Categories: ಕೋಲಾರ

ಸಿರಿಧಾನ್ಯ ಬೆಳೆಗಳಿಗೆ ಸರ್ಕಾರದ ಪೋತ್ಸಾಹವನ್ನು ಸದುಪಯೋಗಪಡಿಸಿಕೊಳ್ಳಿ: ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸುಮಾ

ಕೋಲಾರ: ಸಿರಿಧಾನ್ಯ ಉತ್ಪನ್ನಗಳನ್ನು ಬೆಳೆಯಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹೆಚ್ಚಿನ ಪ್ರಮಾಣದಲ್ಲಿ ಆದ್ಯತೆ ನೀಡುತ್ತಿದ್ದು, ಇದರ ಸದುಪಯೋಗವನ್ನು ರೈತರು ಪಡೆಯುವಂತಾಗಬೇಕು ಎಂದು ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸುಮಾ ತಿಳಿಸಿದರು.

ನಗರದ ಟೇಕಲ್ ರಸ್ತೆಯಲ್ಲಿ ಶನಿವಾರ ಅಂತರಗಂಗೆ ಸಿರಿಧಾನ್ಯ ರೈತ ಉತ್ಪಾದಕರ ಸಂಸ್ಥೆ ವತಿಯಿಂದ ಸಿರಿಧಾನ್ಯ ಉಪಯೋಗದ ಮಹತ್ವ ಕುರಿತಾದ ಉಪನ್ಯಾಸವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಿರಿಧಾನ್ಯಗಳ ಬೆಳೆಯಲು ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಲಾಗುತ್ತಾ ಇದೆ. ರೈತರಿಂದ ರೈತರಿಗಾಗಿ ಎನ್ನುವ ಉದ್ದೇಶದಿಂದ ಸರ್ಕಾರಗಳು ಪೋತ್ಸಾಹಿಸಲಾಗುತ್ತಾ ಇದ್ದು, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ರೈತರಲ್ಲಿ ಈ ಬಗ್ಗೆ ವ್ಯಾಪಕವಾಗಿ ಜಾಗೃತಿ ಸಹ ಮೂಡಿಸಲಾಗುತ್ತಾ ಇದೆ. ಸರಕಾರದಿಂದ ನೀಡುವ ಸೌಲಭ್ಯಗಳನ್ನು ಪಡೆದು ಗುಣಮಟ್ಟದ ಪರಿಕರಗಳನ್ನು ಬಳಸಿ ಉತ್ಪಾದನೆ ಮಾಡಿ ಮಾದರಿಯ ರೈತರಾಗಬೇಕಾಗಿದೆ ಎಂದರು.

ದೇಶದ ಪ್ರತಿಯೊಬ್ಬ ಮನುಷ್ಯನ ಆರೋಗ್ಯದ ದೃಷ್ಟಿಯಿಂದ ಸಿರಿಧಾನ್ಯಗಳನ್ನೇ ಬಳಸುವಂತಾಗಬೇಕು ಇದರಿಂದಾಗಿಯೇ ಆರೋಗ್ಯವು ವೃದ್ಧಿಯಾಗುತ್ತದೆ ಜೊತೆಗೆ ಅನ್ನದಾತರಿಗೆ ಹೆಚ್ಚಿನ ಪ್ರಮಾಣದಲ್ಲಿ ಆದಾಯವು ಸಿಗಲಿದೆ ಹೊರ ದೇಶದಲ್ಲಿ ಸಹ ಹೆಚ್ಚಿನ ಸಿರಿಧಾನ್ಯಕ್ಕೆ  ಬೇಡಿಕೆ ಇದೆ ದೇಶಕ್ಕೆ ಮಾದರಿಯಾಗುವ ರೀತಿಯಲ್ಲಿ ಬೆಳೆಗಳನ್ನು ಬೆಳೆಯಬೇಕು ಇದಕ್ಕೆ ಇಲಾಖೆಯ ಸಂಪೂರ್ಣ ಸಹಕಾರ ಇದ್ದೇ ಇರುತ್ತದೆ ಎಂದರು.

ಈ ಸಂದರ್ಭದಲ್ಲಿ ರಾಜ್ಯ ಬೀಜ ನಿಗಮದ ನಿರ್ದೇಶಕ ಡಿ.ಎಲ್ ನಾಗರಾಜ್ ಮಾತನಾಡಿ, ಸಿರಿಧಾನ್ಯಗಳನ್ನು ಸುಮಾರು 50 ವರ್ಷಗಳ ಹಿಂದೆಯೇ ಬೆಳೆಯುತ್ತಾ ಇದ್ದರು ಆದರೆ ಅ ದಿನಗಳಲ್ಲಿ ಬಡವರ ಆಹಾರವಾಗಿತ್ತು ಇವತ್ತು ಶ್ರೀಮಂತರ ಆಹಾರವಾಗಿದೆ ಅಷ್ಟೇ ವ್ಯತ್ಯಾಸ ಇವತ್ತು ರೈತರು ಬೆಳೆಯುವ ಪ್ರತಿಯೊಂದು ಬೆಳೆಗೂ ರಸಾಯನಿಕ ಗೊಬ್ಬರಗಳ ತರಕಾರಿಗಳಿಂದ ಆರೋಗ್ಯ ಕೆಟ್ಟಿದೆ ನಮ್ಮ  ಮುಂದಿನ ಭವಿಷ್ಯಕ್ಕಾಗಿ ಸಿರಿಧಾನ್ಯಗಳನ್ನು ಬೆಳೆದು ಅದನ್ನು ಉತ್ತೇಜಿಸುವಂತಾಗಬೇಕು ಎಂದರು

ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆಯ ಪರಮೇಶ್, ಎಪಿ ಮಾಸ್ ಯೋಜನಾ ನಿರ್ದೇಶಕ ವಿನಾಯಕ ರೆಡ್ಡಿ, ಅಮರನಾರಾಯಣ ತೋಟಗಾರಿಕೆ ಸಂಸ್ಥೆಯ ಈರಪ್ಪರೆಡ್ಡಿ, ರೇಷ್ಮೆ ಉತ್ಪಾದಕರ ಸಂಸ್ಥೆಯ ಶಂಕರರೆಡ್ಡಿ, ಅಂತರಗಂಗ ಸಿರಿಧಾನ್ಯ ಸಂಸ್ಥೆಯ ಅಧ್ಯಕ್ಷ ಕೀರ್ತಿ ನಾರಾಯಣ, ಉಪಾಧ್ಯಕ್ಷ ನಂದೀಶ್ವರ್, ನಿರ್ದೇಶಕರಾದ ಜನಪನಹಳ್ಳಿ ಆನಂದ್, ಮಣಿ, ರೂಪಶ್ರೀ, ಹರೀಶ್, ಪುಟ್ಟಮ್ಮ, ಸತೀಶ್, ಸೌಂದರ್ಯ, ಮುಂತಾದವರು ಇದ್ದರು

Ramesh Babu

Journalist

Recent Posts

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

44 minutes ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

2 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

3 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

4 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

13 hours ago

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

22 hours ago