ಪ್ರತಿಯೊಬ್ಬ ಮನುಷ್ಯನಿಗೆ ಆರೋಗ್ಯ ಬಹಳ ಮುಖ್ಯ, ಪೂರಕವಾದ ಆಹಾರ ಹಾಗೂ ಗುಣಮಟ್ಟದ ಆಹಾರ ಸೇವನೆಯಿಂದ ಆರೋಗ್ಯ ಕಾಪಾಡಿಕೊಳ್ಳಬಹುದು. ಸಿರಿಧಾನ್ಯಗಳ ಸೇವನೆಯಿಂದ ಆರೋಗ್ಯ ವೃದ್ಧಿ ಆಗುತ್ತದೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.
ಕೃಷಿ ಇಲಾಖೆ ವತಿಯಿಂದ ಸಾವಯವ ಮತ್ತು ಸಿರಿಧಾನ್ಯಗಳ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ದೇವನಹಳ್ಳಿ ಟೌನ್ ನ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯಗಳ ಹಬ್ಬ ಮತ್ತು ಕಿಸಾನ್ ಮೇಳ-2024 ಕಾರ್ಯಕ್ರಮವನ್ನು ಉಧ್ಘಾಟಿಸಿ ಅವರು ಮಾತನಾಡಿದರು.
ಇಂದಿನ ದಿನಗಳಲ್ಲಿ ಜನರು ಫಾಸ್ಟ್ ಫುಡ್ ಮೊರೆ ಹೋಗುತ್ತಿದ್ದಾರೆ. ಇದರಿಂದ ಆರೋಗ್ಯ ಕೆಡುತ್ತಿದೆ. ನಾವು ತಿನ್ನುವ ಆಹಾರ ಗುಣಮಟ್ಟದಾಗಿರಬೇಕು. ಸಿರಿಧಾನ್ಯಗಳು ಹೆಚ್ಚು ಹೆಚ್ಚು ಬಳಸುವುದರಿಂದ ಪೌಷ್ಟಿಕಾಂಶವುಳ್ಳ ಆಹಾರ ನಮ್ಮ ದೇಹ ಸೇರಿ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಸಚಿವರು ಹೇಳಿದರು.
ಚಿಕ್ಕಬಳ್ಳಾಪುರ ಲೋಕಸಭಾ ಸಂಸದರಾದ ಬಿ.ಎನ್ ಬಚ್ಚೇಗೌಡ ಅವರು ಮಾತನಾಡಿ, ಸಿರಿಧಾನ್ಯಗಳನ್ನು ಬೆಳೆಯಲು ರೈತರಿಗೆ ಹೆಚ್ಚಿನ ಪ್ರೋತ್ಸಾಹ ಅಗತ್ಯ, ಲಾಭದಾಯಕ ಬೆಳೆಗಳ ಬಗ್ಗೆ ರೈತರು ಹೆಚ್ಚಿನ ಗಮನವಹಿಸುತ್ತಾರೆ, ಸರ್ಕಾರದಿಂದ ವಿವಿಧ ಯೋಜನೆಗಳ ಮೂಲಕ ಮಾಹಿತಿ ನೀಡಿ ಸಿರಿಧಾನ್ಯಗಳಗಳನ್ನು ಬೆಳೆಯಲು ಪ್ರೋತ್ಸಾಹಿಸಿ ಬೆಂಬಲಿಸಬೇಕು ಎಂದು ಹೇಳಿದರು.
ಮೇಳದಲ್ಲಿ ರೈತರಿಗೆ ಅವಶ್ಯವಿರುವ ಬೇಸಾಯಕ್ಕೆ ಸಂಬಂಧಿಸಿದ ಮಾಹಿತಿಯನ್ನು ಕೃಷಿ ಇಲಾಖೆ ವತಿಯಿಂದ ನೀಡಲಾಯಿತು, ವಿವಿಧ ತಳಿಯ ಕೃಷಿ ಉತ್ಪನ್ನಗಳು, ಯಂತ್ರೋಪಕರಣಗಳ ವಸ್ತು ಪ್ರದರ್ಶನ ಏರ್ಪಡಿಲಾಗಿತ್ತು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…