತಿದರು.

50 ರನ್ ಗುರಿ ಬೆನ್ನತ್ತಿದ್ದ ಭಾರತ ತಂಡದ ಆರಂಭಿಕ ಆಟಗಾರರಾದ ಶುಭ್ಮನ್ ಗಿಲ್ (27) ಹಾಗೂ ಇಶಾನ್ ಕಿಶನ್ (23)ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನತ್ತ ಕೊಂಡೊಯ್ದರು ವಿಕೆಟ್ ನಷ್ಟವಿಲ್ಲದೆ ಗೆಲುವಿನ ನಗೆ ಬೀರಿದರು.

ಭಾರತ ತಂಡ 8ನೇ ಬಾರಿ ಹಾಗೂ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ 2ನೇ ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು. ಬೆಂಕಿ ಬೌಲಿಂಗ್ ಪ್ರದರ್ಶನ ನೀಡಿದ ಮೊಹಮ್ಮದ್ ಸಿರಾಜ್ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

11 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

15 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

15 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

18 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago