Categories: ಕೋಲಾರ

ಸಿರಿಧಾನ್ಯ ಬೆಳೆಗಳಿಗೆ ಸರ್ಕಾರದ ಪೋತ್ಸಾಹವನ್ನು ಸದುಪಯೋಗಪಡಿಸಿಕೊಳ್ಳಿ: ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸುಮಾ

ಕೋಲಾರ: ಸಿರಿಧಾನ್ಯ ಉತ್ಪನ್ನಗಳನ್ನು ಬೆಳೆಯಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹೆಚ್ಚಿನ ಪ್ರಮಾಣದಲ್ಲಿ ಆದ್ಯತೆ ನೀಡುತ್ತಿದ್ದು, ಇದರ ಸದುಪಯೋಗವನ್ನು ರೈತರು ಪಡೆಯುವಂತಾಗಬೇಕು ಎಂದು ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸುಮಾ ತಿಳಿಸಿದರು.

ನಗರದ ಟೇಕಲ್ ರಸ್ತೆಯಲ್ಲಿ ಶನಿವಾರ ಅಂತರಗಂಗೆ ಸಿರಿಧಾನ್ಯ ರೈತ ಉತ್ಪಾದಕರ ಸಂಸ್ಥೆ ವತಿಯಿಂದ ಸಿರಿಧಾನ್ಯ ಉಪಯೋಗದ ಮಹತ್ವ ಕುರಿತಾದ ಉಪನ್ಯಾಸವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಿರಿಧಾನ್ಯಗಳ ಬೆಳೆಯಲು ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಲಾಗುತ್ತಾ ಇದೆ. ರೈತರಿಂದ ರೈತರಿಗಾಗಿ ಎನ್ನುವ ಉದ್ದೇಶದಿಂದ ಸರ್ಕಾರಗಳು ಪೋತ್ಸಾಹಿಸಲಾಗುತ್ತಾ ಇದ್ದು, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ರೈತರಲ್ಲಿ ಈ ಬಗ್ಗೆ ವ್ಯಾಪಕವಾಗಿ ಜಾಗೃತಿ ಸಹ ಮೂಡಿಸಲಾಗುತ್ತಾ ಇದೆ. ಸರಕಾರದಿಂದ ನೀಡುವ ಸೌಲಭ್ಯಗಳನ್ನು ಪಡೆದು ಗುಣಮಟ್ಟದ ಪರಿಕರಗಳನ್ನು ಬಳಸಿ ಉತ್ಪಾದನೆ ಮಾಡಿ ಮಾದರಿಯ ರೈತರಾಗಬೇಕಾಗಿದೆ ಎಂದರು.

ದೇಶದ ಪ್ರತಿಯೊಬ್ಬ ಮನುಷ್ಯನ ಆರೋಗ್ಯದ ದೃಷ್ಟಿಯಿಂದ ಸಿರಿಧಾನ್ಯಗಳನ್ನೇ ಬಳಸುವಂತಾಗಬೇಕು ಇದರಿಂದಾಗಿಯೇ ಆರೋಗ್ಯವು ವೃದ್ಧಿಯಾಗುತ್ತದೆ ಜೊತೆಗೆ ಅನ್ನದಾತರಿಗೆ ಹೆಚ್ಚಿನ ಪ್ರಮಾಣದಲ್ಲಿ ಆದಾಯವು ಸಿಗಲಿದೆ ಹೊರ ದೇಶದಲ್ಲಿ ಸಹ ಹೆಚ್ಚಿನ ಸಿರಿಧಾನ್ಯಕ್ಕೆ  ಬೇಡಿಕೆ ಇದೆ ದೇಶಕ್ಕೆ ಮಾದರಿಯಾಗುವ ರೀತಿಯಲ್ಲಿ ಬೆಳೆಗಳನ್ನು ಬೆಳೆಯಬೇಕು ಇದಕ್ಕೆ ಇಲಾಖೆಯ ಸಂಪೂರ್ಣ ಸಹಕಾರ ಇದ್ದೇ ಇರುತ್ತದೆ ಎಂದರು.

ಈ ಸಂದರ್ಭದಲ್ಲಿ ರಾಜ್ಯ ಬೀಜ ನಿಗಮದ ನಿರ್ದೇಶಕ ಡಿ.ಎಲ್ ನಾಗರಾಜ್ ಮಾತನಾಡಿ, ಸಿರಿಧಾನ್ಯಗಳನ್ನು ಸುಮಾರು 50 ವರ್ಷಗಳ ಹಿಂದೆಯೇ ಬೆಳೆಯುತ್ತಾ ಇದ್ದರು ಆದರೆ ಅ ದಿನಗಳಲ್ಲಿ ಬಡವರ ಆಹಾರವಾಗಿತ್ತು ಇವತ್ತು ಶ್ರೀಮಂತರ ಆಹಾರವಾಗಿದೆ ಅಷ್ಟೇ ವ್ಯತ್ಯಾಸ ಇವತ್ತು ರೈತರು ಬೆಳೆಯುವ ಪ್ರತಿಯೊಂದು ಬೆಳೆಗೂ ರಸಾಯನಿಕ ಗೊಬ್ಬರಗಳ ತರಕಾರಿಗಳಿಂದ ಆರೋಗ್ಯ ಕೆಟ್ಟಿದೆ ನಮ್ಮ  ಮುಂದಿನ ಭವಿಷ್ಯಕ್ಕಾಗಿ ಸಿರಿಧಾನ್ಯಗಳನ್ನು ಬೆಳೆದು ಅದನ್ನು ಉತ್ತೇಜಿಸುವಂತಾಗಬೇಕು ಎಂದರು

ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆಯ ಪರಮೇಶ್, ಎಪಿ ಮಾಸ್ ಯೋಜನಾ ನಿರ್ದೇಶಕ ವಿನಾಯಕ ರೆಡ್ಡಿ, ಅಮರನಾರಾಯಣ ತೋಟಗಾರಿಕೆ ಸಂಸ್ಥೆಯ ಈರಪ್ಪರೆಡ್ಡಿ, ರೇಷ್ಮೆ ಉತ್ಪಾದಕರ ಸಂಸ್ಥೆಯ ಶಂಕರರೆಡ್ಡಿ, ಅಂತರಗಂಗ ಸಿರಿಧಾನ್ಯ ಸಂಸ್ಥೆಯ ಅಧ್ಯಕ್ಷ ಕೀರ್ತಿ ನಾರಾಯಣ, ಉಪಾಧ್ಯಕ್ಷ ನಂದೀಶ್ವರ್, ನಿರ್ದೇಶಕರಾದ ಜನಪನಹಳ್ಳಿ ಆನಂದ್, ಮಣಿ, ರೂಪಶ್ರೀ, ಹರೀಶ್, ಪುಟ್ಟಮ್ಮ, ಸತೀಶ್, ಸೌಂದರ್ಯ, ಮುಂತಾದವರು ಇದ್ದರು

Ramesh Babu

Journalist

Recent Posts

ನಾಳೆ ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾ ವಿದ್ಯಾಲಯದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ|| ಬಿ.ಆರ್. ಅಂಬೇಡ್ಕರ್‌ ಅವರ 135ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಆಯೋಜನೆ

ಲೋಕಸೇವಾನಿರತ ಶ್ರೀ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾ ಸಂಸ್ಥೆ (ರಿ), ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾ ವಿದ್ಯಾಲಯ ವತಿಯಿಂದ ಸಂವಿಧಾನ…

4 hours ago

ವ್ಯಕ್ತಿಯೋರ್ವ ನೇಣಿಗೆ ಶರಣು

  ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಸಾದುಮಠದಲ್ಲಿ ನಡೆದಿದೆ.. ಊರ ಹೊರವಲಯದಲ್ಲಿರುವ ಹಲಸಿನ ಮರಕ್ಕೆ…

4 hours ago

ತಿಂಗಳಾಂತ್ಯಕ್ಕೆ ಮೊದಲ ಬಗರ್ ಹುಕುಂ ಸಮಿತಿ ಸಭೆ – ಶಾಸಕ ಧೀರಜ್ ಮುನಿರಾಜು

ಇದೇ ಏಪ್ರಿಲ್ ತಿಂಗಳಾಂತ್ಯಕ್ಕೆ ರೈತರಿಗೆ ಭೂ ಮಂಜೂರು ಮಾಡುವ ಬಗರ್ ಹುಕುಂ ಸಮತಿ ಸಭೆಯನ್ನು ಮಾಡಲಾಗುವುದು, ಸಭೆಯಲ್ಲಿ ಕನಿಷ್ಟ 100…

5 hours ago

ಭೂ ಮಾಪನ ಕಾರ್ಯ ಸ್ಥಗಿತ, ರೈತರ ಆಕ್ರೋಶ: ಪರ್ಯಾಯ ವ್ಯವಸ್ಥೆ ಮಾಡುವಂತೆ ಒತ್ತಾಯ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ಪರವಾನಗಿ ಭೂ ಮಾಪಕರು ಎರಡು ತಿಂಗಳಿಂದ ಮುಷ್ಕರ ಹೂಡಿರುವುದರಿಂದ ಭೂ ಮಾಪನ ಇಲಾಖೆಯ…

6 hours ago

ಮಹಿಳೆಯರ ಸಬಲೀಕರಣಕ್ಕೆ ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆ ಜಾರಿ- ಬಿಜೆಪಿ ರಾಜ್ಯ ವಕ್ತಾರರಾದ ಅಶ್ವಿನಿ ಶಂಕರ್

ಕೇಂದ್ರ ಸರ್ಕಾರ ಕಳೆದ ಒಂದು ದಶಕದಿಂದ ವಿವಿಧ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಒಂದೊಂದೆ ಹೆಜ್ಜೆ ಇಟ್ಟುಕೊಂಡು ಬರುತ್ತಿದೆ ಎಂದು…

7 hours ago

ಆಶಾ ಭೋಸ್ಲೆ…..ಸುಮಾರು 12000ಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿಯಾಗಿದ್ದವರು- ಅವರಿಗೆ ‌ಭಾವಪೂರ್ಣ ಶ್ರದ್ಧಾಂಜಲಿ……

ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…

17 hours ago