ಸಿರಾಜ್ ಬೆಂಕಿ ಬೌಲಿಂಗ್ ಗೆ ಲಂಕಾ ದಹನ!: ಏಷ್ಯನ್ ಕ್ರಿಕೆಟ್ ಗೆ ಭಾರತವೇ ಬಾಸ್

ಕೊಲಂಬೊದ ಆರ್. ಪ್ರೇಮದಾಸ್ ಕ್ರೀಡಾಂಗಣದಲ್ಲಿ ನಡೆದ ಏಷ್ಯಾ ಕಪ್ ಕ್ರಿಕೆಟ್ ನ ಫೈನಲ್ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ವೇಗಿ ಮೊಹಮ್ಮದ್ ಸಿರಾಜ್ ಹಾಗೂ ಜಸ್ಪ್ರಿತ್ ಬುಮ್ರಾ ಅವರ ಕೈಚಳಕದಿಂದ ಭಾರತ ಸುಲಭ ಗೆಲುವು ಸಾಧಿಸುವ ಮೂಲಕ ಏಷ್ಯಾ ಕ್ರಿಕೆಟ್ ಗೆ ಭಾರತವೇ ಬಾಸ್ ಎಂದು ಸಾರಿದರು.

ಟೂರ್ನಿ ಉದ್ದಕ್ಕೂ ಅತ್ಯುತ್ತಮ ಪ್ರದರ್ಶನ ನೀಡಿದ್ದ ಎರಡೂ ತಂಡಗಳಿಗೆ ಫೈನಲ್ ಪಂದ್ಯದಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಹೋರಾಟ ಮಾಡಿ ಗೆಲುವು ಸಾಧಿಸುವುದು ಬಹುತೇಕ ಖಚಿತವಾಗಿತ್ತು.

ಟಾಸ್ ಗೆದ್ದ ಶ್ರೀಲಂಕಾ ತಂಡದ ನಾಯಕ ದಸುನ್ ಶನಕ ಬ್ಯಾಟಿಂಗ್ ಆಯ್ದುಕೊಂಡರು, ಆದರೆ ಅವರ ನಿರ್ಧಾರವನ್ನು ಬ್ಯಾಟಿಂಗ್ ಪಡೆ ಸಮರ್ಥಿಸುವಲ್ಲಿ ವಿಫಲವಾಗುವ ಮೂಲಕ ಪೆವಿಲಿಯನ್ ಗೆ ಪರೇಡ್ ನಡೆಸಿದರು.

ಭಾರತದ ಪರವಾಗಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ಮಾಡಿದ ವೇಗಿ ಮೊಹಮ್ಮದ್ ಸಿರಾಜ್ 21 ರನ್ ನೀಡಿ 6 ವಿಕೆಟ್ ಕಬಳಿಸುವ ಮೂಲಕ ಭಾರತದ ಪರವಾಗಿ ಕಡಿಮೆ ರನ್ ನೀಡಿ 6 ವಿಕೆಟ್ ಪಡೆದ ನಾಲ್ಕನೇ ಬೌಲರ್ ಎನಿಸಿದರು.

ಈ ಮೊದಲು ಸ್ಟುವರ್ಟ್ ಬಿನ್ನಿ, ಅನಿಲ್ ಕುಂಬ್ಳೆ ಹಾಗೂ ಜಸ್ಪ್ರಿತ್ ಬುಮ್ರಾ ಈ ಸಾಧನೆ ಮಾಡಿದ್ದರು. ಇದೀಗ ಇವರ ಪೆಟ್ಟಿಗೆ ಸಿರಾಜ್ ಕೂಡ ಸೇರ್ಪಡೆಯಾದರು. ಹಾರ್ದಿಕ್ ಪಾಂಡ್ಯ 3 ವಿಕೆಟ್ ಹಾಗೂ ಬುಮ್ರಾ 1 ವಿಕೆಟ್ ಪಡೆದು ಮಿಂಚಿದರು.

ಶ್ರೀಲಂಕಾ ಪರವಾಗಿ ಕುಶಾಲ್ ಮೆಂಡಿಸ್ (17) ಹಾಗೂ ದುಶಾನ್ ಹೇಮಂತ್ (13) ರನ್ ಗಳಿಸಿದರೆ ಉಳಿದ ಯಾವುದೇ ಬ್ಯಾಟ್ಸ್ಮನ್ ಎರಡಂಕಿ ಮೊತ್ತ ದಾಟಲಿಲ್ಲ ಹಾಗೂ ನಾಲ್ವರು ಬ್ಯಾಟ್ಸ್ಮನ್ ಸೊನ್ನೆ ಸುತ್ತಿದರು.

50 ರನ್ ಗುರಿ ಬೆನ್ನತ್ತಿದ್ದ ಭಾರತ ತಂಡದ ಆರಂಭಿಕ ಆಟಗಾರರಾದ ಶುಭ್ಮನ್ ಗಿಲ್ (27) ಹಾಗೂ ಇಶಾನ್ ಕಿಶನ್ (23)ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನತ್ತ ಕೊಂಡೊಯ್ದರು ವಿಕೆಟ್ ನಷ್ಟವಿಲ್ಲದೆ ಗೆಲುವಿನ ನಗೆ ಬೀರಿದರು.

ಭಾರತ ತಂಡ 8ನೇ ಬಾರಿ ಹಾಗೂ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ 2ನೇ ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು. ಬೆಂಕಿ ಬೌಲಿಂಗ್ ಪ್ರದರ್ಶನ ನೀಡಿದ ಮೊಹಮ್ಮದ್ ಸಿರಾಜ್ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

9 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

10 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago