Categories: ಕೋಲಾರ

ಸಿರಿಧಾನ್ಯ ಬೆಳೆಗಳಿಗೆ ಸರ್ಕಾರದ ಪೋತ್ಸಾಹವನ್ನು ಸದುಪಯೋಗಪಡಿಸಿಕೊಳ್ಳಿ: ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸುಮಾ

ಕೋಲಾರ: ಸಿರಿಧಾನ್ಯ ಉತ್ಪನ್ನಗಳನ್ನು ಬೆಳೆಯಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹೆಚ್ಚಿನ ಪ್ರಮಾಣದಲ್ಲಿ ಆದ್ಯತೆ ನೀಡುತ್ತಿದ್ದು, ಇದರ ಸದುಪಯೋಗವನ್ನು ರೈತರು ಪಡೆಯುವಂತಾಗಬೇಕು ಎಂದು ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸುಮಾ ತಿಳಿಸಿದರು.

ನಗರದ ಟೇಕಲ್ ರಸ್ತೆಯಲ್ಲಿ ಶನಿವಾರ ಅಂತರಗಂಗೆ ಸಿರಿಧಾನ್ಯ ರೈತ ಉತ್ಪಾದಕರ ಸಂಸ್ಥೆ ವತಿಯಿಂದ ಸಿರಿಧಾನ್ಯ ಉಪಯೋಗದ ಮಹತ್ವ ಕುರಿತಾದ ಉಪನ್ಯಾಸವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಿರಿಧಾನ್ಯಗಳ ಬೆಳೆಯಲು ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಲಾಗುತ್ತಾ ಇದೆ. ರೈತರಿಂದ ರೈತರಿಗಾಗಿ ಎನ್ನುವ ಉದ್ದೇಶದಿಂದ ಸರ್ಕಾರಗಳು ಪೋತ್ಸಾಹಿಸಲಾಗುತ್ತಾ ಇದ್ದು, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ರೈತರಲ್ಲಿ ಈ ಬಗ್ಗೆ ವ್ಯಾಪಕವಾಗಿ ಜಾಗೃತಿ ಸಹ ಮೂಡಿಸಲಾಗುತ್ತಾ ಇದೆ. ಸರಕಾರದಿಂದ ನೀಡುವ ಸೌಲಭ್ಯಗಳನ್ನು ಪಡೆದು ಗುಣಮಟ್ಟದ ಪರಿಕರಗಳನ್ನು ಬಳಸಿ ಉತ್ಪಾದನೆ ಮಾಡಿ ಮಾದರಿಯ ರೈತರಾಗಬೇಕಾಗಿದೆ ಎಂದರು.

ದೇಶದ ಪ್ರತಿಯೊಬ್ಬ ಮನುಷ್ಯನ ಆರೋಗ್ಯದ ದೃಷ್ಟಿಯಿಂದ ಸಿರಿಧಾನ್ಯಗಳನ್ನೇ ಬಳಸುವಂತಾಗಬೇಕು ಇದರಿಂದಾಗಿಯೇ ಆರೋಗ್ಯವು ವೃದ್ಧಿಯಾಗುತ್ತದೆ ಜೊತೆಗೆ ಅನ್ನದಾತರಿಗೆ ಹೆಚ್ಚಿನ ಪ್ರಮಾಣದಲ್ಲಿ ಆದಾಯವು ಸಿಗಲಿದೆ ಹೊರ ದೇಶದಲ್ಲಿ ಸಹ ಹೆಚ್ಚಿನ ಸಿರಿಧಾನ್ಯಕ್ಕೆ  ಬೇಡಿಕೆ ಇದೆ ದೇಶಕ್ಕೆ ಮಾದರಿಯಾಗುವ ರೀತಿಯಲ್ಲಿ ಬೆಳೆಗಳನ್ನು ಬೆಳೆಯಬೇಕು ಇದಕ್ಕೆ ಇಲಾಖೆಯ ಸಂಪೂರ್ಣ ಸಹಕಾರ ಇದ್ದೇ ಇರುತ್ತದೆ ಎಂದರು.

ಈ ಸಂದರ್ಭದಲ್ಲಿ ರಾಜ್ಯ ಬೀಜ ನಿಗಮದ ನಿರ್ದೇಶಕ ಡಿ.ಎಲ್ ನಾಗರಾಜ್ ಮಾತನಾಡಿ, ಸಿರಿಧಾನ್ಯಗಳನ್ನು ಸುಮಾರು 50 ವರ್ಷಗಳ ಹಿಂದೆಯೇ ಬೆಳೆಯುತ್ತಾ ಇದ್ದರು ಆದರೆ ಅ ದಿನಗಳಲ್ಲಿ ಬಡವರ ಆಹಾರವಾಗಿತ್ತು ಇವತ್ತು ಶ್ರೀಮಂತರ ಆಹಾರವಾಗಿದೆ ಅಷ್ಟೇ ವ್ಯತ್ಯಾಸ ಇವತ್ತು ರೈತರು ಬೆಳೆಯುವ ಪ್ರತಿಯೊಂದು ಬೆಳೆಗೂ ರಸಾಯನಿಕ ಗೊಬ್ಬರಗಳ ತರಕಾರಿಗಳಿಂದ ಆರೋಗ್ಯ ಕೆಟ್ಟಿದೆ ನಮ್ಮ  ಮುಂದಿನ ಭವಿಷ್ಯಕ್ಕಾಗಿ ಸಿರಿಧಾನ್ಯಗಳನ್ನು ಬೆಳೆದು ಅದನ್ನು ಉತ್ತೇಜಿಸುವಂತಾಗಬೇಕು ಎಂದರು

ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆಯ ಪರಮೇಶ್, ಎಪಿ ಮಾಸ್ ಯೋಜನಾ ನಿರ್ದೇಶಕ ವಿನಾಯಕ ರೆಡ್ಡಿ, ಅಮರನಾರಾಯಣ ತೋಟಗಾರಿಕೆ ಸಂಸ್ಥೆಯ ಈರಪ್ಪರೆಡ್ಡಿ, ರೇಷ್ಮೆ ಉತ್ಪಾದಕರ ಸಂಸ್ಥೆಯ ಶಂಕರರೆಡ್ಡಿ, ಅಂತರಗಂಗ ಸಿರಿಧಾನ್ಯ ಸಂಸ್ಥೆಯ ಅಧ್ಯಕ್ಷ ಕೀರ್ತಿ ನಾರಾಯಣ, ಉಪಾಧ್ಯಕ್ಷ ನಂದೀಶ್ವರ್, ನಿರ್ದೇಶಕರಾದ ಜನಪನಹಳ್ಳಿ ಆನಂದ್, ಮಣಿ, ರೂಪಶ್ರೀ, ಹರೀಶ್, ಪುಟ್ಟಮ್ಮ, ಸತೀಶ್, ಸೌಂದರ್ಯ, ಮುಂತಾದವರು ಇದ್ದರು

Ramesh Babu

Journalist

Recent Posts

ನೊಂದವರ ನೋವಾ ನೋಯದವರೆತ್ತ ಬಲ್ಲರೋ……

ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…

1 hour ago

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

15 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

16 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

24 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 days ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago